<p><strong>ಬೆಂಗಳೂರು:</strong> ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಪಿಎಸ್–95 ಬಿಎಂಟಿಸಿ, ಕೆಎಸ್ಆರ್ಟಿಸಿ ನಿವೃತ್ತ ನೌಕರರ ಸಂಘದ ಸದಸ್ಯರು ಹಾಗೂ ಆಶಾ ಕಾರ್ಯಕರ್ತೆಯರು ಶನಿವಾರ ಮಲ್ಲೇಶ್ವರದ ಸುವರ್ಣ ಭವನ ಎದುರು ಪ್ರತಿಭಟನೆ ನಡೆಸಿದರು.</p><p>ಕನಿಷ್ಠ ₹ 7,500 ಪಿಂಚಣಿ ಹಾಗೂ ಭತ್ಯೆ, ವೈದ್ಯಕೀಯ ಸೌಲಭ್ಯ ನೀಡಬೇಕು. ಇಪಿಎಸ್ ವ್ಯಾಪ್ತಿಗೆ ಬಾರದ ಹಲವು ನಿವೃತ್ತ ನೌಕರರಿಗೆ ₹ 5 ಸಾವಿರ ನೀಡಬೇಕು. ಈ ಬಗ್ಗೆ ಕೇಂದ್ರ ಸರ್ಕಾರ ಕೂಡಲೇ ನಿರ್ಧಾರ ಕೈಗೊಳ್ಳಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿದರು.</p><p>ಜನವರಿ 28ರಿಂದ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಈ ಬಾರಿಯಾದರೂ ನಿವೃತ್ತರ ಬೇಡಿಕೆ ಈಡೇರಿಸಬೇಕು. ಬೇಡಿಕೆ ಈಡೇರದಿದ್ದರೆ ಹೋರಾಟ ಮಾಡಲಾಗುವುದು. ಸುಪ್ರೀಂ ಕೋರ್ಟ್ ಆರ್.ಸಿ.ಗುಪ್ತ ಹಾಗೂ ಸುನಿಲ್ ಕುಮಾರ್ ಪ್ರಕರಣಗಳಲ್ಲಿ ನೀಡಿರುವ ತೀರ್ಪು ಅನ್ನು ಅನುಷ್ಠಾನಗೊಳಿಸಬೇಕು ಎಂದು ಒತ್ತಾಯಿಸಿದರು.</p><p>ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ಆಪ್ತ ಕಾರ್ಯದರ್ಶಿ ವೆಂಕಟೇಶ್ ಅವರು ಮನವಿ ಪತ್ರ ಸ್ವೀಕರಿಸಿದರು.</p><p>ಪ್ರತಿಭಟನೆಯಲ್ಲಿ ಸಂಘದ ಅಧ್ಯಕ್ಷ ನಂಜುಂಡೇಗೌಡ, ಪದಾಧಿಕಾರಿಗಳಾದ ಶಂಕರ್ ಕುಮಾರ್, ರಂಗನಾಥ್, ನಾಗರಾಜ್, ಮನೋಹರ್ ಹಾಗೂ ಕೃಷ್ಣಮೂರ್ತಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಪಿಎಸ್–95 ಬಿಎಂಟಿಸಿ, ಕೆಎಸ್ಆರ್ಟಿಸಿ ನಿವೃತ್ತ ನೌಕರರ ಸಂಘದ ಸದಸ್ಯರು ಹಾಗೂ ಆಶಾ ಕಾರ್ಯಕರ್ತೆಯರು ಶನಿವಾರ ಮಲ್ಲೇಶ್ವರದ ಸುವರ್ಣ ಭವನ ಎದುರು ಪ್ರತಿಭಟನೆ ನಡೆಸಿದರು.</p><p>ಕನಿಷ್ಠ ₹ 7,500 ಪಿಂಚಣಿ ಹಾಗೂ ಭತ್ಯೆ, ವೈದ್ಯಕೀಯ ಸೌಲಭ್ಯ ನೀಡಬೇಕು. ಇಪಿಎಸ್ ವ್ಯಾಪ್ತಿಗೆ ಬಾರದ ಹಲವು ನಿವೃತ್ತ ನೌಕರರಿಗೆ ₹ 5 ಸಾವಿರ ನೀಡಬೇಕು. ಈ ಬಗ್ಗೆ ಕೇಂದ್ರ ಸರ್ಕಾರ ಕೂಡಲೇ ನಿರ್ಧಾರ ಕೈಗೊಳ್ಳಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿದರು.</p><p>ಜನವರಿ 28ರಿಂದ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಈ ಬಾರಿಯಾದರೂ ನಿವೃತ್ತರ ಬೇಡಿಕೆ ಈಡೇರಿಸಬೇಕು. ಬೇಡಿಕೆ ಈಡೇರದಿದ್ದರೆ ಹೋರಾಟ ಮಾಡಲಾಗುವುದು. ಸುಪ್ರೀಂ ಕೋರ್ಟ್ ಆರ್.ಸಿ.ಗುಪ್ತ ಹಾಗೂ ಸುನಿಲ್ ಕುಮಾರ್ ಪ್ರಕರಣಗಳಲ್ಲಿ ನೀಡಿರುವ ತೀರ್ಪು ಅನ್ನು ಅನುಷ್ಠಾನಗೊಳಿಸಬೇಕು ಎಂದು ಒತ್ತಾಯಿಸಿದರು.</p><p>ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ಆಪ್ತ ಕಾರ್ಯದರ್ಶಿ ವೆಂಕಟೇಶ್ ಅವರು ಮನವಿ ಪತ್ರ ಸ್ವೀಕರಿಸಿದರು.</p><p>ಪ್ರತಿಭಟನೆಯಲ್ಲಿ ಸಂಘದ ಅಧ್ಯಕ್ಷ ನಂಜುಂಡೇಗೌಡ, ಪದಾಧಿಕಾರಿಗಳಾದ ಶಂಕರ್ ಕುಮಾರ್, ರಂಗನಾಥ್, ನಾಗರಾಜ್, ಮನೋಹರ್ ಹಾಗೂ ಕೃಷ್ಣಮೂರ್ತಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>