<p><strong>ಬೆಂಗಳೂರು</strong>: ನಗರದಲ್ಲಿನ ಮೇಲ್ಸೇತುವೆಗಳ ಕೆಳಭಾಗದ ಸ್ಥಳಗಳನ್ನು ಸೌಂದರ್ಯೀಕರಣಗೊಳಿಸಲು ಸಮಗ್ರ ಯೋಜನೆ ರೂಪಿಸುವಂತೆ ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್ ಅವರು ನಗರ ಪಾಲಿಕೆಗಳ ಅಧಿಕಾರಿಗಳಿಗೆ ಸೂಚನೆ ನೀಡಿದರು.</p>.<p>ಮೇಲ್ಸೇತುವೆಗಳ ಕೆಳಭಾಗದ ಜಾಗವನ್ನು ಅಭಿವೃದ್ಧಿಪಡಿಸಿ ಸಸಿ ನೆಡುವುದು, ತ್ಯಾಜ್ಯ ವರ್ಗಾವಣೆ ಘಟಕ ಸ್ಥಾಪನೆ ಹಾಗೂ ಪಾರ್ಕಿಂಗ್ ವ್ಯವಸ್ಥೆ ಕುರಿತಂತೆ ಅಧಿಕಾರಿಗಳೊಂದಿಗೆ ಸೋಮವಾರ ಸಭೆ ನಡೆಸಿದರು.</p>.<p>‘ಮೇಲ್ಸೇತುವೆಗಳ ಕೆಳಭಾಗದ ಪ್ರದೇಶಗಳು ಅಭಿವೃದ್ಧಿಯಾಗದೆ ನಗರದ ಸೌಂದರ್ಯಕ್ಕೆ ಧಕ್ಕೆಯುಂಟಾಗುತ್ತಿದೆ. ಪಾಲಿಕೆ ಹಾಗೂ ಬಿಡಿಎ ವತಿಯಿಂದ ನಿರ್ಮಿಸಲಾದ ಮೇಲ್ಸೇತುವೆಗಳ ಕೆಳಭಾಗದಲ್ಲಿ ಎಲ್ಲೆಲ್ಲಿ ಸೌಂದರ್ಯೀಕರಣ ಮತ್ತು ಅಭಿವೃದ್ಧಿ ಮಾಡಬಹುದೆಂಬುದರ ಪಟ್ಟಿ ಸಿದ್ಧಪಡಿಸಿ, ಸಮಗ್ರ ಯೋಜನೆ ರೂಪಿಸಬೇಕು’ ಎಂದರು.</p>.<p>ಜಿಬಿಎ ವ್ಯಾಪ್ತಿಯಲ್ಲಿ ಪಾಲಿಕೆ, ಮೆಟ್ರೊ, ಜಲಮಂಡಳಿ ಹಾಗೂ ಬಿಡಿಎ ವತಿಯಿಂದ ಸಸಿಗಳನ್ನು ನೆಟ್ಟು ಅವುಗಳ ಸಮರ್ಪಕ ಪೋಷಣೆಗೆ ಕ್ರಮವಹಿಸಬೇಕು. ಪ್ರತಿ ಇಲಾಖೆಗಳಿಗೆ ನಿಗದಿಪಡಿಸಿರುವ ಗುರಿಗಳನ್ನು ಸಾಧಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಿದರು.</p>.<p>ಜಲಮಂಡಳಿ ತನ್ನ ಎಸ್ಟಿಪಿ ಘಟಕಗಳ ಸುತ್ತಲೂ ಸಸಿ ನೆಡುವ ಯೋಜನೆ ರೂಪಿಸಬೇಕು. ರಸ್ತೆ ಬದಿ ಹಾಗೂ ಕೆರೆಗಳ ಸುತ್ತಲೂ ಬಿದಿರು ಸಸಿಗಳನ್ನು ನೆಟ್ಟು ಪೋಷಿಸಬೇಕು. ವೃಕ್ಷವನ ನಿರ್ಮಾಣ ಮಾಡಲು ಸ್ಥಳ ಗುರುತಿಸಿ, ಅದಕ್ಕೆ ತಗಲುವ ವೆಚ್ಚದ ಕುರಿತು ವರದಿ ನೀಡಬೇಕು ಎಂದು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.</p>.<p>ಐದು ನಗರ ಪಾಲಿಕೆಗಳಲ್ಲಿ ಪಾರ್ಕಿಂಗ್ ವ್ಯವಸ್ಥೆಯ ಕುರಿತು ಸಮಗ್ರ ಪರಿಶೀಲನೆ ನಡೆಸಿ, ನಿಯಮಾವಳಿಯನ್ನು ರೂಪಿಸಬೇಕು. ರಸ್ತೆ ಬದಿಯಲ್ಲಿರುವ ಖಾಲಿ ಜಾಗಗಳು ಅಥವಾ ಖಾಸಗಿ ನಿವೇಶನಗಳಲ್ಲಿ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸುವ ಸಾಧ್ಯತೆ ಕುರಿತು ಪರಿಶೀಲಿಸಬೇಕು ಎಂದರು.</p>.<p>ವಾಹನ ಟೋಯಿಂಗ್ ಮಾಡುವ ಸಲುವಾಗಿಯೇ ಪ್ರತ್ಯೇಕ ಅಧಿಕಾರಿಗಳನ್ನು ನಿಯೋಜಿಸಿ, ಅನಾಥ ವಾಹನಗಳನ್ನು ತೆರವುಗೊಳಿಸಲು ನಿರ್ದೇಶನ ನೀಡಿದರು.</p>.<p>ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಮಾತನಾಡಿ, ‘ರಸ್ತೆ ಬದಿಗಳಲ್ಲಿ ಅನಧಿಕೃತ ಪಾರ್ಕಿಂಗ್ ಹೆಚ್ಚಾಗುತ್ತಿದೆ. ಈ ಕಾರಣದಿಂದ ವಿಶೇಷ ಅಭಿಯಾನ ನಡೆಸಿ ಅನಧಿಕೃತ ಪಾರ್ಕಿಂಗ್ ವಿರುದ್ಧ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು’ ಎಂದರು.</p>.<p>ವಿಶೇಷ ಆಯುಕ್ತರಾದ ಮುನೀಶ್ ಮೌದ್ಗಿಲ್, ಡಾ. ಕೆ. ಹರೀಶ್ ಕುಮಾರ್, ಆರ್. ರಾಮಚಂದ್ರನ್, ಕಾರ್ಯದರ್ಶಿ ದೀಪಾ ಚೋಳನ್, ಬಿಡಿಎ ಆಯುಕ್ತ ಮಣಿವಣ್ಣನ್, ನಗರ ಪಾಲಿಕೆಗಳ ಆಯುಕ್ತರಾದ ರಾಜೇಂದ್ರ ಚೋಳನ್, ರಮೇಶ್ ಡಿ.ಎಸ್., ರಮೇಶ್ ಕೆ.ಎನ್., ಡಾ. ರಾಜೇಂದ್ರ ಕೆ.ವಿ., ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಸಂಸ್ಥೆಯ ಸಿಇಒ ಕರೀಗೌಡ, ನಗರ ಜಿಲ್ಲಾಧಿಕಾರಿ ಜಗದೀಶ್, ಜಲಮಂಡಳಿ ಅಧ್ಯಕ್ಷ ರಾಮಪ್ರಸಾತ್ ಮನೋಹರ್, ಮೆಟ್ರೊ ವ್ಯವಸ್ಥಾಪಕ ನಿರ್ದೇಶಕ ರವಿಶಂಕರ್, ಸಂಚಾರ ಪೊಲೀಸ್ ವಿಭಾಗದ ಜಂಟಿ ಕಮಿಷನರ್ ಕಾರ್ತಿಕ್ ರೆಡ್ಡಿ ಉಪಸ್ಥಿತರಿದ್ದರು.</p>.<p><strong>ಕೇಂದ್ರ ನಗರ ಪಾಲಿಕೆ: ಬೃಹತ್ ಸ್ವಚ್ಛತಾ ಅಭಿಯಾನ</strong></p><p>ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಸ್ವಚ್ಛತೆ ಕಾಪಾಡುವುದು, ತ್ಯಾಜ್ಯಮುಕ್ತ ನಗರಪಾಲಿಕೆ ರೂಪಿಸಲು ಹಾಗೂ ಸ್ವಚ್ಛ ಸರ್ವೇಕ್ಷಣ 2025-26ರ ಶ್ರೇಯಾಂಕ ಪಟ್ಟಿಯಲ್ಲಿ ರಾಷ್ಟ್ರ ಮಟ್ಟದಲ್ಲಿ ಉತ್ತಮ ಸ್ಥಾನಗಳಿಸಲು ‘ಬೃಹತ್ ಸ್ವಚ್ಛತಾ ಅಭಿಯಾನ’ವನ್ನು ಮಂಗಳವಾರದಿಂದ ಹಮ್ಮಿಕೊಳ್ಳಲಾಗಿದೆ.</p><p>ಬಸ್ ತಂಗುದಾಣ, ಬೆಸ್ಕಾಂನ ವಿದ್ಯುತ್ ಪರಿವರ್ತಕಗಳ (ಟಿಸಿ) ಸುತ್ತಮುತ್ತ ಸ್ವಚ್ಛತೆ ಕಾಪಾಡುವುದು, ಖಾಲಿ ನಿವೇಶನಗಳಲ್ಲಿನ ತ್ಯಾಜ್ಯ ತೆರವು, ದೇವಸ್ಥಾನಗಳ ಸುತ್ತಮುತ್ತ ಸ್ವಚ್ಛತೆ, ಪುರಾತನ/ ಐತಿಹಾಸಿಕ ಸ್ಥಳ, ಉದ್ಯಾನ ಹಾಗೂ ಆಟದ ಮೈದಾನಗಳಲ್ಲಿನ ಕಸ ತೆರವು, ಪಾದಚಾರಿ ಮೇಲ್ಸೇತುವೆಗಳು ಹಾಗೂ ಅಂಡರ್ ಪಾಸ್ಗಳು, ಬೃಹತ್ ನೀರುಗಾಲುವೆ, ಕೆರೆ, ಸಾರ್ವಜನಿಕ ಶೌಚಾಲಯ, ಮಾರುಕಟ್ಟೆ, ರಸ್ತೆ ವಿಭಜಕ, ಸರ್ಕಾರಿ ಶಾಲಾ– ಕಾಲೇಜುಗಳ ಸುತ್ತಮುತ್ತ ಸ್ವಚ್ಛಗೊಳಿಸಲಾಗುತ್ತದೆ ಎಂದು ಆಯುಕ್ತ ರಾಜೇಂದ್ರ ಚೋಳನ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ನಗರದಲ್ಲಿನ ಮೇಲ್ಸೇತುವೆಗಳ ಕೆಳಭಾಗದ ಸ್ಥಳಗಳನ್ನು ಸೌಂದರ್ಯೀಕರಣಗೊಳಿಸಲು ಸಮಗ್ರ ಯೋಜನೆ ರೂಪಿಸುವಂತೆ ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್ ಅವರು ನಗರ ಪಾಲಿಕೆಗಳ ಅಧಿಕಾರಿಗಳಿಗೆ ಸೂಚನೆ ನೀಡಿದರು.</p>.<p>ಮೇಲ್ಸೇತುವೆಗಳ ಕೆಳಭಾಗದ ಜಾಗವನ್ನು ಅಭಿವೃದ್ಧಿಪಡಿಸಿ ಸಸಿ ನೆಡುವುದು, ತ್ಯಾಜ್ಯ ವರ್ಗಾವಣೆ ಘಟಕ ಸ್ಥಾಪನೆ ಹಾಗೂ ಪಾರ್ಕಿಂಗ್ ವ್ಯವಸ್ಥೆ ಕುರಿತಂತೆ ಅಧಿಕಾರಿಗಳೊಂದಿಗೆ ಸೋಮವಾರ ಸಭೆ ನಡೆಸಿದರು.</p>.<p>‘ಮೇಲ್ಸೇತುವೆಗಳ ಕೆಳಭಾಗದ ಪ್ರದೇಶಗಳು ಅಭಿವೃದ್ಧಿಯಾಗದೆ ನಗರದ ಸೌಂದರ್ಯಕ್ಕೆ ಧಕ್ಕೆಯುಂಟಾಗುತ್ತಿದೆ. ಪಾಲಿಕೆ ಹಾಗೂ ಬಿಡಿಎ ವತಿಯಿಂದ ನಿರ್ಮಿಸಲಾದ ಮೇಲ್ಸೇತುವೆಗಳ ಕೆಳಭಾಗದಲ್ಲಿ ಎಲ್ಲೆಲ್ಲಿ ಸೌಂದರ್ಯೀಕರಣ ಮತ್ತು ಅಭಿವೃದ್ಧಿ ಮಾಡಬಹುದೆಂಬುದರ ಪಟ್ಟಿ ಸಿದ್ಧಪಡಿಸಿ, ಸಮಗ್ರ ಯೋಜನೆ ರೂಪಿಸಬೇಕು’ ಎಂದರು.</p>.<p>ಜಿಬಿಎ ವ್ಯಾಪ್ತಿಯಲ್ಲಿ ಪಾಲಿಕೆ, ಮೆಟ್ರೊ, ಜಲಮಂಡಳಿ ಹಾಗೂ ಬಿಡಿಎ ವತಿಯಿಂದ ಸಸಿಗಳನ್ನು ನೆಟ್ಟು ಅವುಗಳ ಸಮರ್ಪಕ ಪೋಷಣೆಗೆ ಕ್ರಮವಹಿಸಬೇಕು. ಪ್ರತಿ ಇಲಾಖೆಗಳಿಗೆ ನಿಗದಿಪಡಿಸಿರುವ ಗುರಿಗಳನ್ನು ಸಾಧಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಿದರು.</p>.<p>ಜಲಮಂಡಳಿ ತನ್ನ ಎಸ್ಟಿಪಿ ಘಟಕಗಳ ಸುತ್ತಲೂ ಸಸಿ ನೆಡುವ ಯೋಜನೆ ರೂಪಿಸಬೇಕು. ರಸ್ತೆ ಬದಿ ಹಾಗೂ ಕೆರೆಗಳ ಸುತ್ತಲೂ ಬಿದಿರು ಸಸಿಗಳನ್ನು ನೆಟ್ಟು ಪೋಷಿಸಬೇಕು. ವೃಕ್ಷವನ ನಿರ್ಮಾಣ ಮಾಡಲು ಸ್ಥಳ ಗುರುತಿಸಿ, ಅದಕ್ಕೆ ತಗಲುವ ವೆಚ್ಚದ ಕುರಿತು ವರದಿ ನೀಡಬೇಕು ಎಂದು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.</p>.<p>ಐದು ನಗರ ಪಾಲಿಕೆಗಳಲ್ಲಿ ಪಾರ್ಕಿಂಗ್ ವ್ಯವಸ್ಥೆಯ ಕುರಿತು ಸಮಗ್ರ ಪರಿಶೀಲನೆ ನಡೆಸಿ, ನಿಯಮಾವಳಿಯನ್ನು ರೂಪಿಸಬೇಕು. ರಸ್ತೆ ಬದಿಯಲ್ಲಿರುವ ಖಾಲಿ ಜಾಗಗಳು ಅಥವಾ ಖಾಸಗಿ ನಿವೇಶನಗಳಲ್ಲಿ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸುವ ಸಾಧ್ಯತೆ ಕುರಿತು ಪರಿಶೀಲಿಸಬೇಕು ಎಂದರು.</p>.<p>ವಾಹನ ಟೋಯಿಂಗ್ ಮಾಡುವ ಸಲುವಾಗಿಯೇ ಪ್ರತ್ಯೇಕ ಅಧಿಕಾರಿಗಳನ್ನು ನಿಯೋಜಿಸಿ, ಅನಾಥ ವಾಹನಗಳನ್ನು ತೆರವುಗೊಳಿಸಲು ನಿರ್ದೇಶನ ನೀಡಿದರು.</p>.<p>ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಮಾತನಾಡಿ, ‘ರಸ್ತೆ ಬದಿಗಳಲ್ಲಿ ಅನಧಿಕೃತ ಪಾರ್ಕಿಂಗ್ ಹೆಚ್ಚಾಗುತ್ತಿದೆ. ಈ ಕಾರಣದಿಂದ ವಿಶೇಷ ಅಭಿಯಾನ ನಡೆಸಿ ಅನಧಿಕೃತ ಪಾರ್ಕಿಂಗ್ ವಿರುದ್ಧ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು’ ಎಂದರು.</p>.<p>ವಿಶೇಷ ಆಯುಕ್ತರಾದ ಮುನೀಶ್ ಮೌದ್ಗಿಲ್, ಡಾ. ಕೆ. ಹರೀಶ್ ಕುಮಾರ್, ಆರ್. ರಾಮಚಂದ್ರನ್, ಕಾರ್ಯದರ್ಶಿ ದೀಪಾ ಚೋಳನ್, ಬಿಡಿಎ ಆಯುಕ್ತ ಮಣಿವಣ್ಣನ್, ನಗರ ಪಾಲಿಕೆಗಳ ಆಯುಕ್ತರಾದ ರಾಜೇಂದ್ರ ಚೋಳನ್, ರಮೇಶ್ ಡಿ.ಎಸ್., ರಮೇಶ್ ಕೆ.ಎನ್., ಡಾ. ರಾಜೇಂದ್ರ ಕೆ.ವಿ., ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಸಂಸ್ಥೆಯ ಸಿಇಒ ಕರೀಗೌಡ, ನಗರ ಜಿಲ್ಲಾಧಿಕಾರಿ ಜಗದೀಶ್, ಜಲಮಂಡಳಿ ಅಧ್ಯಕ್ಷ ರಾಮಪ್ರಸಾತ್ ಮನೋಹರ್, ಮೆಟ್ರೊ ವ್ಯವಸ್ಥಾಪಕ ನಿರ್ದೇಶಕ ರವಿಶಂಕರ್, ಸಂಚಾರ ಪೊಲೀಸ್ ವಿಭಾಗದ ಜಂಟಿ ಕಮಿಷನರ್ ಕಾರ್ತಿಕ್ ರೆಡ್ಡಿ ಉಪಸ್ಥಿತರಿದ್ದರು.</p>.<p><strong>ಕೇಂದ್ರ ನಗರ ಪಾಲಿಕೆ: ಬೃಹತ್ ಸ್ವಚ್ಛತಾ ಅಭಿಯಾನ</strong></p><p>ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಸ್ವಚ್ಛತೆ ಕಾಪಾಡುವುದು, ತ್ಯಾಜ್ಯಮುಕ್ತ ನಗರಪಾಲಿಕೆ ರೂಪಿಸಲು ಹಾಗೂ ಸ್ವಚ್ಛ ಸರ್ವೇಕ್ಷಣ 2025-26ರ ಶ್ರೇಯಾಂಕ ಪಟ್ಟಿಯಲ್ಲಿ ರಾಷ್ಟ್ರ ಮಟ್ಟದಲ್ಲಿ ಉತ್ತಮ ಸ್ಥಾನಗಳಿಸಲು ‘ಬೃಹತ್ ಸ್ವಚ್ಛತಾ ಅಭಿಯಾನ’ವನ್ನು ಮಂಗಳವಾರದಿಂದ ಹಮ್ಮಿಕೊಳ್ಳಲಾಗಿದೆ.</p><p>ಬಸ್ ತಂಗುದಾಣ, ಬೆಸ್ಕಾಂನ ವಿದ್ಯುತ್ ಪರಿವರ್ತಕಗಳ (ಟಿಸಿ) ಸುತ್ತಮುತ್ತ ಸ್ವಚ್ಛತೆ ಕಾಪಾಡುವುದು, ಖಾಲಿ ನಿವೇಶನಗಳಲ್ಲಿನ ತ್ಯಾಜ್ಯ ತೆರವು, ದೇವಸ್ಥಾನಗಳ ಸುತ್ತಮುತ್ತ ಸ್ವಚ್ಛತೆ, ಪುರಾತನ/ ಐತಿಹಾಸಿಕ ಸ್ಥಳ, ಉದ್ಯಾನ ಹಾಗೂ ಆಟದ ಮೈದಾನಗಳಲ್ಲಿನ ಕಸ ತೆರವು, ಪಾದಚಾರಿ ಮೇಲ್ಸೇತುವೆಗಳು ಹಾಗೂ ಅಂಡರ್ ಪಾಸ್ಗಳು, ಬೃಹತ್ ನೀರುಗಾಲುವೆ, ಕೆರೆ, ಸಾರ್ವಜನಿಕ ಶೌಚಾಲಯ, ಮಾರುಕಟ್ಟೆ, ರಸ್ತೆ ವಿಭಜಕ, ಸರ್ಕಾರಿ ಶಾಲಾ– ಕಾಲೇಜುಗಳ ಸುತ್ತಮುತ್ತ ಸ್ವಚ್ಛಗೊಳಿಸಲಾಗುತ್ತದೆ ಎಂದು ಆಯುಕ್ತ ರಾಜೇಂದ್ರ ಚೋಳನ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>