<p><strong>ಬೆಂಗಳೂರು</strong>: ನಗರದ ಹಲವು ಮನೆಗಳು ಹಾಗೂ ಪೇಯಿಂಗ್ ಗೆಸ್ಟ್ಗಳ (ಪಿ.ಜಿ) ಕೊಠಡಿಗಳಿಗೆ ನುಗ್ಗಿ ಕಳ್ಳತನ ಮಾಡುತ್ತಿದ್ದ ಆರೋಪದಡಿ ಎಂ.ಎ ಪದವೀಧರ ಸೇರಿ ಮೂವರನ್ನು ಮೈಕೊಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>‘ತಮಿಳುನಾಡಿನ ತಮಿಳ್ ಸೆಲ್ವನ್ (28), ಲಕ್ಷ್ಮಣ (33) ಹಾಗೂ ಕಾರ್ತಿಕ್ (19) ಬಂಧಿತರು. ಆರೋಪಿ ಸೆಲ್ವನ್, ಎಂ.ಎ ಪದವೀಧರ. ಸೂಕ್ತ ಕೆಲಸ ಸಿಗದಿದ್ದರಿಂದ, ಕಳ್ಳತನಕ್ಕೆ ಇಳಿದಿದ್ದ. ಮೂವರು ಆರೋಪಿಗಳು, ಆಗಾಗ ನಗರಕ್ಕೆ ಬಂದು ಕಳ್ಳತನ ಮಾಡಿಕೊಂಡು ಪರಾರಿಯಾಗುತ್ತಿದ್ದರು’ ಎಂದು ಪೊಲೀಸರು ಹೇಳಿದರು.</p>.<p>‘ನಗರದಲ್ಲಿ ಸುತ್ತಾಡುತ್ತಿದ್ದ ಆರೋಪಿಗಳು, ಬಾಗಿಲು ತೆರೆದಿರುತ್ತಿದ್ದ ಮನೆಗಳು ಹಾಗೂ ಪಿ.ಜಿ ಕೊಠಡಿಗಳನ್ನು ಗುರುತಿಸುತ್ತಿದ್ದರು. ಯಾರೂ ಇಲ್ಲದ್ದನ್ನು ಖಚಿತಪಡಿಸಿಕೊಂಡು, ಒಳಗೆ ನುಗ್ಗಿ ಕಳ್ಳತನ ಮಾಡುತ್ತಿದ್ದರು.’</p>.<p>‘ಕಳ್ಳತನ ಸಂಬಂಧ ಇತ್ತೀಚೆಗೆ ಪ್ರಕರಣವೊಂದು ದಾಖಲಾಗಿತ್ತು. ತನಿಖೆ ಕೈಗೊಂಡಾಗ ಮೂವರು ಆರೋಪಿಗಳು ಸಿಕ್ಕಿಬಿದ್ದಿದ್ದಾರೆ. ಇವರಿಂದ ₹ 24 ಲಕ್ಷ ಮೌಲ್ಯದ 33 ಲ್ಯಾಪ್ಟಾಪ್ ಹಾಗೂ 40 ಮೊಬೈಲ್ ಜಪ್ತಿ ಮಾಡಲಾಗಿದೆ. ಮೂವರು ಆರೋಪಿಗಳ ವಿರುದ್ಧ ತಮಿಳುನಾಡಿನ ವಿವಿಧ ಠಾಣೆಗಳಲ್ಲೂ ಪ್ರಕರಣಗಳು ದಾಖಲಾಗಿವೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ನಗರದ ಹಲವು ಮನೆಗಳು ಹಾಗೂ ಪೇಯಿಂಗ್ ಗೆಸ್ಟ್ಗಳ (ಪಿ.ಜಿ) ಕೊಠಡಿಗಳಿಗೆ ನುಗ್ಗಿ ಕಳ್ಳತನ ಮಾಡುತ್ತಿದ್ದ ಆರೋಪದಡಿ ಎಂ.ಎ ಪದವೀಧರ ಸೇರಿ ಮೂವರನ್ನು ಮೈಕೊಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>‘ತಮಿಳುನಾಡಿನ ತಮಿಳ್ ಸೆಲ್ವನ್ (28), ಲಕ್ಷ್ಮಣ (33) ಹಾಗೂ ಕಾರ್ತಿಕ್ (19) ಬಂಧಿತರು. ಆರೋಪಿ ಸೆಲ್ವನ್, ಎಂ.ಎ ಪದವೀಧರ. ಸೂಕ್ತ ಕೆಲಸ ಸಿಗದಿದ್ದರಿಂದ, ಕಳ್ಳತನಕ್ಕೆ ಇಳಿದಿದ್ದ. ಮೂವರು ಆರೋಪಿಗಳು, ಆಗಾಗ ನಗರಕ್ಕೆ ಬಂದು ಕಳ್ಳತನ ಮಾಡಿಕೊಂಡು ಪರಾರಿಯಾಗುತ್ತಿದ್ದರು’ ಎಂದು ಪೊಲೀಸರು ಹೇಳಿದರು.</p>.<p>‘ನಗರದಲ್ಲಿ ಸುತ್ತಾಡುತ್ತಿದ್ದ ಆರೋಪಿಗಳು, ಬಾಗಿಲು ತೆರೆದಿರುತ್ತಿದ್ದ ಮನೆಗಳು ಹಾಗೂ ಪಿ.ಜಿ ಕೊಠಡಿಗಳನ್ನು ಗುರುತಿಸುತ್ತಿದ್ದರು. ಯಾರೂ ಇಲ್ಲದ್ದನ್ನು ಖಚಿತಪಡಿಸಿಕೊಂಡು, ಒಳಗೆ ನುಗ್ಗಿ ಕಳ್ಳತನ ಮಾಡುತ್ತಿದ್ದರು.’</p>.<p>‘ಕಳ್ಳತನ ಸಂಬಂಧ ಇತ್ತೀಚೆಗೆ ಪ್ರಕರಣವೊಂದು ದಾಖಲಾಗಿತ್ತು. ತನಿಖೆ ಕೈಗೊಂಡಾಗ ಮೂವರು ಆರೋಪಿಗಳು ಸಿಕ್ಕಿಬಿದ್ದಿದ್ದಾರೆ. ಇವರಿಂದ ₹ 24 ಲಕ್ಷ ಮೌಲ್ಯದ 33 ಲ್ಯಾಪ್ಟಾಪ್ ಹಾಗೂ 40 ಮೊಬೈಲ್ ಜಪ್ತಿ ಮಾಡಲಾಗಿದೆ. ಮೂವರು ಆರೋಪಿಗಳ ವಿರುದ್ಧ ತಮಿಳುನಾಡಿನ ವಿವಿಧ ಠಾಣೆಗಳಲ್ಲೂ ಪ್ರಕರಣಗಳು ದಾಖಲಾಗಿವೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>