<p>ಬೆಂಗಳೂರು: ಕಗ್ಗಲೀಪುರ ಪೊಲೀಸ್ ಠಾಣೆ ವ್ಯಾಪ್ತಿಯ ವಡೇರಹಳ್ಳಿಯ ಸೇತುವೆ ಬಳಿ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿ ವಾರ ಕಳೆದರೂ ಆರೋಪಿಗಳು ಪತ್ತೆಯಾಗಿಲ್ಲ. ತನಿಖೆ ಚುರುಕುಗೊಳಿಸಿರುವ ವಿಶೇಷ ಪೊಲೀಸ್ ತಂಡವು, ಆರೋಪಿಗಾಗಿ ಹೊರ ರಾಜ್ಯದಲ್ಲಿ ಹುಡುಕಾಟ ನಡೆಸುತ್ತಿದೆ.</p>.<p>ಆರ್ಟ್ ಆಫ್ ಲಿವಿಂಗ್ನ 45ನೇ ವಾರ್ಷಿಕೋತ್ಸವದಲ್ಲಿ ಭಾಗವಹಿಸಲು ನಗರಕ್ಕೆ ಬಂದಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಸಂಚರಿಸಿದ ನೈಸ್ ರಸ್ತೆಯ ಸಮೀಪದಲ್ಲಿಯೇ ಎರಡು ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿದ್ದವು.</p>.<p>ಪ್ರಕರಣದ ತನಿಖೆಗೆ ಬೆಂಗಳೂರು ದಕ್ಷಿಣ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸಗೌಡ ನೇತೃತ್ವದಲ್ಲಿ ಆರು ತಂಡಗಳನ್ನು ರಚಿಸಲಾಗಿದೆ. ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳವು (ಎನ್ಐಎ) ಕೈಗೆತ್ತಿಕೊಂಡಿದ್ದು, ಮಾಹಿತಿ ಕಲೆ ಹಾಕಿ, ತನಿಖೆ ನಡೆಸುತ್ತಿದೆ.</p>.<p>ಮಹಾರಾಷ್ಟ್ರ ಮತ್ತು ತಮಿಳುನಾಡಿನಲ್ಲಿ ತನಿಖಾ ತಂಡವು ಆರೋಪಿಗಾಗಿ ಶೋಧ ನಡೆಸುತ್ತಿದೆ. ನಾಲ್ಕು ತಂಡಗಳು ಬೆಂಗಳೂರು ನಗರ ಹಾಗೂ ಗ್ರಾಮಾಂತರ ಪ್ರದೇಶದಲ್ಲಿ ತನಿಖೆ ಕೈಗೊಂಡಿವೆ. ಈವರೆಗೆ ಕಗ್ಗಲೀಪುರ, ತಾತಗುಣಿ ಪ್ರದೇಶ ವ್ಯಾಪ್ತಿಯಲ್ಲಿ 150ಕ್ಕೂ ಹೆಚ್ಚು ಮಂದಿಯ ವಿಚಾರಣೆ ನಡೆಸಲಾಗಿದೆ.</p>.<p>ತನಿಖೆ ವೇಳೆ ಕನಕಪುರ ರಸ್ತೆ ಸಮೀಪದ ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಿರುವ ಮಣ್ಣಿನ ರಸ್ತೆಯಿಂದ ಸುಮಾರು 20 ಅಡಿ ದೂರದಲ್ಲಿ ಬ್ಯಾಟರಿ ಪ್ಯಾಕ್, ವೈಯರ್, ಟೇಪ್ಗಳು, ಸರ್ಕಿಟ್ ಬೋರ್ಡ್ನಂತೆ ಕಾಣುವ ವಸ್ತುಗಳು ಪತ್ತೆಯಾಗಿದ್ದವು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260518-15-580551157</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಕಗ್ಗಲೀಪುರ ಪೊಲೀಸ್ ಠಾಣೆ ವ್ಯಾಪ್ತಿಯ ವಡೇರಹಳ್ಳಿಯ ಸೇತುವೆ ಬಳಿ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿ ವಾರ ಕಳೆದರೂ ಆರೋಪಿಗಳು ಪತ್ತೆಯಾಗಿಲ್ಲ. ತನಿಖೆ ಚುರುಕುಗೊಳಿಸಿರುವ ವಿಶೇಷ ಪೊಲೀಸ್ ತಂಡವು, ಆರೋಪಿಗಾಗಿ ಹೊರ ರಾಜ್ಯದಲ್ಲಿ ಹುಡುಕಾಟ ನಡೆಸುತ್ತಿದೆ.</p>.<p>ಆರ್ಟ್ ಆಫ್ ಲಿವಿಂಗ್ನ 45ನೇ ವಾರ್ಷಿಕೋತ್ಸವದಲ್ಲಿ ಭಾಗವಹಿಸಲು ನಗರಕ್ಕೆ ಬಂದಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಸಂಚರಿಸಿದ ನೈಸ್ ರಸ್ತೆಯ ಸಮೀಪದಲ್ಲಿಯೇ ಎರಡು ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿದ್ದವು.</p>.<p>ಪ್ರಕರಣದ ತನಿಖೆಗೆ ಬೆಂಗಳೂರು ದಕ್ಷಿಣ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸಗೌಡ ನೇತೃತ್ವದಲ್ಲಿ ಆರು ತಂಡಗಳನ್ನು ರಚಿಸಲಾಗಿದೆ. ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳವು (ಎನ್ಐಎ) ಕೈಗೆತ್ತಿಕೊಂಡಿದ್ದು, ಮಾಹಿತಿ ಕಲೆ ಹಾಕಿ, ತನಿಖೆ ನಡೆಸುತ್ತಿದೆ.</p>.<p>ಮಹಾರಾಷ್ಟ್ರ ಮತ್ತು ತಮಿಳುನಾಡಿನಲ್ಲಿ ತನಿಖಾ ತಂಡವು ಆರೋಪಿಗಾಗಿ ಶೋಧ ನಡೆಸುತ್ತಿದೆ. ನಾಲ್ಕು ತಂಡಗಳು ಬೆಂಗಳೂರು ನಗರ ಹಾಗೂ ಗ್ರಾಮಾಂತರ ಪ್ರದೇಶದಲ್ಲಿ ತನಿಖೆ ಕೈಗೊಂಡಿವೆ. ಈವರೆಗೆ ಕಗ್ಗಲೀಪುರ, ತಾತಗುಣಿ ಪ್ರದೇಶ ವ್ಯಾಪ್ತಿಯಲ್ಲಿ 150ಕ್ಕೂ ಹೆಚ್ಚು ಮಂದಿಯ ವಿಚಾರಣೆ ನಡೆಸಲಾಗಿದೆ.</p>.<p>ತನಿಖೆ ವೇಳೆ ಕನಕಪುರ ರಸ್ತೆ ಸಮೀಪದ ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಿರುವ ಮಣ್ಣಿನ ರಸ್ತೆಯಿಂದ ಸುಮಾರು 20 ಅಡಿ ದೂರದಲ್ಲಿ ಬ್ಯಾಟರಿ ಪ್ಯಾಕ್, ವೈಯರ್, ಟೇಪ್ಗಳು, ಸರ್ಕಿಟ್ ಬೋರ್ಡ್ನಂತೆ ಕಾಣುವ ವಸ್ತುಗಳು ಪತ್ತೆಯಾಗಿದ್ದವು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260518-15-580551157</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>