<p>ಬೆಂಗಳೂರು: ಶುಭೋದಯ ಫುಟ್ಬಾಲ್ ಕ್ಲಬ್ ತಂಡದ ಪ್ರತಿಭಾನ್ವಿತ ಆಟಗಾರ ದರ್ಶನ್ ಬಿ.ಎನ್. (25) ಅವರು ಅಲ್ಪಕಾಲದ ಅನಾರೋಗ್ಯದಿಂದ ಚಾಮರಾಜಪೇಟೆಯ ರಂಗದೊರೆ ಮೆಮೊರಿಯಲ್ ಆಸ್ಪತ್ರೆಯಲ್ಲಿ ಸೋಮವಾರ ನಿಧನರಾದರು.</p>.<p>ದರ್ಶನ್ ಅವರು ಬಿಡಿಎಫ್ಎ ‘ಸಿ’ ಡಿವಿಷನ್ ಲೀಗ್ನಲ್ಲಿ ಹೊಸಕೋಟೆ ಫುಟ್ಬಾಲ್ ಕ್ಲಬ್ ತಂಡವನ್ನು ಪ್ರತಿನಿಧಿಸಿದ್ದರು. ಮೇ 19ರಂದು ನಡೆದ ಲೀಗ್ ಪಂದ್ಯದಲ್ಲಿ ಕೊನೆಯ ಬಾರಿ ಕಣಕ್ಕಿಳಿದಿದ್ದರು.</p>.<p>ಶುಭೋದಯ ಕ್ಲಬ್ ಪರ ಕಳೆದ ಎಂಟು ವರ್ಷಗಳಿಂದ ಆಡುತ್ತಿದ್ದ ಅವರು, ಈಚೆಗೆ ವೈರಾಣು ಜ್ವರದಿಂದ ಬಳಲುತ್ತಿದ್ದರು.</p>.<p>ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕು ಅಮೃತೂರು ಮೂಲದ ದರ್ಶನ್ ಅವರ ಕುಟುಂಬವು ನಗರದ ಹನುಮಂತನಗರದಲ್ಲಿ ನೆಲಸಿತ್ತು. ಅಮೃತೂರು ಸಮೀಪದ ಗೌಡಗೆರೆಯಲ್ಲಿ ಸೋಮವಾರ ಸಂಜೆ ಅಂತ್ಯಸಂಸ್ಕಾರ ನೆರವೇರಿತು ಎಂದು ಅವರ ಕೋಚ್ ಶ್ರೀನಿವಾಸ್ ತಿಳಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260603-4-1360802654</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಶುಭೋದಯ ಫುಟ್ಬಾಲ್ ಕ್ಲಬ್ ತಂಡದ ಪ್ರತಿಭಾನ್ವಿತ ಆಟಗಾರ ದರ್ಶನ್ ಬಿ.ಎನ್. (25) ಅವರು ಅಲ್ಪಕಾಲದ ಅನಾರೋಗ್ಯದಿಂದ ಚಾಮರಾಜಪೇಟೆಯ ರಂಗದೊರೆ ಮೆಮೊರಿಯಲ್ ಆಸ್ಪತ್ರೆಯಲ್ಲಿ ಸೋಮವಾರ ನಿಧನರಾದರು.</p>.<p>ದರ್ಶನ್ ಅವರು ಬಿಡಿಎಫ್ಎ ‘ಸಿ’ ಡಿವಿಷನ್ ಲೀಗ್ನಲ್ಲಿ ಹೊಸಕೋಟೆ ಫುಟ್ಬಾಲ್ ಕ್ಲಬ್ ತಂಡವನ್ನು ಪ್ರತಿನಿಧಿಸಿದ್ದರು. ಮೇ 19ರಂದು ನಡೆದ ಲೀಗ್ ಪಂದ್ಯದಲ್ಲಿ ಕೊನೆಯ ಬಾರಿ ಕಣಕ್ಕಿಳಿದಿದ್ದರು.</p>.<p>ಶುಭೋದಯ ಕ್ಲಬ್ ಪರ ಕಳೆದ ಎಂಟು ವರ್ಷಗಳಿಂದ ಆಡುತ್ತಿದ್ದ ಅವರು, ಈಚೆಗೆ ವೈರಾಣು ಜ್ವರದಿಂದ ಬಳಲುತ್ತಿದ್ದರು.</p>.<p>ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕು ಅಮೃತೂರು ಮೂಲದ ದರ್ಶನ್ ಅವರ ಕುಟುಂಬವು ನಗರದ ಹನುಮಂತನಗರದಲ್ಲಿ ನೆಲಸಿತ್ತು. ಅಮೃತೂರು ಸಮೀಪದ ಗೌಡಗೆರೆಯಲ್ಲಿ ಸೋಮವಾರ ಸಂಜೆ ಅಂತ್ಯಸಂಸ್ಕಾರ ನೆರವೇರಿತು ಎಂದು ಅವರ ಕೋಚ್ ಶ್ರೀನಿವಾಸ್ ತಿಳಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260603-4-1360802654</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>