<p><strong>ಬೆಂಗಳೂರು</strong>: ‘ಹೆಚ್ಚುವರಿ ಸಿಬ್ಬಂದಿ, ಕಾರ್ಮಿಕರನ್ನು ನಿಯೋಜಿಸಿ ಅಂತಿಮ ಗಡುವಿನೊಳಗೆ ಈಜೀಪುರ ಮೇಲ್ಸೇತುವೆ ಕಾಮಗಾರಿ ಪೂರ್ಣಗೊಳಿಸಬೇಕು’ ಎಂದು ಜಿಬಿಎ ಮುಖ್ಯ ಆಯುಕ್ತ ಎಂ.ಮಹೇಶ್ವರರಾವ್ ಸೂಚನೆ ನೀಡಿದರು.</p>.<p>ದಕ್ಷಿಣ ನಗರಪಾಲಿಕೆ ವ್ಯಾಪ್ತಿಯಲ್ಲಿ ಕೈಗೆತ್ತಿಕೊಂಡಿರುವ ಈಜೀಪುರ ಮೇಲ್ಸೇತುವೆ ಕಾಮಗಾರಿಗೆ ಸಂಬಂಧಿಸಿ ಅಧಿಕಾರಿಗಳು, ಗುತ್ತಿಗೆದಾರರ ಜೊತೆ ಗುರುವಾರ ನಡೆದ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ಈಜೀಪುರ ಸಿಗ್ನಲ್ ಕಡೆಯಲ್ಲಿ ನಾಲ್ಕು ಗರ್ಡರ್ ಅಳವಡಿಸುವ ಕೆಲಸವನ್ನು ಬುಧವಾರ ಆರಂಭಿಸಿದ್ದು, 2 ತಿಂಗಳಲ್ಲಿ ಪೂರ್ಣಗೊಳಿಸಬೇಕು. 5 ಪೋರ್ಟಲ್ ಫ್ರೇಮ್ ಕಾರ್ಯವನ್ನು ತ್ವರಿತವಾಗಿ ಮಾಡುವ ಮೂಲಕ ಅಕ್ಟೋಬರ್ ಅಂತ್ಯದೊಳಗೆ ಕಾಮಗಾರಿ ಪೂರ್ಣಗೊಳಿಸಬೇಕು’ ಎಂದರು.</p>.<p>‘ಮಳೆಗಾಲ ಆರಂಭವಾಗುತ್ತಿದ್ದು, ಎರಡೂ ಬದಿಯ ಚರಂಡಿಗಳಲ್ಲಿ ಹೂಳು ತೆಗೆದು ನೀರು ಸರಾಗವಾಗಿ ಹರಿಯುವಂತೆ ನೋಡಿಕೊಳ್ಳಬೇಕು. ಮಳೆಗಾಲದ ವೇಳೆ ಯಾವ ಭಾಗದಲ್ಲಿಯೂ ಜಲಾವೃತವಾಗದಂತೆ ಕ್ರಮವಹಿಸಬೇಕು’ ಎಂದರು.</p>.<p>‘ಮಡಿವಾಳ ಕಡೆಯ ಸೈಡ್ರ್ಯಾಂಪ್ ಕಾಮಗಾರಿ ಸ್ಥಳದಲ್ಲಿ ಬೆಸ್ಕಾಂನ ಆರ್ಎಂಯು ಅನ್ನು ಶುಕ್ರವಾರ ಸ್ಥಳಾಂತರ ಮಾಡಬೇಕು. ಆ ಬಳಿಕ ಕೇಂದ್ರೀಯ ಸದನ ಎದುರಿನ ಮೂರು ಮರಗಳನ್ನು ನಾಲ್ಕು ದಿನಗಳ ಒಳಗೆ ಕಟಾವು ಮಾಡಿ ರ್ಯಾಂಪ್ ಕಾಮಗಾರಿ ಕೈಗೆತ್ತಿಕೊಳ್ಳಿ’ ಎಂದು ಸೂಚಿಸಿದರು.</p>.<p>‘ದೊಮ್ಮಲೂರು ಕಡೆಯ ಡೌನ್ ರ್ಯಾಂಪ್ ಕಾಮಗಾರಿ ಶೇ 70ರಷ್ಟು ಪೂರ್ಣಗೊಂಡಿದ್ದು, 15 ದಿನದ ಒಳಗೆ ಬಾಕಿ ಇರುವ ಕಾಮಗಾರಿ ಪೂರ್ಣಗೊಳಿಸಬೇಕು. ಬಳಿಕ ಸರ್ಜಾಪುರ ಕಡೆಯ ಡೌನ್ ರ್ಯಾಂಪ್ ಕಾಮಗಾರಿ ಆರಂಭಿಸಬೇಕು’ ಎಂದು ಸೂಚನೆ ನೀಡಿದರು.</p>.<p>‘2.59 ಕಿ.ಮೀ. ಉದ್ದದ ಈಜೀಪುರ ಮೇಲ್ಸೇತುವೆ ನಿರ್ಮಾಣ ಮಾಡುತ್ತಿದ್ದು, ಒಟ್ಟು 762 ಸೆಗ್ಮೆಂಟ್ಗಳ ಪೈಕಿ 731 ಸೆಗ್ಮೆಂಟ್ಗಳನ್ನು ಈಗಾಗಲೇ ಅಳವಡಿಸಲಾಗಿದೆ. ಜೂನ್ ಅಂತ್ಯದೊಳಗೆ ಸೆಗ್ಮೆಂಟ್ಗಳ ಅಳವಡಿಕೆ ಪೂರ್ಣಗೊಳ್ಳಲಿದೆ ಎಂದು ಮಾಹಿತಿ ನೀಡಲಾಯಿತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260522-4-1377484040</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಹೆಚ್ಚುವರಿ ಸಿಬ್ಬಂದಿ, ಕಾರ್ಮಿಕರನ್ನು ನಿಯೋಜಿಸಿ ಅಂತಿಮ ಗಡುವಿನೊಳಗೆ ಈಜೀಪುರ ಮೇಲ್ಸೇತುವೆ ಕಾಮಗಾರಿ ಪೂರ್ಣಗೊಳಿಸಬೇಕು’ ಎಂದು ಜಿಬಿಎ ಮುಖ್ಯ ಆಯುಕ್ತ ಎಂ.ಮಹೇಶ್ವರರಾವ್ ಸೂಚನೆ ನೀಡಿದರು.</p>.<p>ದಕ್ಷಿಣ ನಗರಪಾಲಿಕೆ ವ್ಯಾಪ್ತಿಯಲ್ಲಿ ಕೈಗೆತ್ತಿಕೊಂಡಿರುವ ಈಜೀಪುರ ಮೇಲ್ಸೇತುವೆ ಕಾಮಗಾರಿಗೆ ಸಂಬಂಧಿಸಿ ಅಧಿಕಾರಿಗಳು, ಗುತ್ತಿಗೆದಾರರ ಜೊತೆ ಗುರುವಾರ ನಡೆದ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ಈಜೀಪುರ ಸಿಗ್ನಲ್ ಕಡೆಯಲ್ಲಿ ನಾಲ್ಕು ಗರ್ಡರ್ ಅಳವಡಿಸುವ ಕೆಲಸವನ್ನು ಬುಧವಾರ ಆರಂಭಿಸಿದ್ದು, 2 ತಿಂಗಳಲ್ಲಿ ಪೂರ್ಣಗೊಳಿಸಬೇಕು. 5 ಪೋರ್ಟಲ್ ಫ್ರೇಮ್ ಕಾರ್ಯವನ್ನು ತ್ವರಿತವಾಗಿ ಮಾಡುವ ಮೂಲಕ ಅಕ್ಟೋಬರ್ ಅಂತ್ಯದೊಳಗೆ ಕಾಮಗಾರಿ ಪೂರ್ಣಗೊಳಿಸಬೇಕು’ ಎಂದರು.</p>.<p>‘ಮಳೆಗಾಲ ಆರಂಭವಾಗುತ್ತಿದ್ದು, ಎರಡೂ ಬದಿಯ ಚರಂಡಿಗಳಲ್ಲಿ ಹೂಳು ತೆಗೆದು ನೀರು ಸರಾಗವಾಗಿ ಹರಿಯುವಂತೆ ನೋಡಿಕೊಳ್ಳಬೇಕು. ಮಳೆಗಾಲದ ವೇಳೆ ಯಾವ ಭಾಗದಲ್ಲಿಯೂ ಜಲಾವೃತವಾಗದಂತೆ ಕ್ರಮವಹಿಸಬೇಕು’ ಎಂದರು.</p>.<p>‘ಮಡಿವಾಳ ಕಡೆಯ ಸೈಡ್ರ್ಯಾಂಪ್ ಕಾಮಗಾರಿ ಸ್ಥಳದಲ್ಲಿ ಬೆಸ್ಕಾಂನ ಆರ್ಎಂಯು ಅನ್ನು ಶುಕ್ರವಾರ ಸ್ಥಳಾಂತರ ಮಾಡಬೇಕು. ಆ ಬಳಿಕ ಕೇಂದ್ರೀಯ ಸದನ ಎದುರಿನ ಮೂರು ಮರಗಳನ್ನು ನಾಲ್ಕು ದಿನಗಳ ಒಳಗೆ ಕಟಾವು ಮಾಡಿ ರ್ಯಾಂಪ್ ಕಾಮಗಾರಿ ಕೈಗೆತ್ತಿಕೊಳ್ಳಿ’ ಎಂದು ಸೂಚಿಸಿದರು.</p>.<p>‘ದೊಮ್ಮಲೂರು ಕಡೆಯ ಡೌನ್ ರ್ಯಾಂಪ್ ಕಾಮಗಾರಿ ಶೇ 70ರಷ್ಟು ಪೂರ್ಣಗೊಂಡಿದ್ದು, 15 ದಿನದ ಒಳಗೆ ಬಾಕಿ ಇರುವ ಕಾಮಗಾರಿ ಪೂರ್ಣಗೊಳಿಸಬೇಕು. ಬಳಿಕ ಸರ್ಜಾಪುರ ಕಡೆಯ ಡೌನ್ ರ್ಯಾಂಪ್ ಕಾಮಗಾರಿ ಆರಂಭಿಸಬೇಕು’ ಎಂದು ಸೂಚನೆ ನೀಡಿದರು.</p>.<p>‘2.59 ಕಿ.ಮೀ. ಉದ್ದದ ಈಜೀಪುರ ಮೇಲ್ಸೇತುವೆ ನಿರ್ಮಾಣ ಮಾಡುತ್ತಿದ್ದು, ಒಟ್ಟು 762 ಸೆಗ್ಮೆಂಟ್ಗಳ ಪೈಕಿ 731 ಸೆಗ್ಮೆಂಟ್ಗಳನ್ನು ಈಗಾಗಲೇ ಅಳವಡಿಸಲಾಗಿದೆ. ಜೂನ್ ಅಂತ್ಯದೊಳಗೆ ಸೆಗ್ಮೆಂಟ್ಗಳ ಅಳವಡಿಕೆ ಪೂರ್ಣಗೊಳ್ಳಲಿದೆ ಎಂದು ಮಾಹಿತಿ ನೀಡಲಾಯಿತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260522-4-1377484040</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>