<p><strong>ಬೆಂಗಳೂರು:</strong> ಉದಯಭಾನು ಕಲಾಸಂಘ ಹಾಗೂ ನಾರಾಯಣ ನೇತ್ರಾಲಯದ ಸಹಯೋಗದಲ್ಲಿ ಭಾನುವಾರ ಉಚಿತ ನಾಗರಿಕ ಆರೋಗ್ಯ ಪಾಲನಾ ಕಾರ್ಯಕ್ರಮದ ಅಡಿಯಲ್ಲಿ 365ನೇ ನೇತ್ರ ತಪಾಸಣೆ ಶಿಬಿರ ನಡೆಯಿತು.</p>.<p>ವಿನಾಯಕ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷೆ ಗಾಯತ್ರಿ ಚಂದ್ರಮೂರ್ತಿ ಮಾತನಾಡಿ, ‘ಉದಯಭಾನು ಕಲಾಸಂಘವು ಸಾರ್ವಜನಿಕರಿಗೆ ಉಚಿತವಾಗಿ ಆರೋಗ್ಯ, ಶಿಕ್ಷಣವನ್ನು ಒದಗಿಸುತ್ತಿರುವುದು ಶ್ಲಾಘನೀಯ’ ಎಂದರು.</p>.<p>ಡಾ. ಆಯಶ್ ಅವರು ಶಿಬಿರದಲ್ಲಿ ಪಾಲ್ಗೊಂಡಿದ್ದ ಫಲಾನುಭವಿಗಳನ್ನು ಪರೀಕ್ಷಿಸಿ, ಸಲಹೆ ಸೂಚನೆಗಳನ್ನು ನೀಡಿ ಪೊರೆ ಶಸ್ತ್ರಚಿಕಿತ್ಸೆಗೆ ಮಾರ್ಗದರ್ಶನ ನೀಡಿದರು. ಈ ಶಿಬಿರದಲ್ಲಿ 120ಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದರು.</p>.<p>ಕಾರ್ಯಕ್ರಮದಲ್ಲಿ ನಾರಾಯಣ ನೇತ್ರಾಲಯದ ಶಿಬಿರ ಸಂಯೋಜಕ ಸುಭಾಷ್, ಸಂಘದ ಉಪಾಧ್ಯಕ್ಷ ಬಿ.ಎಸ್.ಸತ್ಯನಾರಾಯಣ, ಸಹಾಯಕ ಕಾರ್ಯದರ್ಶಿ ಕೆ.ಎನ್. ಸೋಮಶೇಖರ್ ಮತ್ತು ಎಚ್.ಎಸ್. ಕಪಿನಯ್ಯ, ಕೋಶಾಧ್ಯಕ್ಷ ಎಸ್. ಅನಿಲ್ ಕುಮಾರ್, ಸದಸ್ಯ ಕೆ.ಎಲ್. ರಾಮಚಂದ್ರ, ಭಾನುಮತಿ ಉಪಸ್ಥಿತರಿದ್ದರು.</p>.<p>ಮೇ 24ರಂದು 366ನೇ ಉಚಿತ ನೇತ್ರ ತಪಾಸಣಾ ಶಿಬಿರ ನಡೆಯಲಿದೆ. ಇದರ ಜೊತೆಗೆ 285ನೇ ಉಚಿತ ದಂತ ತಪಾಸಣಾ ಶಿಬಿರ ನಡೆಯಲಿದ್ದು, ಆಸಕ್ತರು ಸಂಘದ ಕಾರ್ಯಾಲಯದಲ್ಲಿ ಹೆಸರುಗಳನ್ನು ನೋಂದಾಯಿಸಿಕೊಳ್ಳಬೇಕು. ಮಾಹಿತಿಗೆ: 080-26609343/26601831, 99802 04965.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260511-4-685308412</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಉದಯಭಾನು ಕಲಾಸಂಘ ಹಾಗೂ ನಾರಾಯಣ ನೇತ್ರಾಲಯದ ಸಹಯೋಗದಲ್ಲಿ ಭಾನುವಾರ ಉಚಿತ ನಾಗರಿಕ ಆರೋಗ್ಯ ಪಾಲನಾ ಕಾರ್ಯಕ್ರಮದ ಅಡಿಯಲ್ಲಿ 365ನೇ ನೇತ್ರ ತಪಾಸಣೆ ಶಿಬಿರ ನಡೆಯಿತು.</p>.<p>ವಿನಾಯಕ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷೆ ಗಾಯತ್ರಿ ಚಂದ್ರಮೂರ್ತಿ ಮಾತನಾಡಿ, ‘ಉದಯಭಾನು ಕಲಾಸಂಘವು ಸಾರ್ವಜನಿಕರಿಗೆ ಉಚಿತವಾಗಿ ಆರೋಗ್ಯ, ಶಿಕ್ಷಣವನ್ನು ಒದಗಿಸುತ್ತಿರುವುದು ಶ್ಲಾಘನೀಯ’ ಎಂದರು.</p>.<p>ಡಾ. ಆಯಶ್ ಅವರು ಶಿಬಿರದಲ್ಲಿ ಪಾಲ್ಗೊಂಡಿದ್ದ ಫಲಾನುಭವಿಗಳನ್ನು ಪರೀಕ್ಷಿಸಿ, ಸಲಹೆ ಸೂಚನೆಗಳನ್ನು ನೀಡಿ ಪೊರೆ ಶಸ್ತ್ರಚಿಕಿತ್ಸೆಗೆ ಮಾರ್ಗದರ್ಶನ ನೀಡಿದರು. ಈ ಶಿಬಿರದಲ್ಲಿ 120ಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದರು.</p>.<p>ಕಾರ್ಯಕ್ರಮದಲ್ಲಿ ನಾರಾಯಣ ನೇತ್ರಾಲಯದ ಶಿಬಿರ ಸಂಯೋಜಕ ಸುಭಾಷ್, ಸಂಘದ ಉಪಾಧ್ಯಕ್ಷ ಬಿ.ಎಸ್.ಸತ್ಯನಾರಾಯಣ, ಸಹಾಯಕ ಕಾರ್ಯದರ್ಶಿ ಕೆ.ಎನ್. ಸೋಮಶೇಖರ್ ಮತ್ತು ಎಚ್.ಎಸ್. ಕಪಿನಯ್ಯ, ಕೋಶಾಧ್ಯಕ್ಷ ಎಸ್. ಅನಿಲ್ ಕುಮಾರ್, ಸದಸ್ಯ ಕೆ.ಎಲ್. ರಾಮಚಂದ್ರ, ಭಾನುಮತಿ ಉಪಸ್ಥಿತರಿದ್ದರು.</p>.<p>ಮೇ 24ರಂದು 366ನೇ ಉಚಿತ ನೇತ್ರ ತಪಾಸಣಾ ಶಿಬಿರ ನಡೆಯಲಿದೆ. ಇದರ ಜೊತೆಗೆ 285ನೇ ಉಚಿತ ದಂತ ತಪಾಸಣಾ ಶಿಬಿರ ನಡೆಯಲಿದ್ದು, ಆಸಕ್ತರು ಸಂಘದ ಕಾರ್ಯಾಲಯದಲ್ಲಿ ಹೆಸರುಗಳನ್ನು ನೋಂದಾಯಿಸಿಕೊಳ್ಳಬೇಕು. ಮಾಹಿತಿಗೆ: 080-26609343/26601831, 99802 04965.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260511-4-685308412</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>