<p><strong>ಬೆಂಗಳೂರು:</strong> ‘ಬದಲಾದ ಜೀವನಶೈಲಿಯಿಂದಾಗಿ ಹೃದಯಾಘಾತ, ಕ್ಯಾನ್ಸರ್, ಮೂತ್ರಪಿಂಡ ವೈಫಲ್ಯದಂತಹ ಸಾಂಕ್ರಾಮಿಕವಲ್ಲದ ರೋಗಗಳ ಪ್ರಕರಣಗಳು ಹೆಚ್ಚಳವಾಗುತ್ತಿವೆ’ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕಳವಳ ವ್ಯಕ್ತಪಡಿಸಿದರು. ಮಿಷನ್ ರಸ್ತೆಯಲ್ಲಿ ನಿರ್ಮಾಣವಾಗಿರುವ ಎನ್ಯು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಉದ್ಘಾಟಿಸಿ, ಮಾತನಾಡಿದರು.</p>.<p>‘ಆರೋಗ್ಯ ಕೆಟ್ಟ ನಂತರ ಚಿಕಿತ್ಸೆಯ ಕಡೆಗೆ ಗಮನ ನೀಡುವ ಬದಲು, ಅನಾರೋಗ್ಯ ಸಮಸ್ಯೆಗಳು ಬರದಂತೆ ಎಚ್ಚರ ವಹಿಸ ಬೇಕು. ಹಿಂದೆ ಸಾಂಕ್ರಾಮಿಕ ರೋಗಗಳು ಹೆಚ್ಚಾಗಿ ಕಾಣಿಸಿಕೊಳ್ಳು ತ್ತಿದ್ದವು. ವೈದ್ಯಕೀಯ ಕ್ಷೇತ್ರದ ಪ್ರಗತಿಯಿಂದ ಆ ರೋಗಗಳನ್ನು ಗುಣಪಡಿಸಲು ಸಾಧ್ಯವಾಗಿದೆ. ಸಾಂಕ್ರಾಮಿಕವಲ್ಲದ ರೋಗಗಳಿಗೆ ಕಡಿವಾಣ ಹಾಕಲು ಆರೋಗ್ಯಕರ ಜೀವನಶೈಲಿ ಅಳವಡಿಸಿಕೊಳ್ಳುವುದು ಮುಖ್ಯವಾಗುತ್ತದೆ’ ಎಂದರು.</p>.<p>‘ವೈದ್ಯಕೀಯ ಕ್ಷೇತ್ರ ವೇಗವಾಗಿ ಬೆಳವಣಿಗೆ ಹೊಂದುತ್ತಿದೆ. ಹೊಸ ತಂತ್ರಜ್ಞಾನಗಳ ಅಳವಡಿಕೆಯ ಜತೆಗೆ, ಚಿಕಿತ್ಸೆಯಲ್ಲಿಯೂ ದೊಡ್ಡ ಮಟ್ಟದ ಕ್ರಾಂತಿಯಾಗಿದೆ’ ಎಂದರು.</p>.<p>ಸಂಸದರಾದ ಡಾ.ಸಿ.ಎನ್. ಮಂಜುನಾಥ್, ಪಿ.ಸಿ.ಮೋಹನ್, ಚಿತ್ರನಟ ರಮೇಶ್ ಅರವಿಂದ್, ಎನ್ಯು ಆಸ್ಪತ್ರೆಯ ಅಧ್ಯಕ್ಷ ಡಾ. ವೆಂಕಟೇಶ್ ಕೃಷ್ಣಮೂರ್ತಿ, ವ್ಯವಸ್ಥಾಪಕ ನಿರ್ದೇಶಕ ಡಾ. ಪ್ರಸನ್ನ ವೆಂಕಟೇಶ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಬದಲಾದ ಜೀವನಶೈಲಿಯಿಂದಾಗಿ ಹೃದಯಾಘಾತ, ಕ್ಯಾನ್ಸರ್, ಮೂತ್ರಪಿಂಡ ವೈಫಲ್ಯದಂತಹ ಸಾಂಕ್ರಾಮಿಕವಲ್ಲದ ರೋಗಗಳ ಪ್ರಕರಣಗಳು ಹೆಚ್ಚಳವಾಗುತ್ತಿವೆ’ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕಳವಳ ವ್ಯಕ್ತಪಡಿಸಿದರು. ಮಿಷನ್ ರಸ್ತೆಯಲ್ಲಿ ನಿರ್ಮಾಣವಾಗಿರುವ ಎನ್ಯು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಉದ್ಘಾಟಿಸಿ, ಮಾತನಾಡಿದರು.</p>.<p>‘ಆರೋಗ್ಯ ಕೆಟ್ಟ ನಂತರ ಚಿಕಿತ್ಸೆಯ ಕಡೆಗೆ ಗಮನ ನೀಡುವ ಬದಲು, ಅನಾರೋಗ್ಯ ಸಮಸ್ಯೆಗಳು ಬರದಂತೆ ಎಚ್ಚರ ವಹಿಸ ಬೇಕು. ಹಿಂದೆ ಸಾಂಕ್ರಾಮಿಕ ರೋಗಗಳು ಹೆಚ್ಚಾಗಿ ಕಾಣಿಸಿಕೊಳ್ಳು ತ್ತಿದ್ದವು. ವೈದ್ಯಕೀಯ ಕ್ಷೇತ್ರದ ಪ್ರಗತಿಯಿಂದ ಆ ರೋಗಗಳನ್ನು ಗುಣಪಡಿಸಲು ಸಾಧ್ಯವಾಗಿದೆ. ಸಾಂಕ್ರಾಮಿಕವಲ್ಲದ ರೋಗಗಳಿಗೆ ಕಡಿವಾಣ ಹಾಕಲು ಆರೋಗ್ಯಕರ ಜೀವನಶೈಲಿ ಅಳವಡಿಸಿಕೊಳ್ಳುವುದು ಮುಖ್ಯವಾಗುತ್ತದೆ’ ಎಂದರು.</p>.<p>‘ವೈದ್ಯಕೀಯ ಕ್ಷೇತ್ರ ವೇಗವಾಗಿ ಬೆಳವಣಿಗೆ ಹೊಂದುತ್ತಿದೆ. ಹೊಸ ತಂತ್ರಜ್ಞಾನಗಳ ಅಳವಡಿಕೆಯ ಜತೆಗೆ, ಚಿಕಿತ್ಸೆಯಲ್ಲಿಯೂ ದೊಡ್ಡ ಮಟ್ಟದ ಕ್ರಾಂತಿಯಾಗಿದೆ’ ಎಂದರು.</p>.<p>ಸಂಸದರಾದ ಡಾ.ಸಿ.ಎನ್. ಮಂಜುನಾಥ್, ಪಿ.ಸಿ.ಮೋಹನ್, ಚಿತ್ರನಟ ರಮೇಶ್ ಅರವಿಂದ್, ಎನ್ಯು ಆಸ್ಪತ್ರೆಯ ಅಧ್ಯಕ್ಷ ಡಾ. ವೆಂಕಟೇಶ್ ಕೃಷ್ಣಮೂರ್ತಿ, ವ್ಯವಸ್ಥಾಪಕ ನಿರ್ದೇಶಕ ಡಾ. ಪ್ರಸನ್ನ ವೆಂಕಟೇಶ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>