<p><strong>ಕೆ.ಆರ್.ಪುರ:</strong> ರಾಜಕಾಲುವೆ ಒತ್ತುವರಿ ಮಾಡಿಕೊಂಡು ಅನಧಿಕೃತವಾಗಿ ಬಡಾವಣೆ ನಿರ್ಮಿಸಲಾಗಿದೆ ಎಂಬ ದೂರಿಗೆ ಸಂಬಂಧಿಸಿದಂತೆ ವರದಿ ನೀಡದ ಬೆಂಗಳೂರು ಪೂರ್ವ ತಾಲೂಕು ತಹಶೀಲ್ದಾರ್ ರಾಜೀವ್ ಅವರಿಗೆ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯ ₹1 ಲಕ್ಷ ದಂಡ ವಿಧಿಸಿದೆ.</p>.<p>ಬೆಂಗಳೂರು ಪೂರ್ವ ತಾಲ್ಲೂಕಿನ ಬಿದರಹಳ್ಳಿ ಹೋಬಳಿಯ ಕಾಡುಗೋಡಿ ಗ್ರಾಮದ ಸರ್ವೆ ನಂ 299 ಹಾಗೂ ಬೆಳತ್ತೂರಿನ ಸರ್ವೆ ಸಂ 11/4ಎ , 11/4 ಬಿ ಜಮೀನಲ್ಲಿ 9 ಗುಂಟೆ ಕಾಲುವೆ ಜಾಗವನ್ನು ಅತಿಕ್ರಮಿಸಿಕೊಂಡು ಭೂ ಸಾಯಿಚರಣ ಎಂಬ ಹೆಸರಿನಲ್ಲಿ ಅಕ್ರಮ ಬಡಾವಣೆ ನಿರ್ಮಿಸಲಾಗಿದೆ ಎಂದು ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಸ್ಥಳ ಪರಿಶೀಲಿಸಿ ವರದಿ ಸಲ್ಲಿಸುವಂತೆ ನ್ಯಾಯಾಲಯ ತಹಶೀಲ್ದಾರ್ ಅವರಿಗೆ ಸೂಚನೆ ನೀಡಿ ಕಾಲಾವಕಾಶ ಕಲ್ಪಿಸಿತ್ತು. ವರದಿ ನೀಡುವಂತೆ ನ್ಯಾಯಾಲಯ ನಿರ್ದೇಶನ ನೀಡಿದ್ದರೂ ತಹಶೀಲ್ದಾರ್ ರಾಜೀವ್ ವರದಿ ಸಲ್ಲಿಸಿರಲಿಲ್ಲ. ಈ ಕಾರಣಕ್ಕೆ ದಂಡ ವಿಧಿಸಿ, ಜೂನ್ 23ರಂದು ಖುದ್ದು ಹಾಜರಾಗುವಂತೆ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯ ಕೆ.ಆರ್.ಪುರ ಠಾಣಾಧಿಕಾರಿಗಳಿಗೆ ವಾರಂಟ್ ರವಾನಿಸಿದೆ.</p>.<p>‘ತಹಶೀಲ್ದಾರ್ಗೆ ನ್ಯಾಯಾಲಯ ಹಲವು ಬಾರಿ ಸೂಕ್ತ ದಾಖಲೆಗಳೊಂದಿಗೆ ವರದಿ ಸಲಿಸುವಂತೆ ಸೂಚನೆ ನೀಡಿದರೂ ವರದಿ ಸಲಿಸಲಿಲ್ಲ. ಒತ್ತುವರಿದಾರರ ಜೊತೆ ತಹಶೀಲ್ದಾರ್ ಶಾಮಿಲಾಗಿ ಸರ್ಕಾರಿ ಜಮೀನು ಉಳಿಸಲು ಮನಸ್ಸು ಮಾಡುತ್ತಿಲ್ಲ’ ಎಂದು ದೂರುದಾರ ಬೆಳತ್ತೂರು ಪರಮೇಶ್ ಆರೋಪಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆ.ಆರ್.ಪುರ:</strong> ರಾಜಕಾಲುವೆ ಒತ್ತುವರಿ ಮಾಡಿಕೊಂಡು ಅನಧಿಕೃತವಾಗಿ ಬಡಾವಣೆ ನಿರ್ಮಿಸಲಾಗಿದೆ ಎಂಬ ದೂರಿಗೆ ಸಂಬಂಧಿಸಿದಂತೆ ವರದಿ ನೀಡದ ಬೆಂಗಳೂರು ಪೂರ್ವ ತಾಲೂಕು ತಹಶೀಲ್ದಾರ್ ರಾಜೀವ್ ಅವರಿಗೆ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯ ₹1 ಲಕ್ಷ ದಂಡ ವಿಧಿಸಿದೆ.</p>.<p>ಬೆಂಗಳೂರು ಪೂರ್ವ ತಾಲ್ಲೂಕಿನ ಬಿದರಹಳ್ಳಿ ಹೋಬಳಿಯ ಕಾಡುಗೋಡಿ ಗ್ರಾಮದ ಸರ್ವೆ ನಂ 299 ಹಾಗೂ ಬೆಳತ್ತೂರಿನ ಸರ್ವೆ ಸಂ 11/4ಎ , 11/4 ಬಿ ಜಮೀನಲ್ಲಿ 9 ಗುಂಟೆ ಕಾಲುವೆ ಜಾಗವನ್ನು ಅತಿಕ್ರಮಿಸಿಕೊಂಡು ಭೂ ಸಾಯಿಚರಣ ಎಂಬ ಹೆಸರಿನಲ್ಲಿ ಅಕ್ರಮ ಬಡಾವಣೆ ನಿರ್ಮಿಸಲಾಗಿದೆ ಎಂದು ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಸ್ಥಳ ಪರಿಶೀಲಿಸಿ ವರದಿ ಸಲ್ಲಿಸುವಂತೆ ನ್ಯಾಯಾಲಯ ತಹಶೀಲ್ದಾರ್ ಅವರಿಗೆ ಸೂಚನೆ ನೀಡಿ ಕಾಲಾವಕಾಶ ಕಲ್ಪಿಸಿತ್ತು. ವರದಿ ನೀಡುವಂತೆ ನ್ಯಾಯಾಲಯ ನಿರ್ದೇಶನ ನೀಡಿದ್ದರೂ ತಹಶೀಲ್ದಾರ್ ರಾಜೀವ್ ವರದಿ ಸಲ್ಲಿಸಿರಲಿಲ್ಲ. ಈ ಕಾರಣಕ್ಕೆ ದಂಡ ವಿಧಿಸಿ, ಜೂನ್ 23ರಂದು ಖುದ್ದು ಹಾಜರಾಗುವಂತೆ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯ ಕೆ.ಆರ್.ಪುರ ಠಾಣಾಧಿಕಾರಿಗಳಿಗೆ ವಾರಂಟ್ ರವಾನಿಸಿದೆ.</p>.<p>‘ತಹಶೀಲ್ದಾರ್ಗೆ ನ್ಯಾಯಾಲಯ ಹಲವು ಬಾರಿ ಸೂಕ್ತ ದಾಖಲೆಗಳೊಂದಿಗೆ ವರದಿ ಸಲಿಸುವಂತೆ ಸೂಚನೆ ನೀಡಿದರೂ ವರದಿ ಸಲಿಸಲಿಲ್ಲ. ಒತ್ತುವರಿದಾರರ ಜೊತೆ ತಹಶೀಲ್ದಾರ್ ಶಾಮಿಲಾಗಿ ಸರ್ಕಾರಿ ಜಮೀನು ಉಳಿಸಲು ಮನಸ್ಸು ಮಾಡುತ್ತಿಲ್ಲ’ ಎಂದು ದೂರುದಾರ ಬೆಳತ್ತೂರು ಪರಮೇಶ್ ಆರೋಪಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>