<p><strong>ಬೆಂಗಳೂರು</strong>: ದಕ್ಷಿಣ ನಗರ ಪಾಲಿಕೆ ವ್ಯಾಪ್ತಿಯಲ್ಲಿ 6 ತಿಂಗಳಲ್ಲಿ 218 ಒಣ, ಅಪಾಯಕಾರಿ ಮರ ಹಾಗೂ 1,623 ರೆಂಬೆಗಳ ತೆರವು ಮಾಡಲಾಗಿದೆ ಎಂದು ಆಯುಕ್ತ ಕೆ.ಎನ್. ರಮೇಶ್ ತಿಳಿಸಿದ್ದಾರೆ.</p>.<p>ಜಯನಗರ-1 ಮತ್ತು ಬೊಮ್ಮನಹಳ್ಳಿ-2 ವಲಯ ವ್ಯಾಪ್ತಿಯಲ್ಲಿ ರಸ್ತೆಬದಿ, ಸರ್ಕಾರಿ ಜಾಗಗಳಲ್ಲಿ ಒಣಗಿರುವ ಮತ್ತು ಅಪಾಯಕಾರಿ ಸ್ಥಿತಿಯಲ್ಲಿರುವ ಮರಗಳು ಹಾಗೂ ರೆಂಬೆ ಕೊಂಬೆಗಳನ್ನು ತೆರವುಗೊಳಿಸಲಾಯಿತು. </p>.<p>ಜಯನಗರ, ಪದ್ಮನಾಭನಗರ, ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ಹಾಗೂ ಹೆಮ್ಮಿಗೆಪುರ, ರಾಜರಾಜೇಶ್ವರಿನಗರ ಭಾಗಗಳಲ್ಲಿ 62 ಒಣಗಿರುವ ಮರ, 581 ಒಣಗಿರುವ ಕೊಂಬೆಗಳು ಹಾಗೂ 56 ಅಪಾಯಕಾರಿ ಮರ, 486 ಅಪಾಯಕಾರಿ ಕೊಂಬೆಗಳನ್ನು ತೆರವುಗೊಳಿಸಲಾಗಿದೆ.</p>.<p>ಬೊಮ್ಮನಹಳ್ಳಿ, ಬಿಟಿಎಂ ಲೇಔಟ್ ವಿಧಾನಸಭಾ ಕ್ಷೇತ್ರ ಹಾಗೂ ಬೆಳ್ಳಂದೂರು ಭಾಗಗಳಲ್ಲಿ 130 ಒಣಗಿರುವ ಮರ, 895 ಒಣಗಿರುವ ರೆಂಬೆಗಳು ಹಾಗೂ 88 ಅಪಾಯಕಾರಿ ಮರಗಳನ್ನು, 728 ಅಪಾಯಕಾರಿ ರೆಂಬೆಗಳನ್ನು ತೆರವುಗೊಳಿಸಲಾಯಿತು ಎಂದು ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ದಕ್ಷಿಣ ನಗರ ಪಾಲಿಕೆ ವ್ಯಾಪ್ತಿಯಲ್ಲಿ 6 ತಿಂಗಳಲ್ಲಿ 218 ಒಣ, ಅಪಾಯಕಾರಿ ಮರ ಹಾಗೂ 1,623 ರೆಂಬೆಗಳ ತೆರವು ಮಾಡಲಾಗಿದೆ ಎಂದು ಆಯುಕ್ತ ಕೆ.ಎನ್. ರಮೇಶ್ ತಿಳಿಸಿದ್ದಾರೆ.</p>.<p>ಜಯನಗರ-1 ಮತ್ತು ಬೊಮ್ಮನಹಳ್ಳಿ-2 ವಲಯ ವ್ಯಾಪ್ತಿಯಲ್ಲಿ ರಸ್ತೆಬದಿ, ಸರ್ಕಾರಿ ಜಾಗಗಳಲ್ಲಿ ಒಣಗಿರುವ ಮತ್ತು ಅಪಾಯಕಾರಿ ಸ್ಥಿತಿಯಲ್ಲಿರುವ ಮರಗಳು ಹಾಗೂ ರೆಂಬೆ ಕೊಂಬೆಗಳನ್ನು ತೆರವುಗೊಳಿಸಲಾಯಿತು. </p>.<p>ಜಯನಗರ, ಪದ್ಮನಾಭನಗರ, ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ಹಾಗೂ ಹೆಮ್ಮಿಗೆಪುರ, ರಾಜರಾಜೇಶ್ವರಿನಗರ ಭಾಗಗಳಲ್ಲಿ 62 ಒಣಗಿರುವ ಮರ, 581 ಒಣಗಿರುವ ಕೊಂಬೆಗಳು ಹಾಗೂ 56 ಅಪಾಯಕಾರಿ ಮರ, 486 ಅಪಾಯಕಾರಿ ಕೊಂಬೆಗಳನ್ನು ತೆರವುಗೊಳಿಸಲಾಗಿದೆ.</p>.<p>ಬೊಮ್ಮನಹಳ್ಳಿ, ಬಿಟಿಎಂ ಲೇಔಟ್ ವಿಧಾನಸಭಾ ಕ್ಷೇತ್ರ ಹಾಗೂ ಬೆಳ್ಳಂದೂರು ಭಾಗಗಳಲ್ಲಿ 130 ಒಣಗಿರುವ ಮರ, 895 ಒಣಗಿರುವ ರೆಂಬೆಗಳು ಹಾಗೂ 88 ಅಪಾಯಕಾರಿ ಮರಗಳನ್ನು, 728 ಅಪಾಯಕಾರಿ ರೆಂಬೆಗಳನ್ನು ತೆರವುಗೊಳಿಸಲಾಯಿತು ಎಂದು ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>