<p><strong>ಬೆಂಗಳೂರು:</strong> ಸೆಬಿ ಕಂಪನಿಯ ಹಣಕಾಸು ವಿಭಾಗದ ಅಧಿಕಾರಿ ಎಂದು ಹೇಳಿ ವ್ಯಕ್ತಿಯೊಬ್ಬರಿಗೆ ಕರೆ ಮಾಡಿದ್ದ ಸೈಬರ್ ವಂಚಕರು ಹೂಡಿಕೆ ನೆಪದಲ್ಲಿ ₹35 ಲಕ್ಷ ವಂಚಿಸಿದ್ದಾರೆ. ಈ ಸಂಬಂಧ ಬೇಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಆಂಧ್ರಪ್ರದೇಶದ ಸತೀಶ್ ಹಣ ಕಳೆದುಕೊಂಡವರು. ಸತೀಶ್ ಅವರು ನಗರದ ಖಾಸಗಿ ಕಂಪನಿಯಲ್ಲಿ ವ್ಯವಸ್ಥಾಪಕರಾಗಿ ಕೆಲಸ ಮಾಡುತ್ತಿದ್ದಾರೆ.</p>.<p>ಷೇರು ಮಾರುಕಟ್ಟೆಯಲ್ಲಿ ಹೂಡಿಕೆಯಲ್ಲಿ ಸತೀಶ್ ಅವರು ಆಸಕ್ತಿ ಹೊಂದಿದ್ದರು. ಅದನ್ನು ಅರಿತಿದ್ದ ಸೈಬರ್ ವಂಚಕರು, ಸೆಬಿ ಸಂಸ್ಥೆಯಿಂದ ಕರೆ ಮಾಡುತ್ತಿರುವುದಾಗಿ ತಿಳಿಸಿ, ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ಬರಲಿದೆ ಎಂಬುದಾಗಿ ನಂಬಿಸಿದ್ದರು. ಆರಂಭದಲ್ಲಿ ಡಿಮ್ಯಾಟ್ ಖಾತೆಯಿಂದ ₹2.5 ಲಕ್ಷ ಹೂಡಿಕೆ ಮಾಡಿಸಿಕೊಂಡಿದ್ದರು ಎಂದು ಪೊಲೀಸರು ಹೇಳಿದರು.</p>.<p>ಎರಡನೇ ಬಾರಿ ದೂರುದಾರರಿಗೆ ಕರೆ ಮಾಡಿ ‘ನಿಮ್ಮ ಡಿಮ್ಯಾಟ್ ಖಾತೆಯನ್ನು ನಾವೇ ನಿರ್ವಹಣೆ ಮಾಡುತ್ತೇವೆ, ಹಣ ನೀಡಿದರೆ ಹೆಚ್ಚಿನ ಪ್ರಮಾಣದಲ್ಲಿ ಲಾಭ ಮಾಡಿ, ಕೊಡಲಾಗುವುದು’ ಎಂದು ವಂಚಕರು ನಂಬಿಸಿದ್ದರು. ವಂಚಕರ ಮಾತು ನಂಬಿದ್ದ ಸತೀಶ್ ಅವರು, ಆರಂಭದಲ್ಲಿ ₹20 ಲಕ್ಷ ವರ್ಗಾವಣೆ ಮಾಡಿದ್ದರು. ಕೆಲವು ತಿಂಗಳು ಕಳೆದರೂ ಲಾಭಾಂಶ ನೀಡಿರಲಿಲ್ಲ. ಸತೀಶ್ ಅವರು ಕರೆ ಮಾಡಿ ಪ್ರಶ್ನಿಸಿದ್ದರು. ಮತ್ತಷ್ಟು ಹೂಡಿಕೆ ಮಾಡುವಂತೆ ವಂಚಕರು ಬೇಡಿಕೆ ಇಟ್ಟಿದ್ದರು. ವಂಚಕರ ಮಾತು ನಂಬಿದ ದೂರುದಾರರು ಮತ್ತೊಮ್ಮೆ ₹13.4 ಲಕ್ಷ ವರ್ಗಾವಣೆ ಮಾಡಿದ್ದರು. ಅದಾದ ಮೇಲೆ ವಂಚನೆ ನಡೆದಿರುವುದು ಅರಿವಿಗೆ ಬಂದು ದೂರು ನೀಡಿದ್ದಾರೆ ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಸೆಬಿ ಕಂಪನಿಯ ಹಣಕಾಸು ವಿಭಾಗದ ಅಧಿಕಾರಿ ಎಂದು ಹೇಳಿ ವ್ಯಕ್ತಿಯೊಬ್ಬರಿಗೆ ಕರೆ ಮಾಡಿದ್ದ ಸೈಬರ್ ವಂಚಕರು ಹೂಡಿಕೆ ನೆಪದಲ್ಲಿ ₹35 ಲಕ್ಷ ವಂಚಿಸಿದ್ದಾರೆ. ಈ ಸಂಬಂಧ ಬೇಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಆಂಧ್ರಪ್ರದೇಶದ ಸತೀಶ್ ಹಣ ಕಳೆದುಕೊಂಡವರು. ಸತೀಶ್ ಅವರು ನಗರದ ಖಾಸಗಿ ಕಂಪನಿಯಲ್ಲಿ ವ್ಯವಸ್ಥಾಪಕರಾಗಿ ಕೆಲಸ ಮಾಡುತ್ತಿದ್ದಾರೆ.</p>.<p>ಷೇರು ಮಾರುಕಟ್ಟೆಯಲ್ಲಿ ಹೂಡಿಕೆಯಲ್ಲಿ ಸತೀಶ್ ಅವರು ಆಸಕ್ತಿ ಹೊಂದಿದ್ದರು. ಅದನ್ನು ಅರಿತಿದ್ದ ಸೈಬರ್ ವಂಚಕರು, ಸೆಬಿ ಸಂಸ್ಥೆಯಿಂದ ಕರೆ ಮಾಡುತ್ತಿರುವುದಾಗಿ ತಿಳಿಸಿ, ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ಬರಲಿದೆ ಎಂಬುದಾಗಿ ನಂಬಿಸಿದ್ದರು. ಆರಂಭದಲ್ಲಿ ಡಿಮ್ಯಾಟ್ ಖಾತೆಯಿಂದ ₹2.5 ಲಕ್ಷ ಹೂಡಿಕೆ ಮಾಡಿಸಿಕೊಂಡಿದ್ದರು ಎಂದು ಪೊಲೀಸರು ಹೇಳಿದರು.</p>.<p>ಎರಡನೇ ಬಾರಿ ದೂರುದಾರರಿಗೆ ಕರೆ ಮಾಡಿ ‘ನಿಮ್ಮ ಡಿಮ್ಯಾಟ್ ಖಾತೆಯನ್ನು ನಾವೇ ನಿರ್ವಹಣೆ ಮಾಡುತ್ತೇವೆ, ಹಣ ನೀಡಿದರೆ ಹೆಚ್ಚಿನ ಪ್ರಮಾಣದಲ್ಲಿ ಲಾಭ ಮಾಡಿ, ಕೊಡಲಾಗುವುದು’ ಎಂದು ವಂಚಕರು ನಂಬಿಸಿದ್ದರು. ವಂಚಕರ ಮಾತು ನಂಬಿದ್ದ ಸತೀಶ್ ಅವರು, ಆರಂಭದಲ್ಲಿ ₹20 ಲಕ್ಷ ವರ್ಗಾವಣೆ ಮಾಡಿದ್ದರು. ಕೆಲವು ತಿಂಗಳು ಕಳೆದರೂ ಲಾಭಾಂಶ ನೀಡಿರಲಿಲ್ಲ. ಸತೀಶ್ ಅವರು ಕರೆ ಮಾಡಿ ಪ್ರಶ್ನಿಸಿದ್ದರು. ಮತ್ತಷ್ಟು ಹೂಡಿಕೆ ಮಾಡುವಂತೆ ವಂಚಕರು ಬೇಡಿಕೆ ಇಟ್ಟಿದ್ದರು. ವಂಚಕರ ಮಾತು ನಂಬಿದ ದೂರುದಾರರು ಮತ್ತೊಮ್ಮೆ ₹13.4 ಲಕ್ಷ ವರ್ಗಾವಣೆ ಮಾಡಿದ್ದರು. ಅದಾದ ಮೇಲೆ ವಂಚನೆ ನಡೆದಿರುವುದು ಅರಿವಿಗೆ ಬಂದು ದೂರು ನೀಡಿದ್ದಾರೆ ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>