<p><strong>ಬೆಂಗಳೂರು</strong>: ಶ್ರೀರಾಮ ಕಾಲೊನಿಯಲ್ಲಿ ಅಡುಗೆ ಅನಿಲ ಸೋರಿಕೆಯಿಂದ ಸ್ಫೋಟಗೊಂಡ ಘಟನೆಯಲ್ಲಿ ಗಾಯಗೊಂಡಿದ್ದ 9 ಮಂದಿಯ ಪೈಕಿ ಸೋಮವಾರ ಮತ್ತೆ ಇಬ್ಬರು ಮೃತಪಟ್ಟಿದ್ದಾರೆ. ಇದರಿಂದಾಗಿ ಮೃತರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ.</p>.<p>ಕಸ್ತೂರಮ್ಮ (35) ಮತ್ತು ಅವರ ಪುತ್ರಿ ಕಯಾಲ್ (8) ಮೃತಪಟ್ಟವರು.</p>.<p>ಆಗಸ್ಟ್ 15ರಂದು ಕಸ್ತೂರಮ್ಮ ಅವರ ಮನೆಯಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ಫೋಟ ಸಂಭವಿಸಿತ್ತು. 13 ಮನೆಗಳು ಕುಸಿದಿದ್ದವು. ಕಸ್ತೂರಮ್ಮ ಅವರ ಪಕ್ಕದ ಮನೆಯಲ್ಲಿದ್ದ ಬಾಲಕ ಮುಬಾರಕ್ ಅಂದೇ ಮೃತಪಟ್ಟಿದ್ದ.</p>.<p>ಸ್ಫೋಟ ಸಂಭವಿಸಿದ ವೇಳೆ ಮನೆಯೊಳಗಿದ್ದ ಕಸ್ತೂರಮ್ಮ ಮತ್ತು ಕಯಾಲ್ ಅವರಿಗೆ ಶೇ 30ರಷ್ಟು ಸುಟ್ಟ ಗಾಯಗಳಾಗಿದ್ದವು. ಇಬ್ಬರನ್ನೂ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಸ್ತೂರಮ್ಮ ಅವರು ಮನೆಗೆಲಸ ಮಾಡುತ್ತಿದ್ದರು. ಬಾಲಕಿ ಕಯಾಲ್, ಮೂರನೇ ತರಗತಿ ಓದುತ್ತಿದ್ದಳು ಎಂದು ಪೊಲೀಸರು ಹೇಳಿದರು.</p>.<p>ಘಟನೆಯಲ್ಲಿ ಕಸ್ತೂರಮ್ಮ ಅವರ ಅಕ್ಕಪಕ್ಕದ ಮನೆಯ ಏಳು ಮಂದಿ ಗಾಯಗೊಂಡಿದ್ದು, ಅವರನ್ನು ನಗರದ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿತ್ತು. ಉಳಿದ ಆರು ಮಂದಿ ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಸರಸಮ್ಮ ಎಂಬುವವರ ಕೈ ಮುರಿದಿದ್ದು, ಚಿಕಿತ್ಸೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಶ್ರೀರಾಮ ಕಾಲೊನಿಯಲ್ಲಿ ಅಡುಗೆ ಅನಿಲ ಸೋರಿಕೆಯಿಂದ ಸ್ಫೋಟಗೊಂಡ ಘಟನೆಯಲ್ಲಿ ಗಾಯಗೊಂಡಿದ್ದ 9 ಮಂದಿಯ ಪೈಕಿ ಸೋಮವಾರ ಮತ್ತೆ ಇಬ್ಬರು ಮೃತಪಟ್ಟಿದ್ದಾರೆ. ಇದರಿಂದಾಗಿ ಮೃತರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ.</p>.<p>ಕಸ್ತೂರಮ್ಮ (35) ಮತ್ತು ಅವರ ಪುತ್ರಿ ಕಯಾಲ್ (8) ಮೃತಪಟ್ಟವರು.</p>.<p>ಆಗಸ್ಟ್ 15ರಂದು ಕಸ್ತೂರಮ್ಮ ಅವರ ಮನೆಯಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ಫೋಟ ಸಂಭವಿಸಿತ್ತು. 13 ಮನೆಗಳು ಕುಸಿದಿದ್ದವು. ಕಸ್ತೂರಮ್ಮ ಅವರ ಪಕ್ಕದ ಮನೆಯಲ್ಲಿದ್ದ ಬಾಲಕ ಮುಬಾರಕ್ ಅಂದೇ ಮೃತಪಟ್ಟಿದ್ದ.</p>.<p>ಸ್ಫೋಟ ಸಂಭವಿಸಿದ ವೇಳೆ ಮನೆಯೊಳಗಿದ್ದ ಕಸ್ತೂರಮ್ಮ ಮತ್ತು ಕಯಾಲ್ ಅವರಿಗೆ ಶೇ 30ರಷ್ಟು ಸುಟ್ಟ ಗಾಯಗಳಾಗಿದ್ದವು. ಇಬ್ಬರನ್ನೂ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಸ್ತೂರಮ್ಮ ಅವರು ಮನೆಗೆಲಸ ಮಾಡುತ್ತಿದ್ದರು. ಬಾಲಕಿ ಕಯಾಲ್, ಮೂರನೇ ತರಗತಿ ಓದುತ್ತಿದ್ದಳು ಎಂದು ಪೊಲೀಸರು ಹೇಳಿದರು.</p>.<p>ಘಟನೆಯಲ್ಲಿ ಕಸ್ತೂರಮ್ಮ ಅವರ ಅಕ್ಕಪಕ್ಕದ ಮನೆಯ ಏಳು ಮಂದಿ ಗಾಯಗೊಂಡಿದ್ದು, ಅವರನ್ನು ನಗರದ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿತ್ತು. ಉಳಿದ ಆರು ಮಂದಿ ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಸರಸಮ್ಮ ಎಂಬುವವರ ಕೈ ಮುರಿದಿದ್ದು, ಚಿಕಿತ್ಸೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>