<p><strong>ಬೆಂಗಳೂರು</strong>: ಬಿಸಿಲು, ಮಳೆ ಎನ್ನದೇ ಹಗಲಿರುಳು ದುಡಿಯುವ ರೈತರ ಉತ್ಪನ್ನಗಳಿಗೆ ಉತ್ತಮ ಬೆಲೆ ಸಿಗುತ್ತಿಲ್ಲ. ರಾಜ್ಯ ಸರ್ಕಾರ ಈ ಬಗ್ಗೆ ಗಮನ ಹರಿಸಿ, ವೈಜ್ಞಾನಿಕವಾದ ಬೆಲೆ ನೀಡಬೇಕು’ ಎಂದು ರಾಜ್ಯಸಭಾ ಸದಸ್ಯ ಎಚ್.ಡಿ. ದೇವೇಗೌಡ ಒತ್ತಾಯಿಸಿದರು.</p>.<p>ತೋಟಗಾರಿಕೆ ಇಲಾಖೆ ಹಾಗೂ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮದ ಸಹಯೋಗದಲ್ಲಿ ಕಬ್ಬನ್ ಉದ್ಯಾನದಲ್ಲಿ ನಡೆಯುತ್ತಿರುವ ಮಾವು-ಹಲಸು ಮೇಳಕ್ಕೆ ಸೋಮವಾರ ಭೇಟಿ ನೀಡಿ, ವಿವಿಧ ಮಳಿಗೆಗಳನ್ನು ವೀಕ್ಷಿಸಿದರು. ಅಲ್ಲಿನ ರೈತರೊಂದಿಗೆ ಮಾತುಕತೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.</p>.<p>‘ರೈತನ ಕಷ್ಟಕ್ಕೆ ತಕ್ಕ ಪ್ರತಿಫಲ ಸಿಗಬೇಕು. ರೈತರಿಗೆ ಅನುಕೂಲವಾಗುವಂತೆ ಅಗತ್ಯ ಪ್ರಮಾಣದಲ್ಲಿ ಶೈತ್ಯಾಗಾರಗಳನ್ನು ಸ್ಥಾಪಿಸಬೇಕು. ನನ್ನ ಶಕ್ತಿ ಇರುವವರೆಗೂ ರೈತರ ಪರವಾಗಿ ಹೋರಾಟ ಮಾಡುತ್ತೇನೆ’ ಎಂದು ತಿಳಿಸಿದರು.</p>.<p>‘ರೈತರಿಂದ ನೇರವಾಗಿ ಗುಣಮಟ್ಟದ ಕಾರ್ಬೈಡ್ ಮುಕ್ತ ಹಣ್ಣುಗಳನ್ನು ಖರೀದಿಸಲು ಮೇಳದಲ್ಲಿ ಅವಕಾಶ ನೀಡಲಾಗಿದೆ. ಮೇಳವು ಮೇ 17 ರವರೆಗೆ ನಡೆಯಲಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡಿ, ರೈತರನ್ನು ಪ್ರೋತ್ಸಾಹಿಸಬೇಕು’ ಎಂದು ನಿಗಮದ ಅಧ್ಯಕ್ಷ ಡಾ.ಬಿ.ಸಿ. ಮುದ್ದುಗಂಗಾಧರ್ ತಿಳಿಸಿದರು.</p>.<p>ನಿಗಮದ ವ್ಯವಸ್ಥಾಪಕ ನಿರ್ದೇಶಕ ವೇದಮೂರ್ತಿ ಮಾತನಾಡಿ, ‘ರೈತರಿಗೆ ನೇರವಾಗಿ ಮಾರುಕಟ್ಟೆ ಸೌಲಭ್ಯ ಒದಗಿಸಿ ಗ್ರಾಹಕರಿಗೆ ಕಾರ್ಬೈಡ್ ಮುಕ್ತ, ರುಚಿಕರ ಹಣ್ಣುಗಳನ್ನು ಕಡಿಮೆ ದರದಲ್ಲಿ ಲಭ್ಯವಾಗುವಂತೆ ಮಾಡುವುದು ಮೇಳದ ಉದ್ದೇಶವಾಗಿದೆ. ಕಳೆದ ನಾಲ್ಕು ದಿನಗಳಲ್ಲಿ ಅಂದಾಜು 8 ರಿಂದ 10 ಟನ್ನಷ್ಟು ಮಾವು ಮಾರಾಟವಾಗಿದೆ. ಮೇ 28 ರಿಂದ ಲಾಲ್ಬಾಗ್ನಲ್ಲಿಯೂ ಮಾವು–ಹಲಸಿನ ಮೇಳ ಆಯೋಜಿಸ ಲಾಗುವುದು’ ಎಂದರು.</p>.<p>ಈ ಸಂದರ್ಭದಲ್ಲಿ ಮಾಜಿ ಶಾಸಕಎಚ್.ಎಂ. ರಮೇಶ್ ಗೌಡ, ತೋಟಗಾರಿಕೆಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260512-4-1324644736</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಬಿಸಿಲು, ಮಳೆ ಎನ್ನದೇ ಹಗಲಿರುಳು ದುಡಿಯುವ ರೈತರ ಉತ್ಪನ್ನಗಳಿಗೆ ಉತ್ತಮ ಬೆಲೆ ಸಿಗುತ್ತಿಲ್ಲ. ರಾಜ್ಯ ಸರ್ಕಾರ ಈ ಬಗ್ಗೆ ಗಮನ ಹರಿಸಿ, ವೈಜ್ಞಾನಿಕವಾದ ಬೆಲೆ ನೀಡಬೇಕು’ ಎಂದು ರಾಜ್ಯಸಭಾ ಸದಸ್ಯ ಎಚ್.ಡಿ. ದೇವೇಗೌಡ ಒತ್ತಾಯಿಸಿದರು.</p>.<p>ತೋಟಗಾರಿಕೆ ಇಲಾಖೆ ಹಾಗೂ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮದ ಸಹಯೋಗದಲ್ಲಿ ಕಬ್ಬನ್ ಉದ್ಯಾನದಲ್ಲಿ ನಡೆಯುತ್ತಿರುವ ಮಾವು-ಹಲಸು ಮೇಳಕ್ಕೆ ಸೋಮವಾರ ಭೇಟಿ ನೀಡಿ, ವಿವಿಧ ಮಳಿಗೆಗಳನ್ನು ವೀಕ್ಷಿಸಿದರು. ಅಲ್ಲಿನ ರೈತರೊಂದಿಗೆ ಮಾತುಕತೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.</p>.<p>‘ರೈತನ ಕಷ್ಟಕ್ಕೆ ತಕ್ಕ ಪ್ರತಿಫಲ ಸಿಗಬೇಕು. ರೈತರಿಗೆ ಅನುಕೂಲವಾಗುವಂತೆ ಅಗತ್ಯ ಪ್ರಮಾಣದಲ್ಲಿ ಶೈತ್ಯಾಗಾರಗಳನ್ನು ಸ್ಥಾಪಿಸಬೇಕು. ನನ್ನ ಶಕ್ತಿ ಇರುವವರೆಗೂ ರೈತರ ಪರವಾಗಿ ಹೋರಾಟ ಮಾಡುತ್ತೇನೆ’ ಎಂದು ತಿಳಿಸಿದರು.</p>.<p>‘ರೈತರಿಂದ ನೇರವಾಗಿ ಗುಣಮಟ್ಟದ ಕಾರ್ಬೈಡ್ ಮುಕ್ತ ಹಣ್ಣುಗಳನ್ನು ಖರೀದಿಸಲು ಮೇಳದಲ್ಲಿ ಅವಕಾಶ ನೀಡಲಾಗಿದೆ. ಮೇಳವು ಮೇ 17 ರವರೆಗೆ ನಡೆಯಲಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡಿ, ರೈತರನ್ನು ಪ್ರೋತ್ಸಾಹಿಸಬೇಕು’ ಎಂದು ನಿಗಮದ ಅಧ್ಯಕ್ಷ ಡಾ.ಬಿ.ಸಿ. ಮುದ್ದುಗಂಗಾಧರ್ ತಿಳಿಸಿದರು.</p>.<p>ನಿಗಮದ ವ್ಯವಸ್ಥಾಪಕ ನಿರ್ದೇಶಕ ವೇದಮೂರ್ತಿ ಮಾತನಾಡಿ, ‘ರೈತರಿಗೆ ನೇರವಾಗಿ ಮಾರುಕಟ್ಟೆ ಸೌಲಭ್ಯ ಒದಗಿಸಿ ಗ್ರಾಹಕರಿಗೆ ಕಾರ್ಬೈಡ್ ಮುಕ್ತ, ರುಚಿಕರ ಹಣ್ಣುಗಳನ್ನು ಕಡಿಮೆ ದರದಲ್ಲಿ ಲಭ್ಯವಾಗುವಂತೆ ಮಾಡುವುದು ಮೇಳದ ಉದ್ದೇಶವಾಗಿದೆ. ಕಳೆದ ನಾಲ್ಕು ದಿನಗಳಲ್ಲಿ ಅಂದಾಜು 8 ರಿಂದ 10 ಟನ್ನಷ್ಟು ಮಾವು ಮಾರಾಟವಾಗಿದೆ. ಮೇ 28 ರಿಂದ ಲಾಲ್ಬಾಗ್ನಲ್ಲಿಯೂ ಮಾವು–ಹಲಸಿನ ಮೇಳ ಆಯೋಜಿಸ ಲಾಗುವುದು’ ಎಂದರು.</p>.<p>ಈ ಸಂದರ್ಭದಲ್ಲಿ ಮಾಜಿ ಶಾಸಕಎಚ್.ಎಂ. ರಮೇಶ್ ಗೌಡ, ತೋಟಗಾರಿಕೆಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260512-4-1324644736</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>