<p><strong>ಬೆಂಗಳೂರು: </strong>ರಾತ್ರಿ ಹೊತ್ತಿನಲ್ಲಿ ಗಾಂಜಾ ನಶೆಯಲ್ಲಿ ಡ್ರ್ಯಾಗರ್ ಹಿಡಿದುಕೊಂಡು ಸುತ್ತಾಡಿ ಕಳ್ಳತನ ಹಾಗೂ ಸುಲಿಗೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ರಾಜಾಜಿನಗರ ಪೊಲೀಸರು ಬಂಧಿಸಿದ್ದಾರೆ.</p>.<p>‘ಪ್ರಕಾಶನಗರದ 3ನೇ ಮುಖ್ಯರಸ್ತೆ ಬಳಿ ಜುಲೈ 10ರಂದು ಬೆಳಿಗ್ಗೆ ಆರೋಪಿಗಳು ಪಲ್ಸರ್ ಬೈಕ್ನಲ್ಲಿ ಹೊರಟಿದ್ದರು. ಅನುಮಾನಗೊಂಡ ಗಸ್ತಿನಲ್ಲಿದ್ದ ಸಿಬ್ಬಂದಿ, ಆರೋಪಿಗಳನ್ನು ಬೆನ್ನಟ್ಟಿ ಹಿಡಿದು ವಿಚಾರಣೆ ನಡೆಸಿದಾಗ ಕೃತ್ಯಗಳು ಬಯಲಾಗಿವೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.</p>.<p>‘ಕಳವು, ಸುಲಿಗೆ, ಹಲ್ಲೆ ಪ್ರಕರಣಗಳಲ್ಲಿ ಆರೋಪಿಗಳು ಭಾಗಿಯಾಗಿದ್ದರು. ಅವರಿಂದ ₹ 4.15 ಲಕ್ಷ ಮೌಲ್ಯದ 7 ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ’ ಎಂದೂ ತಿಳಿಸಿವೆ.</p>.<p>ಜಾಮೀನು ಮೇಲೆ ಹೊರಬಂದಿದ್ದರು: ‘ಹಲಸೂರು ಗೇಟ್, ಸಂಪಂಗಿರಾಮನಗರ, ಚಿಕ್ಕಜಾಲ ಠಾಣೆ ವ್ಯಾಪ್ತಿಯಲ್ಲಿ ಆರೋಪಿಗಳು ಕೃತ್ಯ ಎಸಗಿದ್ದರು. ಅದೇ ಪ್ರಕರಣದಲ್ಲಿ ಜೈಲು ಸೇರಿದ್ದ ಆರೋಪಿಗಳು, ಜಾಮೀನು ಮೇಲೆ ಹೊರಬಂದು ಕೃತ್ಯ ಮುಂದುವರಿಸಿದ್ದರು’ ಎಂದು ಪೊಲೀಸ್ ಮೂಲಗಳು ಹೇಳಿವೆ.</p>.<p>‘ನಿತ್ಯವೂ ರಾತ್ರಿ ಗಾಂಜಾ ಸೇವಿಸುತ್ತಿದ್ದ ಆರೋಪಿಗಳು, ಅದರ ನಶೆಯಲ್ಲಿ ಡ್ರ್ಯಾಗರ್ ಹಿಡಿದುಕೊಂಡು ನಗರದಲ್ಲಿ ಸುತ್ತಾಡುತ್ತಿದ್ದರು. ಮನೆ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ನಿಲ್ಲಿಸುತ್ತಿದ್ದ ದ್ವಿಚಕ್ರ ವಾಹನಗಳನ್ನು ಕದಿಯುತ್ತಿದ್ದರು. ಡ್ರ್ಯಾಗರ್ ತೋರಿಸಿ ಜೀವಬೆದರಿಕೆಯೊಡ್ಡಿ ಸುಲಿಗೆ ಸಹ ಮಾಡುತ್ತಿದ್ದರು.’</p>.<p>‘ಆರೋಪಿಯೊಬ್ಬನ ವಿರುದ್ಧ ಅತ್ಯಾಚಾರ ಪ್ರಕರಣ ಸಹ ದಾಖಲಾಗಿತ್ತು. ಇವರಿಬ್ಬರ ಬಂಧನದಿಂದ ಬಸವೇಶ್ವರನಗರ ಹಾಗೂ ಯಲಹಂಕ ನ್ಯೂ ಟೌನ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ವಾಹನ ಕಳವು ಪ್ರಕರಣಗಳೂ ಪತ್ತೆಯಾಗಿವೆ’ ಎಂದೂ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ರಾತ್ರಿ ಹೊತ್ತಿನಲ್ಲಿ ಗಾಂಜಾ ನಶೆಯಲ್ಲಿ ಡ್ರ್ಯಾಗರ್ ಹಿಡಿದುಕೊಂಡು ಸುತ್ತಾಡಿ ಕಳ್ಳತನ ಹಾಗೂ ಸುಲಿಗೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ರಾಜಾಜಿನಗರ ಪೊಲೀಸರು ಬಂಧಿಸಿದ್ದಾರೆ.</p>.<p>‘ಪ್ರಕಾಶನಗರದ 3ನೇ ಮುಖ್ಯರಸ್ತೆ ಬಳಿ ಜುಲೈ 10ರಂದು ಬೆಳಿಗ್ಗೆ ಆರೋಪಿಗಳು ಪಲ್ಸರ್ ಬೈಕ್ನಲ್ಲಿ ಹೊರಟಿದ್ದರು. ಅನುಮಾನಗೊಂಡ ಗಸ್ತಿನಲ್ಲಿದ್ದ ಸಿಬ್ಬಂದಿ, ಆರೋಪಿಗಳನ್ನು ಬೆನ್ನಟ್ಟಿ ಹಿಡಿದು ವಿಚಾರಣೆ ನಡೆಸಿದಾಗ ಕೃತ್ಯಗಳು ಬಯಲಾಗಿವೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.</p>.<p>‘ಕಳವು, ಸುಲಿಗೆ, ಹಲ್ಲೆ ಪ್ರಕರಣಗಳಲ್ಲಿ ಆರೋಪಿಗಳು ಭಾಗಿಯಾಗಿದ್ದರು. ಅವರಿಂದ ₹ 4.15 ಲಕ್ಷ ಮೌಲ್ಯದ 7 ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ’ ಎಂದೂ ತಿಳಿಸಿವೆ.</p>.<p>ಜಾಮೀನು ಮೇಲೆ ಹೊರಬಂದಿದ್ದರು: ‘ಹಲಸೂರು ಗೇಟ್, ಸಂಪಂಗಿರಾಮನಗರ, ಚಿಕ್ಕಜಾಲ ಠಾಣೆ ವ್ಯಾಪ್ತಿಯಲ್ಲಿ ಆರೋಪಿಗಳು ಕೃತ್ಯ ಎಸಗಿದ್ದರು. ಅದೇ ಪ್ರಕರಣದಲ್ಲಿ ಜೈಲು ಸೇರಿದ್ದ ಆರೋಪಿಗಳು, ಜಾಮೀನು ಮೇಲೆ ಹೊರಬಂದು ಕೃತ್ಯ ಮುಂದುವರಿಸಿದ್ದರು’ ಎಂದು ಪೊಲೀಸ್ ಮೂಲಗಳು ಹೇಳಿವೆ.</p>.<p>‘ನಿತ್ಯವೂ ರಾತ್ರಿ ಗಾಂಜಾ ಸೇವಿಸುತ್ತಿದ್ದ ಆರೋಪಿಗಳು, ಅದರ ನಶೆಯಲ್ಲಿ ಡ್ರ್ಯಾಗರ್ ಹಿಡಿದುಕೊಂಡು ನಗರದಲ್ಲಿ ಸುತ್ತಾಡುತ್ತಿದ್ದರು. ಮನೆ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ನಿಲ್ಲಿಸುತ್ತಿದ್ದ ದ್ವಿಚಕ್ರ ವಾಹನಗಳನ್ನು ಕದಿಯುತ್ತಿದ್ದರು. ಡ್ರ್ಯಾಗರ್ ತೋರಿಸಿ ಜೀವಬೆದರಿಕೆಯೊಡ್ಡಿ ಸುಲಿಗೆ ಸಹ ಮಾಡುತ್ತಿದ್ದರು.’</p>.<p>‘ಆರೋಪಿಯೊಬ್ಬನ ವಿರುದ್ಧ ಅತ್ಯಾಚಾರ ಪ್ರಕರಣ ಸಹ ದಾಖಲಾಗಿತ್ತು. ಇವರಿಬ್ಬರ ಬಂಧನದಿಂದ ಬಸವೇಶ್ವರನಗರ ಹಾಗೂ ಯಲಹಂಕ ನ್ಯೂ ಟೌನ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ವಾಹನ ಕಳವು ಪ್ರಕರಣಗಳೂ ಪತ್ತೆಯಾಗಿವೆ’ ಎಂದೂ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>