<p><strong>ಬೆಂಗಳೂರು</strong>: ಅರಮನೆ ಮೈದಾನ ಬಳಿಯ ಪೆಬಲ್ ಬಾರ್ ಮೇಲೆ ದಾಳಿ ನಡೆಸಿದ ಸದಾಶಿವನಗರ ಠಾಣೆಯ ಪೊಲೀಸರು, ಡ್ರಗ್ಸ್ ಸೇವಿಸುತ್ತಿದ್ದ ಎಂಟು ಮಂದಿಯನ್ನು ಬಂಧಿಸಿದ್ದಾರೆ.</p>.<p>ಶನಿವಾರ ತಡರಾತ್ರಿ ಪಬ್ ಬಾರ್ ಮೇಲೆ ದಾಳಿ ನಡೆಸಿದಾಗ 180ಕ್ಕೂ ಹೆಚ್ಚು ಮಂದಿ ಸ್ಥಳದಲ್ಲಿದ್ದರು. ಭಾನುವಾರ ಬೆಳಗಿನ ಜಾವದವರೆಗೂ ಕಾರ್ಯಾಚರಣೆ ನಡೆಸಲಾಯಿತು ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<p>ಡ್ರಗ್ಸ್ ಸೇವಿಸಿದ್ದ ಆರೋಪದ ಮೇರೆಗೆ 16 ಮಂದಿಯನ್ನು ವಶಕ್ಕೆ ಪಡೆದು ತಪಾಸಣೆಗೆ ಒಳಪಡಿಸಲಾಯಿತು. ಅದರಲ್ಲಿ ಎಂಟು ಮಂದಿ ಡ್ರಗ್ಸ್ ತೆಗೆದುಕೊಂಡಿರುವುದು ದೃಢಪಟ್ಟಿದೆ ಎಂದು ಪೊಲೀಸರು ಹೇಳಿದರು.</p>.<p>ಆರೋಪಿಗಳ ವಿರುದ್ಧ ಎನ್ಡಿಪಿಎಸ್ ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ಆರೋಪಿಗಳು ಎಲ್ಲರೂ 25ರಿಂದ 35 ವರ್ಷದೊಳಗಿನವರು ಎಂದು ಪೊಲೀಸರು ಹೇಳಿದರು.</p>.<p>ಇಬ್ಬರ ಬಂಧನ: ಎಂಡಿಎಂಎ ಹಾಗೂ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ರಾಮಮೂರ್ತಿನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.</p>.<p>ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲ್ಲೂಕಿನ ಕರೀಮ್ ಹಾಗೂ ಅದೇ ತಾಲ್ಲೂಕಿನ ಕೊಡಿಪಾಡಿ ಗ್ರಾಮದ ಮೊಹಮ್ಮದ್ ಅಪ್ನಾನ್ ಬಂಧಿತರು.</p>.<p>ಬಂಧಿತರಿಂದ ₹80 ಸಾವಿರ ಮೌಲ್ಯದ ಮಾದಕ ವಸ್ತುಗಳನ್ನು ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ಹೇಳಿದರು.<br /><br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಅರಮನೆ ಮೈದಾನ ಬಳಿಯ ಪೆಬಲ್ ಬಾರ್ ಮೇಲೆ ದಾಳಿ ನಡೆಸಿದ ಸದಾಶಿವನಗರ ಠಾಣೆಯ ಪೊಲೀಸರು, ಡ್ರಗ್ಸ್ ಸೇವಿಸುತ್ತಿದ್ದ ಎಂಟು ಮಂದಿಯನ್ನು ಬಂಧಿಸಿದ್ದಾರೆ.</p>.<p>ಶನಿವಾರ ತಡರಾತ್ರಿ ಪಬ್ ಬಾರ್ ಮೇಲೆ ದಾಳಿ ನಡೆಸಿದಾಗ 180ಕ್ಕೂ ಹೆಚ್ಚು ಮಂದಿ ಸ್ಥಳದಲ್ಲಿದ್ದರು. ಭಾನುವಾರ ಬೆಳಗಿನ ಜಾವದವರೆಗೂ ಕಾರ್ಯಾಚರಣೆ ನಡೆಸಲಾಯಿತು ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<p>ಡ್ರಗ್ಸ್ ಸೇವಿಸಿದ್ದ ಆರೋಪದ ಮೇರೆಗೆ 16 ಮಂದಿಯನ್ನು ವಶಕ್ಕೆ ಪಡೆದು ತಪಾಸಣೆಗೆ ಒಳಪಡಿಸಲಾಯಿತು. ಅದರಲ್ಲಿ ಎಂಟು ಮಂದಿ ಡ್ರಗ್ಸ್ ತೆಗೆದುಕೊಂಡಿರುವುದು ದೃಢಪಟ್ಟಿದೆ ಎಂದು ಪೊಲೀಸರು ಹೇಳಿದರು.</p>.<p>ಆರೋಪಿಗಳ ವಿರುದ್ಧ ಎನ್ಡಿಪಿಎಸ್ ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ಆರೋಪಿಗಳು ಎಲ್ಲರೂ 25ರಿಂದ 35 ವರ್ಷದೊಳಗಿನವರು ಎಂದು ಪೊಲೀಸರು ಹೇಳಿದರು.</p>.<p>ಇಬ್ಬರ ಬಂಧನ: ಎಂಡಿಎಂಎ ಹಾಗೂ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ರಾಮಮೂರ್ತಿನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.</p>.<p>ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲ್ಲೂಕಿನ ಕರೀಮ್ ಹಾಗೂ ಅದೇ ತಾಲ್ಲೂಕಿನ ಕೊಡಿಪಾಡಿ ಗ್ರಾಮದ ಮೊಹಮ್ಮದ್ ಅಪ್ನಾನ್ ಬಂಧಿತರು.</p>.<p>ಬಂಧಿತರಿಂದ ₹80 ಸಾವಿರ ಮೌಲ್ಯದ ಮಾದಕ ವಸ್ತುಗಳನ್ನು ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ಹೇಳಿದರು.<br /><br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>