<p><strong>ಬೆಂಗಳೂರು</strong>: ಉದ್ಯಮಿಯೊಬ್ಬರ ಮೇಲೆ ದುಷ್ಕರ್ಮಿ ಗುಂಡು ಹಾರಿಸಿ ಪರಾರಿಯಾಗಿದ್ದು, ಆತನ ಪತ್ತೆಗೆ ಬಸವನಗುಡಿ ಠಾಣೆ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.</p>.<p>ಘಟನೆಯಲ್ಲಿ ಉದ್ಯಮಿ ರಾಜಗೋಪಾಲ್ ಅವರು ಗಾಯಗೊಂಡಿದ್ದಾರೆ. ರಾಜಗೋಪಾಲ್ ಅವರು ಬಸವನಗುಡಿಯ ನರ್ತಕಿ ಹಾಗೂ ಕಾರ್ಗಿಲ್ ಬಾರ್ ಆ್ಯಂಡ್ ರೆಸ್ಟೊರೆಂಟ್ ಮಾಲೀಕ.</p>.<p>ಡಿ.10ರಂದು ರಾತ್ರಿ 8.30ರ ಸುಮಾರಿಗೆ ಬಸವನಗುಡಿಯ ಕೃಷ್ಣರಾವ್ ಪಾರ್ಕ್ ಬಳಿ ಗುಂಡಿನ ದಾಳಿ ನಡೆದಿದೆ ಎಂದು ದೂರು ನೀಡಲಾಗಿದೆ. </p>.<p>‘ಗುಂಡಿನ ದಾಳಿಯಿಂದಾಗಿ ಕತ್ತಿನ ಭಾಗಕ್ಕೆ ಗಾಯವಾಗಿದೆ. ಜಯನಗರದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಕೃತ್ಯ ನಡೆದ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಕಲೆಹಾಕಲಾಗಿದೆ. ಗಾಯಾಳು ಹೇಳಿಕೆ ಸಹ ದಾಖಲು ಮಾಡಿಕೊಳ್ಳಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.</p>.<p>‘ರಾಜಗೋಪಾಲ್ ಅವರು ತಮಗೆ ಯಾರ ಮೇಲೆಯೂ ಅನುಮಾನ ಇಲ್ಲ. ಯಾವುದೇ ಬೆದರಿಕೆ ಕರೆಗಳು ಬಂದಿರಲಿಲ್ಲ. ಯಾವ ಕಾರಣಕ್ಕೆ ದುಷ್ಕರ್ಮಿ ಗುಂಡು ಹಾರಿಸಿದ್ದಾನೆ ಎಂದು ತಿಳಿದಿಲ್ಲ ಎಂಬುದಾಗಿ ವಿಚಾರಣೆ ವೇಳೆ ರಾಜಗೋಪಾಲ್ ತಿಳಿಸಿದ್ದಾರೆ’ ಎಂದು ಪೊಲೀಸರು ಹೇಳಿದರು.</p>.<p>‘ಪ್ರಕರಣದ ತನಿಖೆಯನ್ನು ತೀವ್ರಗೊಳಿಸಲಾಗಿದೆ. ಕೃತ್ಯಕ್ಕೆ ಯಾವ ಮಾದರಿಯ ಗನ್ ಬಳಸಲಾಗಿತ್ತು ಎಂಬುದನ್ನು ಪರಿಶೀಲಿಸಲಾಗುತ್ತಿದೆ. ಕೃತ್ಯ ನಡೆದ ಸ್ಥಳದ ಸುತ್ತಮುತ್ತ ಅಳವಡಿಸಿರುವ ಸಿ.ಸಿ.ಟಿ.ವಿ ಕ್ಯಾಮೆರಾಗಳಲ್ಲಿ ಸೆರೆಯಾದ ದೃಶ್ಯಾವಳಿ ಪರಿಶೀಲನೆ ನಡೆಸಲಾಗುತ್ತಿದೆ’ ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಉದ್ಯಮಿಯೊಬ್ಬರ ಮೇಲೆ ದುಷ್ಕರ್ಮಿ ಗುಂಡು ಹಾರಿಸಿ ಪರಾರಿಯಾಗಿದ್ದು, ಆತನ ಪತ್ತೆಗೆ ಬಸವನಗುಡಿ ಠಾಣೆ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.</p>.<p>ಘಟನೆಯಲ್ಲಿ ಉದ್ಯಮಿ ರಾಜಗೋಪಾಲ್ ಅವರು ಗಾಯಗೊಂಡಿದ್ದಾರೆ. ರಾಜಗೋಪಾಲ್ ಅವರು ಬಸವನಗುಡಿಯ ನರ್ತಕಿ ಹಾಗೂ ಕಾರ್ಗಿಲ್ ಬಾರ್ ಆ್ಯಂಡ್ ರೆಸ್ಟೊರೆಂಟ್ ಮಾಲೀಕ.</p>.<p>ಡಿ.10ರಂದು ರಾತ್ರಿ 8.30ರ ಸುಮಾರಿಗೆ ಬಸವನಗುಡಿಯ ಕೃಷ್ಣರಾವ್ ಪಾರ್ಕ್ ಬಳಿ ಗುಂಡಿನ ದಾಳಿ ನಡೆದಿದೆ ಎಂದು ದೂರು ನೀಡಲಾಗಿದೆ. </p>.<p>‘ಗುಂಡಿನ ದಾಳಿಯಿಂದಾಗಿ ಕತ್ತಿನ ಭಾಗಕ್ಕೆ ಗಾಯವಾಗಿದೆ. ಜಯನಗರದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಕೃತ್ಯ ನಡೆದ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಕಲೆಹಾಕಲಾಗಿದೆ. ಗಾಯಾಳು ಹೇಳಿಕೆ ಸಹ ದಾಖಲು ಮಾಡಿಕೊಳ್ಳಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.</p>.<p>‘ರಾಜಗೋಪಾಲ್ ಅವರು ತಮಗೆ ಯಾರ ಮೇಲೆಯೂ ಅನುಮಾನ ಇಲ್ಲ. ಯಾವುದೇ ಬೆದರಿಕೆ ಕರೆಗಳು ಬಂದಿರಲಿಲ್ಲ. ಯಾವ ಕಾರಣಕ್ಕೆ ದುಷ್ಕರ್ಮಿ ಗುಂಡು ಹಾರಿಸಿದ್ದಾನೆ ಎಂದು ತಿಳಿದಿಲ್ಲ ಎಂಬುದಾಗಿ ವಿಚಾರಣೆ ವೇಳೆ ರಾಜಗೋಪಾಲ್ ತಿಳಿಸಿದ್ದಾರೆ’ ಎಂದು ಪೊಲೀಸರು ಹೇಳಿದರು.</p>.<p>‘ಪ್ರಕರಣದ ತನಿಖೆಯನ್ನು ತೀವ್ರಗೊಳಿಸಲಾಗಿದೆ. ಕೃತ್ಯಕ್ಕೆ ಯಾವ ಮಾದರಿಯ ಗನ್ ಬಳಸಲಾಗಿತ್ತು ಎಂಬುದನ್ನು ಪರಿಶೀಲಿಸಲಾಗುತ್ತಿದೆ. ಕೃತ್ಯ ನಡೆದ ಸ್ಥಳದ ಸುತ್ತಮುತ್ತ ಅಳವಡಿಸಿರುವ ಸಿ.ಸಿ.ಟಿ.ವಿ ಕ್ಯಾಮೆರಾಗಳಲ್ಲಿ ಸೆರೆಯಾದ ದೃಶ್ಯಾವಳಿ ಪರಿಶೀಲನೆ ನಡೆಸಲಾಗುತ್ತಿದೆ’ ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>