<p><strong>ಬೆಂಗಳೂರು:</strong> ಕೊಲೆ ಪ್ರಕರಣದ ಮಹಜರು ವೇಳೆ ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ್ದ ರೌಡಿ ದಿನೇಶ್ ಅಲಿಯಾಸ್ ಕ್ರೇಜಿ ಕ್ರಷ್ ಎಂಬಾತನ ಕಾಲಿಗೆ ಇನ್ಸ್ಪೆಕ್ಟರ್ ಭರತ್ ಗುಂಡು ಹಾರಿಸಿದ್ದಾರೆ.</p>.<p>’ಅಶೋಕನಗರ ಠಾಣೆ ವ್ಯಾಪ್ತಿಯಲ್ಲಿ ರವಿಮರ್ಮ್ ಅಲಿಯಾಸ್ ಅಪ್ಪು (29) ಎಂಬುವರನ್ನು ಏಪ್ರಿಲ್ 20ರಂದು ಕೊಲೆ ಮಾಡಲಾಗಿತ್ತು. ತಲೆಮರೆಸಿಕೊಂಡಿದ್ದ ದಿನೇಶ್ ಸೇರಿದಂತೆ ಆರು ಆರೋಪಿಗಳನ್ನು ಶನಿವಾರ ಬಂಧಿಸಲಾಗಿತ್ತು’ ಎಂದು ಪೊಲೀಸರು ಹೇಳಿದರು.</p>.<p>‘ಕೃತ್ಯಕ್ಕೆ ಬಳಸಿದ್ದ ಮಾರಕಾಸ್ತ್ರಗಳನ್ನು ಜಪ್ತಿ ಮಾಡಲು ಹಾಗೂ ಮಹಜರು ನಡೆಸಲು ಆರೋಪಿ ದಿನೇಶ್ನನ್ನು ಲ್ಯಾಂಗ್ಫೋರ್ಡ್ ರಸ್ತೆಯಲ್ಲಿರುವ ಕ್ರಿಶ್ಚಿಯನ್ ಸೆಮೆಟ್ರಿಗೆ ಭಾನುವಾರ ಕರೆದೊಯ್ಯಲಾಗಿತ್ತು.’</p>.<p>‘ಮುಚ್ಚಿಟ್ಟಿದ್ದ ಮಾರಕಾಸ್ತ್ರ ಹುಡುಕಿಕೊಟ್ಟಿದ್ದ ಆರೋಪಿ ದಿನೇಶ್, ಅದೇ ಮಾರಕಾಸ್ತ್ರದಿಂದ ಕಾನ್ಸ್ಟೆಬಲ್ ವಸಂತ್ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ್ದ. ಅದೇ ಸಂದರ್ಭದಲ್ಲಿ ಇನ್ಸ್ಪೆಕ್ಟರ್ ಭರತ್, ಆರೋಪಿ ಕಾಲಿಗೆ ಗುಂಡು ಹಾರಿಸಿ ಸೆರೆ ಹಿಡಿದಿದ್ದಾರೆ’ ಎಂದೂ ಪೊಲೀಸರು ತಿಳಿಸಿದರು.</p>.<p>‘ಗಾಯಗೊಂಡಿರುವ ದಿನೇಶ್ನನ್ನು ಸೇಂಟ್ ಫಿಲೋಮಿನಾ ಆಸ್ಪತ್ರೆಗೆ ಸೇರಿಸಲಾಗಿದೆ. ಕಾನ್ಸ್ಟೆಬಲ್ ವಸಂತ್ ಅವರನ್ನೂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ’ ಎಂದೂ ಹೇಳಿದರು.</p>.<p>ರೌಡಿ ಪಟ್ಟಿಯಲ್ಲಿ ದಿನೇಶ್: ‘ಬಂಧಿತ ಆರೋಪಿ ದಿನೇಶ್ ಹೆಸರು ರೌಡಿ ಪಟ್ಟಿಯಲ್ಲಿದೆ. ಹಲವು ವರ್ಷಗಳಿಂದ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಿದ್ದ ಆತ, ಹಳೇ ವೈಷಮ್ಯದಿಂದಾಗಿ ಸಹಚರರ ಜೊತೆ ಸೇರಿ ಅಪ್ಪು ಅವರನ್ನು ಕೊಂದಿದ್ದ’ ಎಂದೂ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕೊಲೆ ಪ್ರಕರಣದ ಮಹಜರು ವೇಳೆ ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ್ದ ರೌಡಿ ದಿನೇಶ್ ಅಲಿಯಾಸ್ ಕ್ರೇಜಿ ಕ್ರಷ್ ಎಂಬಾತನ ಕಾಲಿಗೆ ಇನ್ಸ್ಪೆಕ್ಟರ್ ಭರತ್ ಗುಂಡು ಹಾರಿಸಿದ್ದಾರೆ.</p>.<p>’ಅಶೋಕನಗರ ಠಾಣೆ ವ್ಯಾಪ್ತಿಯಲ್ಲಿ ರವಿಮರ್ಮ್ ಅಲಿಯಾಸ್ ಅಪ್ಪು (29) ಎಂಬುವರನ್ನು ಏಪ್ರಿಲ್ 20ರಂದು ಕೊಲೆ ಮಾಡಲಾಗಿತ್ತು. ತಲೆಮರೆಸಿಕೊಂಡಿದ್ದ ದಿನೇಶ್ ಸೇರಿದಂತೆ ಆರು ಆರೋಪಿಗಳನ್ನು ಶನಿವಾರ ಬಂಧಿಸಲಾಗಿತ್ತು’ ಎಂದು ಪೊಲೀಸರು ಹೇಳಿದರು.</p>.<p>‘ಕೃತ್ಯಕ್ಕೆ ಬಳಸಿದ್ದ ಮಾರಕಾಸ್ತ್ರಗಳನ್ನು ಜಪ್ತಿ ಮಾಡಲು ಹಾಗೂ ಮಹಜರು ನಡೆಸಲು ಆರೋಪಿ ದಿನೇಶ್ನನ್ನು ಲ್ಯಾಂಗ್ಫೋರ್ಡ್ ರಸ್ತೆಯಲ್ಲಿರುವ ಕ್ರಿಶ್ಚಿಯನ್ ಸೆಮೆಟ್ರಿಗೆ ಭಾನುವಾರ ಕರೆದೊಯ್ಯಲಾಗಿತ್ತು.’</p>.<p>‘ಮುಚ್ಚಿಟ್ಟಿದ್ದ ಮಾರಕಾಸ್ತ್ರ ಹುಡುಕಿಕೊಟ್ಟಿದ್ದ ಆರೋಪಿ ದಿನೇಶ್, ಅದೇ ಮಾರಕಾಸ್ತ್ರದಿಂದ ಕಾನ್ಸ್ಟೆಬಲ್ ವಸಂತ್ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ್ದ. ಅದೇ ಸಂದರ್ಭದಲ್ಲಿ ಇನ್ಸ್ಪೆಕ್ಟರ್ ಭರತ್, ಆರೋಪಿ ಕಾಲಿಗೆ ಗುಂಡು ಹಾರಿಸಿ ಸೆರೆ ಹಿಡಿದಿದ್ದಾರೆ’ ಎಂದೂ ಪೊಲೀಸರು ತಿಳಿಸಿದರು.</p>.<p>‘ಗಾಯಗೊಂಡಿರುವ ದಿನೇಶ್ನನ್ನು ಸೇಂಟ್ ಫಿಲೋಮಿನಾ ಆಸ್ಪತ್ರೆಗೆ ಸೇರಿಸಲಾಗಿದೆ. ಕಾನ್ಸ್ಟೆಬಲ್ ವಸಂತ್ ಅವರನ್ನೂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ’ ಎಂದೂ ಹೇಳಿದರು.</p>.<p>ರೌಡಿ ಪಟ್ಟಿಯಲ್ಲಿ ದಿನೇಶ್: ‘ಬಂಧಿತ ಆರೋಪಿ ದಿನೇಶ್ ಹೆಸರು ರೌಡಿ ಪಟ್ಟಿಯಲ್ಲಿದೆ. ಹಲವು ವರ್ಷಗಳಿಂದ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಿದ್ದ ಆತ, ಹಳೇ ವೈಷಮ್ಯದಿಂದಾಗಿ ಸಹಚರರ ಜೊತೆ ಸೇರಿ ಅಪ್ಪು ಅವರನ್ನು ಕೊಂದಿದ್ದ’ ಎಂದೂ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>