<p>ಬೆಂಗಳೂರು: ತಮಿಳುನಾಡಿನ ಕೃಷ್ಣಗಿರಿಯಿಂದ ನಗರಕ್ಕೆ ಜಿಂಕೆ ಕೊಂಬು ತಂದು ಮಾರಾಟ ಮಾಡುತ್ತಿದ್ದ ಮೂವರನ್ನು ಸಿಸಿಬಿಯ ಅಸಂಘಟಿತ ಅಪರಾಧ ದಳ (ಪೂರ್ವ) ಅಧಿಕಾರಿಗಳು ಬಂಧಿಸಿದ್ದಾರೆ.</p>.<p>ಸಂಜೀವಿನಿ ನಗರದ ಮುರುಳಿ (29), ಮಾರೇನಹಳ್ಳಿಯ ಮಂಜುನಾಥ (39) ಹಾಗೂ ಹನುಮಂತೇಗೌಡ ಲೇಔಟ್ನ ಕಾರ್ಯಪ್ಪ (53) ಬಂಧಿತರು.</p>.<p>ಸುಮಾರು ₹10 ಲಕ್ಷ ಮೌಲ್ಯದ ಜಿಂಕೆ ಕೊಂಬನ್ನು ನಗರದ ಚಿಕ್ಕಬಾಣಾವರ ಕಾಲೇಜುವೊಂದರ ಬಳಿ ಮಾರಾಟ ಮಾಡಲು ಮುಂದಾಗಿದ್ದರು. ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸ್ ಇನ್ಸ್ಪೆಕ್ಟರ್ ಪಿ.ಸುರೇಶ ನೇತೃತ್ವದಲ್ಲಿ ದಾಳಿ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.</p>.<p>ಕಾಡು ಪ್ರಾಣಿಗಳನ್ನು ಹತ್ಯೆಗೈದು ಈ ಕೃತ್ಯ ಮಾಡುತ್ತಿದ್ದಾರೆಯೋ ಅಥವಾ ಮೃತ ಪ್ರಾಣಿಗಳ ಕೊಂಬನ್ನು ಮಾರಾಟಕ್ಕೆ ಯತ್ನ ನಡೆಸುತ್ತಿದ್ದರೋ ಎಂಬ ಬಗ್ಗೆ ತನಿಖೆ ನಡೆಸುತ್ತಿರುವ ಪೊಲೀಸರು, ಈ ಕೃತ್ಯದ ಹಿಂದಿರುವವರ ಪತ್ತೆಗೆ ಮುಂದಾಗಿದ್ದಾರೆ.</p>.<p>ಕೆಲ ಪ್ರಾಣಿಗಳ ಕೊಂಬು ಹಾಗೂ ಚರ್ಮ ಹೆಚ್ಚಿನ ಬೆಲೆಗೆ ಮಾರಾಟ ಹಾಗೂ ವಿದೇಶಗಳಿಗೂ ಸಾಗಣೆ ಮಾಡುತ್ತಿರುವ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದಾರೆ. ಸದ್ಯ ಬಂಧಿತರ ಬಗ್ಗೆ ಹಿಂದೆ ಯಾವುದೇ ಪ್ರಕರಣಗಳು ಕಂಡು ಬಂದಿಲ್ಲ ಎಂದು ಪೊಲೀಸರು ತಿಳಿದ್ದಾರೆ.</p>.<p>ಚಿಕ್ಕಬಾಣಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260513-4-2140354246</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ತಮಿಳುನಾಡಿನ ಕೃಷ್ಣಗಿರಿಯಿಂದ ನಗರಕ್ಕೆ ಜಿಂಕೆ ಕೊಂಬು ತಂದು ಮಾರಾಟ ಮಾಡುತ್ತಿದ್ದ ಮೂವರನ್ನು ಸಿಸಿಬಿಯ ಅಸಂಘಟಿತ ಅಪರಾಧ ದಳ (ಪೂರ್ವ) ಅಧಿಕಾರಿಗಳು ಬಂಧಿಸಿದ್ದಾರೆ.</p>.<p>ಸಂಜೀವಿನಿ ನಗರದ ಮುರುಳಿ (29), ಮಾರೇನಹಳ್ಳಿಯ ಮಂಜುನಾಥ (39) ಹಾಗೂ ಹನುಮಂತೇಗೌಡ ಲೇಔಟ್ನ ಕಾರ್ಯಪ್ಪ (53) ಬಂಧಿತರು.</p>.<p>ಸುಮಾರು ₹10 ಲಕ್ಷ ಮೌಲ್ಯದ ಜಿಂಕೆ ಕೊಂಬನ್ನು ನಗರದ ಚಿಕ್ಕಬಾಣಾವರ ಕಾಲೇಜುವೊಂದರ ಬಳಿ ಮಾರಾಟ ಮಾಡಲು ಮುಂದಾಗಿದ್ದರು. ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸ್ ಇನ್ಸ್ಪೆಕ್ಟರ್ ಪಿ.ಸುರೇಶ ನೇತೃತ್ವದಲ್ಲಿ ದಾಳಿ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.</p>.<p>ಕಾಡು ಪ್ರಾಣಿಗಳನ್ನು ಹತ್ಯೆಗೈದು ಈ ಕೃತ್ಯ ಮಾಡುತ್ತಿದ್ದಾರೆಯೋ ಅಥವಾ ಮೃತ ಪ್ರಾಣಿಗಳ ಕೊಂಬನ್ನು ಮಾರಾಟಕ್ಕೆ ಯತ್ನ ನಡೆಸುತ್ತಿದ್ದರೋ ಎಂಬ ಬಗ್ಗೆ ತನಿಖೆ ನಡೆಸುತ್ತಿರುವ ಪೊಲೀಸರು, ಈ ಕೃತ್ಯದ ಹಿಂದಿರುವವರ ಪತ್ತೆಗೆ ಮುಂದಾಗಿದ್ದಾರೆ.</p>.<p>ಕೆಲ ಪ್ರಾಣಿಗಳ ಕೊಂಬು ಹಾಗೂ ಚರ್ಮ ಹೆಚ್ಚಿನ ಬೆಲೆಗೆ ಮಾರಾಟ ಹಾಗೂ ವಿದೇಶಗಳಿಗೂ ಸಾಗಣೆ ಮಾಡುತ್ತಿರುವ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದಾರೆ. ಸದ್ಯ ಬಂಧಿತರ ಬಗ್ಗೆ ಹಿಂದೆ ಯಾವುದೇ ಪ್ರಕರಣಗಳು ಕಂಡು ಬಂದಿಲ್ಲ ಎಂದು ಪೊಲೀಸರು ತಿಳಿದ್ದಾರೆ.</p>.<p>ಚಿಕ್ಕಬಾಣಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260513-4-2140354246</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>