<p><strong>ಬೆಂಗಳೂರು:</strong> ಅಕ್ರಮ ಹಾಗೂ ನಕಲಿ ಬಿಲ್ ಪ್ರಕರಣಕ್ಕೆ ಸಂಬಂಧಿಸಿದಂತೆ 310 ಎಂಜಿನಿಯರ್ಗಳಿಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನೋಟಿಸ್ ಜಾರಿ ಮಾಡಿದೆ.</p>.<p>ಬಿಬಿಎಂಪಿಯಾಗಿದ್ದಾಗ 2008–09 ಮತ್ತು 2011–12ರ ಅವಧಿ ಯಲ್ಲಿ ಗಾಂಧಿನಗರ, ಮಲ್ಲೇಶ್ವರ, ರಾಜ ರಾಜೇಶ್ವರಿನಗರ ವಿಧಾನಸಭೆ ಕ್ಷೇತ್ರಗಳ ವ್ಯಾಪ್ತಿಯಲ್ಲಿ ನಡೆದಿದ್ದ ಸಾರ್ವಜನಿಕ ಕಾಮಗಾರಿಗಳ ಬಗ್ಗೆ ತನಿಖೆ ನಡೆಸಲು ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್ ದಾಸ್ ನೇತೃತ್ವದ ಸಮಿತಿಯನ್ನು ರಚಿಸಲಾಗಿತ್ತು. ಈ ಕುರಿತು ಮೇ 13ರಂದು ಹೊರಡಿಸಿರುವ ಅಧಿಸೂಚನೆಯಲ್ಲಿ, ಕಾಮಗಾರಿ ನಡೆಯದಿದ್ದರೂ ನಕಲಿ ಬಿಲ್ಗಳನ್ನು ಸಲ್ಲಿಸಲಾಗಿದೆ ಎನ್ನಲಾಗಿದೆ.</p>.<p>ನಗರಾಭಿವೃದ್ಧಿ ಇಲಾಖೆ ಈ ಹಿಂದೆ ನೀಡಿದ್ದ ನೋಟಿಸ್ಗಳಿಗೆ ಎಂಜಿನಿಯರ್ ಗಳು ಪ್ರತಿಕ್ರಿಯಿಸಿಲ್ಲ. ಹೀಗಾಗಿ, ಅಧಿಸೂಚನೆ ಹೊರಡಿಸಿರುವ 15 ದಿನಗಳಲ್ಲಿ ಎಂಜಿನಿಯರ್ಗಳು ಪ್ರಾಧಿಕಾರದ ಮುಂದೆ ಹಾಜರಾಗಿ, ಲಿಖಿತ ಪ್ರತಿಕ್ರಿಯೆ ಸಲ್ಲಿಸಬೇಕೆಂದು ಸೂಚಿಸಲಾಗಿದೆ.</p>.<p>2008–09 ಮತ್ತು 2011–12ರ ಅವಧಿಯಲ್ಲಿ ಸಂಬಂಧಿಸಿದ ವಲಯ ಗಳಲ್ಲಿದ್ದ ಸಹಾಯಕ ಎಂಜಿನಿಯರ್, ಸಹಾಯಕ ಕಾರ್ಯಪಾಲಕ ಎಂಜಿನಿಯರ್, ಕಾರ್ಯಪಾಲಕ ಎಂಜಿನಿಯರ್ಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260516-4-1153716691</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಅಕ್ರಮ ಹಾಗೂ ನಕಲಿ ಬಿಲ್ ಪ್ರಕರಣಕ್ಕೆ ಸಂಬಂಧಿಸಿದಂತೆ 310 ಎಂಜಿನಿಯರ್ಗಳಿಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನೋಟಿಸ್ ಜಾರಿ ಮಾಡಿದೆ.</p>.<p>ಬಿಬಿಎಂಪಿಯಾಗಿದ್ದಾಗ 2008–09 ಮತ್ತು 2011–12ರ ಅವಧಿ ಯಲ್ಲಿ ಗಾಂಧಿನಗರ, ಮಲ್ಲೇಶ್ವರ, ರಾಜ ರಾಜೇಶ್ವರಿನಗರ ವಿಧಾನಸಭೆ ಕ್ಷೇತ್ರಗಳ ವ್ಯಾಪ್ತಿಯಲ್ಲಿ ನಡೆದಿದ್ದ ಸಾರ್ವಜನಿಕ ಕಾಮಗಾರಿಗಳ ಬಗ್ಗೆ ತನಿಖೆ ನಡೆಸಲು ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್ ದಾಸ್ ನೇತೃತ್ವದ ಸಮಿತಿಯನ್ನು ರಚಿಸಲಾಗಿತ್ತು. ಈ ಕುರಿತು ಮೇ 13ರಂದು ಹೊರಡಿಸಿರುವ ಅಧಿಸೂಚನೆಯಲ್ಲಿ, ಕಾಮಗಾರಿ ನಡೆಯದಿದ್ದರೂ ನಕಲಿ ಬಿಲ್ಗಳನ್ನು ಸಲ್ಲಿಸಲಾಗಿದೆ ಎನ್ನಲಾಗಿದೆ.</p>.<p>ನಗರಾಭಿವೃದ್ಧಿ ಇಲಾಖೆ ಈ ಹಿಂದೆ ನೀಡಿದ್ದ ನೋಟಿಸ್ಗಳಿಗೆ ಎಂಜಿನಿಯರ್ ಗಳು ಪ್ರತಿಕ್ರಿಯಿಸಿಲ್ಲ. ಹೀಗಾಗಿ, ಅಧಿಸೂಚನೆ ಹೊರಡಿಸಿರುವ 15 ದಿನಗಳಲ್ಲಿ ಎಂಜಿನಿಯರ್ಗಳು ಪ್ರಾಧಿಕಾರದ ಮುಂದೆ ಹಾಜರಾಗಿ, ಲಿಖಿತ ಪ್ರತಿಕ್ರಿಯೆ ಸಲ್ಲಿಸಬೇಕೆಂದು ಸೂಚಿಸಲಾಗಿದೆ.</p>.<p>2008–09 ಮತ್ತು 2011–12ರ ಅವಧಿಯಲ್ಲಿ ಸಂಬಂಧಿಸಿದ ವಲಯ ಗಳಲ್ಲಿದ್ದ ಸಹಾಯಕ ಎಂಜಿನಿಯರ್, ಸಹಾಯಕ ಕಾರ್ಯಪಾಲಕ ಎಂಜಿನಿಯರ್, ಕಾರ್ಯಪಾಲಕ ಎಂಜಿನಿಯರ್ಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260516-4-1153716691</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>