ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬೆಸ್ಕಾಂ, ಪೊಲೀಸ್ ಇಲಾಖೆ ಹಾಗೂ ಎಲೆಕ್ಟ್ರಿಕ್ ಇನ್ಸ್ಪೆಕ್ಟೊರೇಟ್ನಿಂದ ತನಿಖೆ ನಡೆಸಲಾಗುತ್ತಿದೆ. ಅಲ್ಲದೆ, ಕೆಪಿಟಿಸಿಎಲ್ನ ನಿವೃತ್ತ ಮುಖ್ಯ ಎಂಜಿನಿಯರ್, ಸಿಪಿಆರ್ಐ ಹೆಚ್ಚುವರಿ ನಿರ್ದೇಶಕರು ಸೇರಿದಂತೆ ನಾಲ್ಕು ಜನರನ್ನೊಳಗೊಂಡ ಸ್ವತಂತ್ರ ಸಮಿತಿಯನ್ನು ರಚಿಸಲಾಗಿದ್ದು, ಈ ಸಮಿತಿಯ ಮೂಲಕವೂ ತನಿಖೆ ನಡೆಸಲಾಗುತ್ತಿದೆ’ ಎಂದು ಮಾಹಿತಿ ನೀಡಿದರು.