<p>ಬೆಂಗಳೂರು ಕೃಷಿ ವಿಶ್ವವಿದ್ಯಾಲಯವು ಜಿಕೆವಿಕೆ ಆವರಣದಲ್ಲಿ ಶನಿವಾರ ಬೆಳಿಗ್ಗೆ 7ರಿಂದ ಸಂಜೆ 4 ಗಂಟೆಯವರೆಗೆ ರೈತ ಸಂತೆ ಹಮ್ಮಿಕೊಂಡಿದೆ.</p>.<p>ಹಲಸು, ಮಾವು, ಸೀಬೆ, ದ್ರಾಕ್ಷಿ, ಕಲ್ಲಂಗಡಿ ಹಾಗೂ ಕರಬೂಜ ಹಣ್ಣು, ಗಿಣ್ಣು, ತಾಜಾ ಹಣ್ಣಿನ ಪಾನೀಯಗಳು, ಸಿರಿಧಾನ್ಯದ ಹಪ್ಪಳ ಮತ್ತು ಸಂಡಿಗೆ, ಹುರಿಗಾಳು, ಮೌಲ್ಯವರ್ಧಿತ ಸಿರಿಧಾನ್ಯ ಪದಾರ್ಥಗಳು, ಸಾವಯವ ಉತ್ಪನ್ನಗಳು, ರಾಜಮುಡಿ ಅಕ್ಕಿ, ತಾಜಾ ಅಣಬೆ, ಆಲಂಕಾರಿಕ ಮೀನಿನ ಮರಿಗಳು ಈ ಬಾರಿಯ ರೈತ ಸಂತೆಯ ವಿಶೇಷವಾಗಿದೆ. ಇದರ ಜತೆಗೆ ವಿವಿಧ ಹಣ್ಣು ಹಾಗೂ ತರಕಾರಿಗಳು ಸಂತೆಯಲ್ಲಿ ಸಿಗಲಿವೆ.</p>.<p>ಸುಗಂಧ ಮತ್ತು ಔಷಧೀಯ ಸಸ್ಯಗಳು, ಆಲಂಕಾರಿಕ ಗಿಡಗಳು, ಜೈವಿಕ ಗೊಬ್ಬರ, ಕೃಷಿ ಯಂತ್ರೋಪಕರಣಗಳು, ಎರೆಹುಳು ಗೊಬ್ಬರ, ಜೈವಿಕ ಕೀಟನಾಶಕ, ಕರಕುಶಲ ವಸ್ತುಗಳು, ಅಡಿಕೆ ಉತ್ಪನ್ನಗಳು, ರೇಷ್ಮೆ ಕೃಷಿಯ ಉಪ ಉತ್ಪನ್ನಗಳು, ಜೇನು ಕೃಷಿ, ವಾಣಿಜ್ಯ ಉತ್ಪನ್ನಗಳು ಸಂತೆಯಲ್ಲಿ ಇರಲಿವೆ.</p>.<p>ಕೃಷಿ ಪ್ರಕಟಣೆಗಳು ಹಾಗೂ ವಿಶ್ವವಿದ್ಯಾಲಯದ ವಿಶೇಷತೆಯ ಬಗ್ಗೆ ಮಾಹಿತಿ ದೊರೆಯಲಿದೆ. ಕೃಷಿ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟದ ವ್ಯವಸ್ಥೆಯಿರುತ್ತದೆ. ಸಾರ್ವಜನಿಕರು ಮತ್ತು ರೈತರು ಈ ವಿನೂತನ ಸಂತೆಯ ಪ್ರಯೋಜನ ಪಡೆದುಕೊಳ್ಳಬೇಕು ಎಂದು ವಿಶ್ವವಿದ್ಯಾಲಯದ ಹಿರಿಯ ವಾರ್ತಾತಜ್ಞ ಕೆ.ಪಿ. ರಘುಪ್ರಸಾದ್ ಮನವಿ ಮಾಡಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260425-4-171708297</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು ಕೃಷಿ ವಿಶ್ವವಿದ್ಯಾಲಯವು ಜಿಕೆವಿಕೆ ಆವರಣದಲ್ಲಿ ಶನಿವಾರ ಬೆಳಿಗ್ಗೆ 7ರಿಂದ ಸಂಜೆ 4 ಗಂಟೆಯವರೆಗೆ ರೈತ ಸಂತೆ ಹಮ್ಮಿಕೊಂಡಿದೆ.</p>.<p>ಹಲಸು, ಮಾವು, ಸೀಬೆ, ದ್ರಾಕ್ಷಿ, ಕಲ್ಲಂಗಡಿ ಹಾಗೂ ಕರಬೂಜ ಹಣ್ಣು, ಗಿಣ್ಣು, ತಾಜಾ ಹಣ್ಣಿನ ಪಾನೀಯಗಳು, ಸಿರಿಧಾನ್ಯದ ಹಪ್ಪಳ ಮತ್ತು ಸಂಡಿಗೆ, ಹುರಿಗಾಳು, ಮೌಲ್ಯವರ್ಧಿತ ಸಿರಿಧಾನ್ಯ ಪದಾರ್ಥಗಳು, ಸಾವಯವ ಉತ್ಪನ್ನಗಳು, ರಾಜಮುಡಿ ಅಕ್ಕಿ, ತಾಜಾ ಅಣಬೆ, ಆಲಂಕಾರಿಕ ಮೀನಿನ ಮರಿಗಳು ಈ ಬಾರಿಯ ರೈತ ಸಂತೆಯ ವಿಶೇಷವಾಗಿದೆ. ಇದರ ಜತೆಗೆ ವಿವಿಧ ಹಣ್ಣು ಹಾಗೂ ತರಕಾರಿಗಳು ಸಂತೆಯಲ್ಲಿ ಸಿಗಲಿವೆ.</p>.<p>ಸುಗಂಧ ಮತ್ತು ಔಷಧೀಯ ಸಸ್ಯಗಳು, ಆಲಂಕಾರಿಕ ಗಿಡಗಳು, ಜೈವಿಕ ಗೊಬ್ಬರ, ಕೃಷಿ ಯಂತ್ರೋಪಕರಣಗಳು, ಎರೆಹುಳು ಗೊಬ್ಬರ, ಜೈವಿಕ ಕೀಟನಾಶಕ, ಕರಕುಶಲ ವಸ್ತುಗಳು, ಅಡಿಕೆ ಉತ್ಪನ್ನಗಳು, ರೇಷ್ಮೆ ಕೃಷಿಯ ಉಪ ಉತ್ಪನ್ನಗಳು, ಜೇನು ಕೃಷಿ, ವಾಣಿಜ್ಯ ಉತ್ಪನ್ನಗಳು ಸಂತೆಯಲ್ಲಿ ಇರಲಿವೆ.</p>.<p>ಕೃಷಿ ಪ್ರಕಟಣೆಗಳು ಹಾಗೂ ವಿಶ್ವವಿದ್ಯಾಲಯದ ವಿಶೇಷತೆಯ ಬಗ್ಗೆ ಮಾಹಿತಿ ದೊರೆಯಲಿದೆ. ಕೃಷಿ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟದ ವ್ಯವಸ್ಥೆಯಿರುತ್ತದೆ. ಸಾರ್ವಜನಿಕರು ಮತ್ತು ರೈತರು ಈ ವಿನೂತನ ಸಂತೆಯ ಪ್ರಯೋಜನ ಪಡೆದುಕೊಳ್ಳಬೇಕು ಎಂದು ವಿಶ್ವವಿದ್ಯಾಲಯದ ಹಿರಿಯ ವಾರ್ತಾತಜ್ಞ ಕೆ.ಪಿ. ರಘುಪ್ರಸಾದ್ ಮನವಿ ಮಾಡಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260425-4-171708297</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>