<p><strong>ಬೆಂಗಳೂರು:</strong> ಬಾಗಲಗುಂಟೆ ಬಳಿಯ ಬಾಬಣ್ಣ ಲೇಔಟ್ನಲ್ಲಿ ಐಶ್ವರ್ಯಾ(26) ಎಂಬ ನವವಿವಾಹಿತೆ ಬುಧವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಐಶ್ವರ್ಯಾ ಅವರು ಒಂದು ತಿಂಗಳ ಹಿಂದೆ ಬಾಬಣ್ಣ ಲೇಔಟ್ ನಿವಾಸಿ ಲಿಖಿತ್ ಅವರನ್ನು ಮದುವೆ ಆಗಿದ್ದರು. ಐಶ್ವರ್ಯಾ ಅವರು ಎಂಬಿಎ ಓದಿದ್ದರು. ಲಿಖಿತ್ ಡಿಪ್ಲೊಮಾ ಓದಿ ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿದ್ದರು.</p>.<p>‘ವರದಕ್ಷಿಣೆ ಕಿರುಕುಳದಿಂದ ಬೇಸತ್ತು ಐಶ್ವರ್ಯಾ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂದು ಕುಟುಂಬಸ್ಥರು ಆರೋಪಿಸಿ ದೂರು ನೀಡಿದ್ದಾರೆ. ನೇಣು ಬಿಗಿದ ಸ್ಥಿತಿಯಲ್ಲಿ ಐಶ್ವರ್ಯಾ ಅವರ ಮೃತದೇಹ ಪತ್ತೆಯಾಗಿದೆ. </p>.<p>‘ಲಿಖಿತ್ ಮತ್ತು ಕುಟುಂಬ ಸದಸ್ಯರು ತವರು ಮನೆಯಿಂದ ಹಣ ಹಾಗೂ ಚಿನ್ನಾಭರಣ ತರುವಂತೆ ಐಶ್ವರ್ಯಾ ಅವರಿಗೆ ಕಿರುಕುಳ ನೀಡುತ್ತಿದ್ದರು. ಲಿಖಿತ್, ಸಣ್ಣಪುಟ್ಟ ವಿಚಾರಕ್ಕೂ ಪತ್ನಿಯೊಂದಿಗೆ ಜಗಳವಾಡಿ ನಿಂದಿಸುತ್ತಿದ್ದರು. ಪ್ರತಿ ವಿಚಾರದಲ್ಲೂ ತಾಯಿಯ ಆಣತಿಯಂತೆ ನಡೆದುಕೊಳ್ಳುತ್ತಿದ್ದರು. ಈ ವಿಷಯ ತಿಳಿದು ಐಶ್ವರ್ಯಾ ಕುಟುಂಬಸ್ಥರು ಬುಧವಾರ ಬೆಳಿಗ್ಗೆ ಲಿಖಿತ್ ಮನೆಗೆ ಬಂದು ಮಾತುಕತೆ ನಡೆಸಿ ಹೋಗಿದ್ದರು’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<p>ಲಿಖಿತ್ ಹಾಗೂ ಕುಟುಂಬಸ್ಥರು, ಮಗಳಿಗೆ ವರದಕ್ಷಿಣೆ ಕಿರುಕುಳ ನೀಡುತ್ತಿದ್ದರು. ಪುತ್ರಿಯನ್ನು ಕೊಲೆ ಮಾಡಿ ನೇಣು ಹಾಕಿದ್ದಾರೆ ಎಂದು ಐಶ್ವರ್ಯಾ ಅವರ ತಂದೆ ಕೃಷ್ಣ ಅವರು ದೂರು ಕೊಟ್ಟಿದ್ದಾರೆ.</p>.<p>ಕೊಲೆ, ವರದಕ್ಷಿಣೆ ಸಾವು ಪ್ರಕರಣ ದಾಖಲಿಸಿಕೊಂಡು ಲಿಖಿತ್ ಹಾಗೂ ಅವರ ಕುಟುಂಬದವರಾದ ಅರುಣಾ, ವರುಣ್ ಎಂಬುವವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬಾಗಲಗುಂಟೆ ಬಳಿಯ ಬಾಬಣ್ಣ ಲೇಔಟ್ನಲ್ಲಿ ಐಶ್ವರ್ಯಾ(26) ಎಂಬ ನವವಿವಾಹಿತೆ ಬುಧವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಐಶ್ವರ್ಯಾ ಅವರು ಒಂದು ತಿಂಗಳ ಹಿಂದೆ ಬಾಬಣ್ಣ ಲೇಔಟ್ ನಿವಾಸಿ ಲಿಖಿತ್ ಅವರನ್ನು ಮದುವೆ ಆಗಿದ್ದರು. ಐಶ್ವರ್ಯಾ ಅವರು ಎಂಬಿಎ ಓದಿದ್ದರು. ಲಿಖಿತ್ ಡಿಪ್ಲೊಮಾ ಓದಿ ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿದ್ದರು.</p>.<p>‘ವರದಕ್ಷಿಣೆ ಕಿರುಕುಳದಿಂದ ಬೇಸತ್ತು ಐಶ್ವರ್ಯಾ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂದು ಕುಟುಂಬಸ್ಥರು ಆರೋಪಿಸಿ ದೂರು ನೀಡಿದ್ದಾರೆ. ನೇಣು ಬಿಗಿದ ಸ್ಥಿತಿಯಲ್ಲಿ ಐಶ್ವರ್ಯಾ ಅವರ ಮೃತದೇಹ ಪತ್ತೆಯಾಗಿದೆ. </p>.<p>‘ಲಿಖಿತ್ ಮತ್ತು ಕುಟುಂಬ ಸದಸ್ಯರು ತವರು ಮನೆಯಿಂದ ಹಣ ಹಾಗೂ ಚಿನ್ನಾಭರಣ ತರುವಂತೆ ಐಶ್ವರ್ಯಾ ಅವರಿಗೆ ಕಿರುಕುಳ ನೀಡುತ್ತಿದ್ದರು. ಲಿಖಿತ್, ಸಣ್ಣಪುಟ್ಟ ವಿಚಾರಕ್ಕೂ ಪತ್ನಿಯೊಂದಿಗೆ ಜಗಳವಾಡಿ ನಿಂದಿಸುತ್ತಿದ್ದರು. ಪ್ರತಿ ವಿಚಾರದಲ್ಲೂ ತಾಯಿಯ ಆಣತಿಯಂತೆ ನಡೆದುಕೊಳ್ಳುತ್ತಿದ್ದರು. ಈ ವಿಷಯ ತಿಳಿದು ಐಶ್ವರ್ಯಾ ಕುಟುಂಬಸ್ಥರು ಬುಧವಾರ ಬೆಳಿಗ್ಗೆ ಲಿಖಿತ್ ಮನೆಗೆ ಬಂದು ಮಾತುಕತೆ ನಡೆಸಿ ಹೋಗಿದ್ದರು’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<p>ಲಿಖಿತ್ ಹಾಗೂ ಕುಟುಂಬಸ್ಥರು, ಮಗಳಿಗೆ ವರದಕ್ಷಿಣೆ ಕಿರುಕುಳ ನೀಡುತ್ತಿದ್ದರು. ಪುತ್ರಿಯನ್ನು ಕೊಲೆ ಮಾಡಿ ನೇಣು ಹಾಕಿದ್ದಾರೆ ಎಂದು ಐಶ್ವರ್ಯಾ ಅವರ ತಂದೆ ಕೃಷ್ಣ ಅವರು ದೂರು ಕೊಟ್ಟಿದ್ದಾರೆ.</p>.<p>ಕೊಲೆ, ವರದಕ್ಷಿಣೆ ಸಾವು ಪ್ರಕರಣ ದಾಖಲಿಸಿಕೊಂಡು ಲಿಖಿತ್ ಹಾಗೂ ಅವರ ಕುಟುಂಬದವರಾದ ಅರುಣಾ, ವರುಣ್ ಎಂಬುವವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>