<p><strong>ಬೆಂಗಳೂರು:</strong> ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯ ದೊಡ್ಡರಾಮಣ್ಣ ಮತ್ತು ಚಿಕ್ಕಣ್ಣ ಬಡಾವಣೆ ಮುಖ್ಯರಸ್ತೆಯಲ್ಲಿ ಭಾನುವಾರ ರಾತ್ರಿ ಮಾರಕಾಸ್ತ್ರಗಳನ್ನು ಬೀಸಿ, ಇಬ್ಬರ ಮೇಲೆ ಹಲ್ಲೆ ನಡೆಸಿ ಪುಂಡಾಟ ತೋರಿದ್ದ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಐದಕ್ಕೆ ಏರಿದೆ. </p>.<p>ಅಮೀನ್ ಷರೀಫ್ (24), ಸೈಯದ್ ಅರ್ಬಾಜ್ (20), ಸೈಯದ್ ಖಾದರ್ (21) ಜತೆಗೆ ಕಾನೂನು ಸಂಘರ್ಷಕ್ಕೆ ಒಳಗಾದ ಇಬ್ಬರು ಬಾಲಕರನ್ನೂ ಹೆಣ್ಣೂರು ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕರನ್ನು ಬಾಲಮಂದಿರಕ್ಕೆ ಕಳುಹಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.</p>.<p>‘ಪಟಾಕಿ ಕಿಡಿ ತಾಗಿದ್ದಕ್ಕೆ ಮಾತಿಗೆ ಮಾತು ಬೆಳೆದು ಗಲಾಟೆ ಆಗಿತ್ತು. ಆ ಸಂದರ್ಭದಲ್ಲಿ ಇಬ್ಬರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದೆವು ಎಂಬುದಾಗಿ ಆರೋಪಿಗಳು ವಿಚಾರಣೆ ವೇಳೆ ತಪ್ಪೊಪ್ಪಿಕೊಂಡಿದ್ದಾರೆ’ ಎಂದು ಪೊಲೀಸರು ಹೇಳಿದರು.</p>.<p>‘ಆ.19ರಂದು ಬೆಳಿಗ್ಗೆ ಕಿರಣ್ ಅವರು ಮನೆ ಎದುರು ಪಟಾಕಿ ಹೊಡೆಯುವಾಗ ಬೈಕ್ನಲ್ಲಿ ಬರುತ್ತಿದ್ದ ಆರೋಪಿ ಒಬ್ಬನಿಗೆ ಪಟಾಕಿ ಕಿಡಿ ತಾಗಿತ್ತು. ಇದರಿಂದ ಅಸಮಾಧಾನಗೊಂಡಿದ್ದ ಆರೋಪಿಯೊಬ್ಬ ಕಿರಣ್ ಅವರೊಂದಿಗೆ ವಾಗ್ವಾದ ನಡೆಸಿದ್ದರು. ಬಳಿಕ, ರಾತ್ರಿ 9 ಗಂಟೆ ಸುಮಾರಿಗೆ ಮಾರಕಾಸ್ತ್ರಗಳ ಸಮೇತ ಹುಡುಗರನ್ನು ಕರೆಯಿಸಿಕೊಂಡಿದ್ದರು. ನಂತರ, ಆ ಹುಡುಗರು ಕಿರಣ್ ಮೇಲೆ ಲಾಂಗ್ನಿಂದ ಹಲ್ಲೆ ನಡೆಸಿದ್ದರು. ಇದನ್ನು ತಡೆಯಲು ಬಂದಿದ್ದ ಸ್ನೇಹಿತ ಭರತ್ ಮೇಲೆಯೂ ಆರೋಪಿಗಳು ಹಲ್ಲೆ ನಡೆಸಿದ್ದರು’ ಎಂದು ಪೊಲೀಸರು ಹೇಳಿದರು.</p>.<p>‘ಆರೋಪಿಗಳ ವಿರುದ್ಧ ಶಸ್ತ್ರಾಸ್ತ್ರ ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ನ್ಯಾಯಾಲಯಕ್ಕೆ ಹಾಜರುಪಡಿಸಿ ಮೂವರು ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಆರೋಪಿಗಳಿಗೆ ಮಾರಕಾಸ್ತ್ರಗಳು ಎಲ್ಲಿ ಸಿಕ್ಕಿದವು ಎಂಬುದನ್ನು ಪತ್ತೆ ಮಾಡಲಾಗುತ್ತಿದೆ’ ಎಂದು ಪೊಲೀಸರು ಹೇಳಿದರು.</p>.<p><strong>ಆರೋಪಿಗಳು ರೌಡಿಪಟ್ಟಿಗೆ:</strong> ಆರೋಪಿಗಳು ರಸ್ತೆಯಲ್ಲಿ ಮಾರಕಾಸ್ತ್ರ ಬೀಸಿ ಭಯದ ವಾತಾವರಣ ಸೃಷ್ಟಿಸಿದ್ದರು. ಅಲ್ಲದೇ ಸಮಾಜದ ಸ್ವಾಸ್ಥ್ಯ ಹಾಳು ಮಾಡಿದ್ದಾರೆ. ಬಂಧಿತರ ಪೈಕಿ ಅಮೀನ್ ಷರೀಫ್, ಸೈಯದ್ ಅರ್ಬಾಜ್, ಸೈಯದ್ ಖಾದರ್ ಅವರನ್ನು ರೌಡಿಪಟ್ಟಿಗೆ ಸೇರಿಸಲಾಗುವುದು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯ ದೊಡ್ಡರಾಮಣ್ಣ ಮತ್ತು ಚಿಕ್ಕಣ್ಣ ಬಡಾವಣೆ ಮುಖ್ಯರಸ್ತೆಯಲ್ಲಿ ಭಾನುವಾರ ರಾತ್ರಿ ಮಾರಕಾಸ್ತ್ರಗಳನ್ನು ಬೀಸಿ, ಇಬ್ಬರ ಮೇಲೆ ಹಲ್ಲೆ ನಡೆಸಿ ಪುಂಡಾಟ ತೋರಿದ್ದ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಐದಕ್ಕೆ ಏರಿದೆ. </p>.<p>ಅಮೀನ್ ಷರೀಫ್ (24), ಸೈಯದ್ ಅರ್ಬಾಜ್ (20), ಸೈಯದ್ ಖಾದರ್ (21) ಜತೆಗೆ ಕಾನೂನು ಸಂಘರ್ಷಕ್ಕೆ ಒಳಗಾದ ಇಬ್ಬರು ಬಾಲಕರನ್ನೂ ಹೆಣ್ಣೂರು ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕರನ್ನು ಬಾಲಮಂದಿರಕ್ಕೆ ಕಳುಹಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.</p>.<p>‘ಪಟಾಕಿ ಕಿಡಿ ತಾಗಿದ್ದಕ್ಕೆ ಮಾತಿಗೆ ಮಾತು ಬೆಳೆದು ಗಲಾಟೆ ಆಗಿತ್ತು. ಆ ಸಂದರ್ಭದಲ್ಲಿ ಇಬ್ಬರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದೆವು ಎಂಬುದಾಗಿ ಆರೋಪಿಗಳು ವಿಚಾರಣೆ ವೇಳೆ ತಪ್ಪೊಪ್ಪಿಕೊಂಡಿದ್ದಾರೆ’ ಎಂದು ಪೊಲೀಸರು ಹೇಳಿದರು.</p>.<p>‘ಆ.19ರಂದು ಬೆಳಿಗ್ಗೆ ಕಿರಣ್ ಅವರು ಮನೆ ಎದುರು ಪಟಾಕಿ ಹೊಡೆಯುವಾಗ ಬೈಕ್ನಲ್ಲಿ ಬರುತ್ತಿದ್ದ ಆರೋಪಿ ಒಬ್ಬನಿಗೆ ಪಟಾಕಿ ಕಿಡಿ ತಾಗಿತ್ತು. ಇದರಿಂದ ಅಸಮಾಧಾನಗೊಂಡಿದ್ದ ಆರೋಪಿಯೊಬ್ಬ ಕಿರಣ್ ಅವರೊಂದಿಗೆ ವಾಗ್ವಾದ ನಡೆಸಿದ್ದರು. ಬಳಿಕ, ರಾತ್ರಿ 9 ಗಂಟೆ ಸುಮಾರಿಗೆ ಮಾರಕಾಸ್ತ್ರಗಳ ಸಮೇತ ಹುಡುಗರನ್ನು ಕರೆಯಿಸಿಕೊಂಡಿದ್ದರು. ನಂತರ, ಆ ಹುಡುಗರು ಕಿರಣ್ ಮೇಲೆ ಲಾಂಗ್ನಿಂದ ಹಲ್ಲೆ ನಡೆಸಿದ್ದರು. ಇದನ್ನು ತಡೆಯಲು ಬಂದಿದ್ದ ಸ್ನೇಹಿತ ಭರತ್ ಮೇಲೆಯೂ ಆರೋಪಿಗಳು ಹಲ್ಲೆ ನಡೆಸಿದ್ದರು’ ಎಂದು ಪೊಲೀಸರು ಹೇಳಿದರು.</p>.<p>‘ಆರೋಪಿಗಳ ವಿರುದ್ಧ ಶಸ್ತ್ರಾಸ್ತ್ರ ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ನ್ಯಾಯಾಲಯಕ್ಕೆ ಹಾಜರುಪಡಿಸಿ ಮೂವರು ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಆರೋಪಿಗಳಿಗೆ ಮಾರಕಾಸ್ತ್ರಗಳು ಎಲ್ಲಿ ಸಿಕ್ಕಿದವು ಎಂಬುದನ್ನು ಪತ್ತೆ ಮಾಡಲಾಗುತ್ತಿದೆ’ ಎಂದು ಪೊಲೀಸರು ಹೇಳಿದರು.</p>.<p><strong>ಆರೋಪಿಗಳು ರೌಡಿಪಟ್ಟಿಗೆ:</strong> ಆರೋಪಿಗಳು ರಸ್ತೆಯಲ್ಲಿ ಮಾರಕಾಸ್ತ್ರ ಬೀಸಿ ಭಯದ ವಾತಾವರಣ ಸೃಷ್ಟಿಸಿದ್ದರು. ಅಲ್ಲದೇ ಸಮಾಜದ ಸ್ವಾಸ್ಥ್ಯ ಹಾಳು ಮಾಡಿದ್ದಾರೆ. ಬಂಧಿತರ ಪೈಕಿ ಅಮೀನ್ ಷರೀಫ್, ಸೈಯದ್ ಅರ್ಬಾಜ್, ಸೈಯದ್ ಖಾದರ್ ಅವರನ್ನು ರೌಡಿಪಟ್ಟಿಗೆ ಸೇರಿಸಲಾಗುವುದು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>