<p><strong>ಬೆಂಗಳೂರು:</strong> ಬೀದಿನಾಯಿಗಳ ದಾಳಿಗೆ ವೃದ್ಧರೊಬ್ಬರು ಮೃತಪಟ್ಟಿರುವ ಘಟನೆ ಕೊಡಿಗೆಹಳ್ಳಿ ಠಾಣಾ ವ್ಯಾಪ್ತಿಯ ಟೆಲಿಕಾಂ ಲೇಔಟ್ನಲ್ಲಿ ತಡರಾತ್ರಿ ನಡೆದಿದೆ.</p>.<p>ನಾಯಿಗಳ ದಾಳಿಯಿಂದ ತೀವ್ರವಾಗಿ ಗಾಯಗೊಂಡಿದ್ದ ಸೀತಪ್ಪ (68) ಮೃತಪಟ್ಟಿದ್ದಾರೆ.</p>.<p>ತಡರಾತ್ರಿ ಮನೆಯಿಂದ ಹೊರಬಂದಿದ್ದ ಸೀತಪ್ಪ ಅವರ ಮೇಲೆ 7-8 ಬೀದಿ ನಾಯಿಗಳು ದಾಳಿ ಮಾಡಿವೆ. ಓಡಲಾರದೆ ನೆಲಕ್ಕೆ ಬಿದ್ದ ಅವರ ಕೈ, ಕಾಲು, ಮುಖಕ್ಕೆ ನಾಯಿಗಳು ಕಚ್ಚಿ ಗಂಭೀರವಾಗಿ ಗಾಯಗೊಳಿಸಿದ್ದವು.</p>.<p>ಸಮೀಪದಲ್ಲಿದ್ದ ಗಸ್ತು ಪೊಲೀಸರು ನಾಯಿಗಳಿಂದ ಸೀತಪ್ಪ ಅವರನ್ನು ರಕ್ಷಿಸಲು ಯತ್ನಿಸಿದ್ದಾರೆ. ಅಷ್ಟರಲ್ಲಿ ಅವರು ಮೃತಪಟ್ಟಿದ್ದಾರೆ.</p>.<p>ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದೆ. ಮೃತನ ಪುತ್ರ ದೂರು ನೀಡಿದ್ದು, ಕೊಡಿಗೆಹಳ್ಳಿ ಠಾಣೆಯಲ್ಲಿ ಯುಡಿಆರ್ (ಅಸಹಜ ಸಾವು ಪ್ರಕರಣ) ವರದಿಯಾಗಿದೆ.</p>.<p>ಬೀದಿನಾಯಿ ದಾಳಿಯಿಂದ ಮೃತಪಟ್ಟ ಸೀತಪ್ಪ ಕುಟುಂಬಸ್ಥರಿಗೆ ₹1 ಲಕ್ಷ ಪರಿಹಾರ ಕೊಡುವುದಾಗಿ ಬಿಬಿಎಂಪಿ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬೀದಿನಾಯಿಗಳ ದಾಳಿಗೆ ವೃದ್ಧರೊಬ್ಬರು ಮೃತಪಟ್ಟಿರುವ ಘಟನೆ ಕೊಡಿಗೆಹಳ್ಳಿ ಠಾಣಾ ವ್ಯಾಪ್ತಿಯ ಟೆಲಿಕಾಂ ಲೇಔಟ್ನಲ್ಲಿ ತಡರಾತ್ರಿ ನಡೆದಿದೆ.</p>.<p>ನಾಯಿಗಳ ದಾಳಿಯಿಂದ ತೀವ್ರವಾಗಿ ಗಾಯಗೊಂಡಿದ್ದ ಸೀತಪ್ಪ (68) ಮೃತಪಟ್ಟಿದ್ದಾರೆ.</p>.<p>ತಡರಾತ್ರಿ ಮನೆಯಿಂದ ಹೊರಬಂದಿದ್ದ ಸೀತಪ್ಪ ಅವರ ಮೇಲೆ 7-8 ಬೀದಿ ನಾಯಿಗಳು ದಾಳಿ ಮಾಡಿವೆ. ಓಡಲಾರದೆ ನೆಲಕ್ಕೆ ಬಿದ್ದ ಅವರ ಕೈ, ಕಾಲು, ಮುಖಕ್ಕೆ ನಾಯಿಗಳು ಕಚ್ಚಿ ಗಂಭೀರವಾಗಿ ಗಾಯಗೊಳಿಸಿದ್ದವು.</p>.<p>ಸಮೀಪದಲ್ಲಿದ್ದ ಗಸ್ತು ಪೊಲೀಸರು ನಾಯಿಗಳಿಂದ ಸೀತಪ್ಪ ಅವರನ್ನು ರಕ್ಷಿಸಲು ಯತ್ನಿಸಿದ್ದಾರೆ. ಅಷ್ಟರಲ್ಲಿ ಅವರು ಮೃತಪಟ್ಟಿದ್ದಾರೆ.</p>.<p>ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದೆ. ಮೃತನ ಪುತ್ರ ದೂರು ನೀಡಿದ್ದು, ಕೊಡಿಗೆಹಳ್ಳಿ ಠಾಣೆಯಲ್ಲಿ ಯುಡಿಆರ್ (ಅಸಹಜ ಸಾವು ಪ್ರಕರಣ) ವರದಿಯಾಗಿದೆ.</p>.<p>ಬೀದಿನಾಯಿ ದಾಳಿಯಿಂದ ಮೃತಪಟ್ಟ ಸೀತಪ್ಪ ಕುಟುಂಬಸ್ಥರಿಗೆ ₹1 ಲಕ್ಷ ಪರಿಹಾರ ಕೊಡುವುದಾಗಿ ಬಿಬಿಎಂಪಿ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>