<p><strong>ಬೆಂಗಳೂರು</strong>: ಉಪ್ಪಾರ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಸ್ವಾತಂತ್ರ್ಯ ಉದ್ಯಾನದಲ್ಲಿ ಮಾರ್ಚ್ 23ರಿಂದ 25ರವರೆಗೆ ವಿವಿಧ ಸಂಘಟನೆಗಳು ಪ್ರತಿಭಟನೆ ಹಮ್ಮಿಕೊಂಡಿರುವ ಕಾರಣ ಸಂಚಾರ ಮಾರ್ಗದಲ್ಲಿ ಮಾರ್ಪಾಡು ಮಾಡಲಾಗಿದೆ.</p>.<p>ಪ್ರತಿಭಟನೆ ವೇಳೆ ಶೇಷಾದ್ರಿ ರಸ್ತೆ ಮೂಲಕ ಜನರು ಹಾಗೂ ವಾಹನಗಳು ಬರುವ ಕಾರಣ ಸ್ವಾತಂತ್ರ್ಯ ಉದ್ಯಾನದ ಸುತ್ತಮುತ್ತ ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆ ಇದೆ. ಹಾಗಾಗಿ ಸುಗಮ ಸಂಚಾರ ದೃಷ್ಟಿಯಿಂದ ತಾತ್ಕಾಲಿಕವಾಗಿ ಪರ್ಯಾಯ ಮಾರ್ಗದ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಸಂಚಾರ ನಿರ್ಬಂಧ: ಶಾಂತಲಾ ಜಂಕ್ಷನ್ ಮತ್ತು ಖೋಡೆ ಸರ್ಕಲ್ನಿಂದ ಆನಂದರಾವ್ ಮೇಲ್ಸೇತುವೆ, ಹಳೆ ಜೆಡಿಎಸ್ ಕ್ರಾಸ್, ಶೇಷಾದ್ರಿ ರಸ್ತೆಯಿಂದ ಸ್ವಾತಂತ್ರ್ಯ ಉದ್ಯಾನದವರೆಗೆ</p>.<p>ಪರ್ಯಾಯ ಮಾರ್ಗ: ಲುಲು ಮಾಲ್, ಕೆಎಫ್ಎಂ, ರಾಜೀವ್ ಗಾಂಧಿ ಸರ್ಕಲ್, ಮಂತ್ರಿ ಮಾಲ್, ಸ್ವಸ್ತಿಕ್ ಸರ್ಕಲ್, ಶೇಷಾದ್ರಿಪುರಂ, ನೆಹರೂ ಸರ್ಕಲ್, ರೇಸ್ ಕೋರ್ಸ್ ಮೇಲ್ಸೇತುವೆ, ರೇಸ್ ಕೋರ್ಸ್ ರಸ್ತೆ.</p>.<p>ಮೈಸೂರು ಬ್ಯಾಂಕ್ ಕಡೆಯಿಂದ ಚಾಲುಕ್ಯ ಸರ್ಕಲ್ ಕಡೆಗೆ ಕೆ.ಜಿ. ರಸ್ತೆ, ಮೈಸೂರು ಬ್ಯಾಂಕ್ ಜಂಕ್ಷನ್, ಸಾಗರ್ ಜಂಕ್ಷನ್, ಕೆ.ಜಿ.ಜಂಕ್ಷನ್, ಎಲೈಟ್, ಟಿಬಿ ರಸ್ತೆ, ಕೆ.ಎಫ್.ಎಂ, ರಾಜೀವ್ ಗಾಂಧಿ ಸರ್ಕಲ್, ಸ್ವಸ್ತಿಕ್, ನೆಹರೂ ಸರ್ಕಲ್, ರೇಸ್ ಕೋರ್ಸ್ ಮೇಲ್ಸೇತುವೆ ರಸ್ತೆ ಮೂಲಕ ಸಂಚರಿಸಬೇಕು.</p>.<p>ಚಾಲುಕ್ಯ ಸರ್ಕಲ್ನಿಂದ ಮೈಸೂರು ಬ್ಯಾಂಕ್ ಕಡೆಗೆ ಚಾಲುಕ್ಯ ಸರ್ಕಲ್, ಎಲ್ಆರ್ಡಿ, ರಾಜಭವನ ರಸ್ತೆ, ಇನ್ಫೆಂಟ್ರಿ ರಸ್ತೆ, ಇಂಡಿಯನ್ ಎಕ್ಸ್ಪ್ರೆಸ್ನಿಂದ ತೆರಳಬಹುದು.</p>.<p>ಕಾಳಿದಾಸ ರಸ್ತೆ ಕನಕದಾಸ ಜಂಕ್ಷನ್ ಕಡೆಯಿಂದ ಫ್ರೀಡಂ ಪಾರ್ಕ್ ಕಡೆಗೆ ಹಾಗೂ ಸುಬ್ಬಣ್ಣ ಜಂಕ್ಷನ್ನಿಂದ ಬಲ ತಿರುವು ಪಡೆದು ಆನಂದ್ ರಾವ್ ಸರ್ಕಲ್ ಕಡೆಗೆ ಸಾಗಬಹುದು ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಉಪ್ಪಾರ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಸ್ವಾತಂತ್ರ್ಯ ಉದ್ಯಾನದಲ್ಲಿ ಮಾರ್ಚ್ 23ರಿಂದ 25ರವರೆಗೆ ವಿವಿಧ ಸಂಘಟನೆಗಳು ಪ್ರತಿಭಟನೆ ಹಮ್ಮಿಕೊಂಡಿರುವ ಕಾರಣ ಸಂಚಾರ ಮಾರ್ಗದಲ್ಲಿ ಮಾರ್ಪಾಡು ಮಾಡಲಾಗಿದೆ.</p>.<p>ಪ್ರತಿಭಟನೆ ವೇಳೆ ಶೇಷಾದ್ರಿ ರಸ್ತೆ ಮೂಲಕ ಜನರು ಹಾಗೂ ವಾಹನಗಳು ಬರುವ ಕಾರಣ ಸ್ವಾತಂತ್ರ್ಯ ಉದ್ಯಾನದ ಸುತ್ತಮುತ್ತ ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆ ಇದೆ. ಹಾಗಾಗಿ ಸುಗಮ ಸಂಚಾರ ದೃಷ್ಟಿಯಿಂದ ತಾತ್ಕಾಲಿಕವಾಗಿ ಪರ್ಯಾಯ ಮಾರ್ಗದ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಸಂಚಾರ ನಿರ್ಬಂಧ: ಶಾಂತಲಾ ಜಂಕ್ಷನ್ ಮತ್ತು ಖೋಡೆ ಸರ್ಕಲ್ನಿಂದ ಆನಂದರಾವ್ ಮೇಲ್ಸೇತುವೆ, ಹಳೆ ಜೆಡಿಎಸ್ ಕ್ರಾಸ್, ಶೇಷಾದ್ರಿ ರಸ್ತೆಯಿಂದ ಸ್ವಾತಂತ್ರ್ಯ ಉದ್ಯಾನದವರೆಗೆ</p>.<p>ಪರ್ಯಾಯ ಮಾರ್ಗ: ಲುಲು ಮಾಲ್, ಕೆಎಫ್ಎಂ, ರಾಜೀವ್ ಗಾಂಧಿ ಸರ್ಕಲ್, ಮಂತ್ರಿ ಮಾಲ್, ಸ್ವಸ್ತಿಕ್ ಸರ್ಕಲ್, ಶೇಷಾದ್ರಿಪುರಂ, ನೆಹರೂ ಸರ್ಕಲ್, ರೇಸ್ ಕೋರ್ಸ್ ಮೇಲ್ಸೇತುವೆ, ರೇಸ್ ಕೋರ್ಸ್ ರಸ್ತೆ.</p>.<p>ಮೈಸೂರು ಬ್ಯಾಂಕ್ ಕಡೆಯಿಂದ ಚಾಲುಕ್ಯ ಸರ್ಕಲ್ ಕಡೆಗೆ ಕೆ.ಜಿ. ರಸ್ತೆ, ಮೈಸೂರು ಬ್ಯಾಂಕ್ ಜಂಕ್ಷನ್, ಸಾಗರ್ ಜಂಕ್ಷನ್, ಕೆ.ಜಿ.ಜಂಕ್ಷನ್, ಎಲೈಟ್, ಟಿಬಿ ರಸ್ತೆ, ಕೆ.ಎಫ್.ಎಂ, ರಾಜೀವ್ ಗಾಂಧಿ ಸರ್ಕಲ್, ಸ್ವಸ್ತಿಕ್, ನೆಹರೂ ಸರ್ಕಲ್, ರೇಸ್ ಕೋರ್ಸ್ ಮೇಲ್ಸೇತುವೆ ರಸ್ತೆ ಮೂಲಕ ಸಂಚರಿಸಬೇಕು.</p>.<p>ಚಾಲುಕ್ಯ ಸರ್ಕಲ್ನಿಂದ ಮೈಸೂರು ಬ್ಯಾಂಕ್ ಕಡೆಗೆ ಚಾಲುಕ್ಯ ಸರ್ಕಲ್, ಎಲ್ಆರ್ಡಿ, ರಾಜಭವನ ರಸ್ತೆ, ಇನ್ಫೆಂಟ್ರಿ ರಸ್ತೆ, ಇಂಡಿಯನ್ ಎಕ್ಸ್ಪ್ರೆಸ್ನಿಂದ ತೆರಳಬಹುದು.</p>.<p>ಕಾಳಿದಾಸ ರಸ್ತೆ ಕನಕದಾಸ ಜಂಕ್ಷನ್ ಕಡೆಯಿಂದ ಫ್ರೀಡಂ ಪಾರ್ಕ್ ಕಡೆಗೆ ಹಾಗೂ ಸುಬ್ಬಣ್ಣ ಜಂಕ್ಷನ್ನಿಂದ ಬಲ ತಿರುವು ಪಡೆದು ಆನಂದ್ ರಾವ್ ಸರ್ಕಲ್ ಕಡೆಗೆ ಸಾಗಬಹುದು ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>