<p><strong>ಬೆಂಗಳೂರು</strong>: ನಗರದ ಹಲವು ಪ್ರದೇಶಗಳಲ್ಲಿ ಶನಿವಾರ ಗಾಳಿ, ಮಳೆ ಸುರಿದು ವಾತಾವರಣ ತಂಪಾಗಿದೆ.</p>.<p>ಬೆಂಗಳೂರು ಉತ್ತರ ತಾಲ್ಲೂಕಿನ ಚೊಕ್ಕಸಂದ್ರ, ಬಾಗಲಕುಂಟೆ ಭಾಗದಲ್ಲಿ 4 ಸೆಂ.ಮೀಗೂ ಅಧಿಕ ಮಳೆಯಾಗಿದೆ. ತಗ್ಗು ಪ್ರದೇಶಗಳಲ್ಲಿ ನೀರು ನಿಂತಿದೆ. ಚಿಕ್ಕಬಾಣಾವರ ಭಾಗದಲ್ಲಿ (ರೈಲ್ವೆ ಕೆಳಸೇತುವೆ) ಪ್ರದೇಶದಲ್ಲಿ ನೀರು ನಿಂತು, ದ್ವಿಚಕ್ರ ವಾಹನ ಸವಾರರು ಪರದಾಡುವಂತಾಯಿತು.</p>.<p>ದೊಡ್ಡಬಿದರಕಲ್ಲು, ವಿದ್ಯಾರಣ್ಯಪುರಂ, ಪೀಣ್ಯ ಕೈಗಾರಿಕಾ ಪ್ರದೇಶ, ನಾಗಪುರ, ಮಾದಾವರ, ಸೋಲದೇವನಹಳ್ಳಿ, ಎಂಟನೇ ಮೈಲಿ, ದಾಸರಹಳ್ಳಿ, ಹೆಸರಘಟ್ಟ ರಸ್ತೆ, ಸುಂಕದಕಟ್ಟೆ ಭಾಗದಲ್ಲಿ ಹೆಚ್ಚು ಮಳೆಯಾಗಿದೆ. ಕೆಲವೆಡೆ ತುಂತುರು ಮಳೆ ಸುರಿಯತೊಡಗಿತು.</p>.<p>ವಿಜಯನಗರ, ರಾಜಾಜಿನಗರ, ಎಂ.ಜಿ.ರಸ್ತೆ, ಮಲ್ಲೇಶ್ವರಂ, ಚಂದ್ರಾಲೇಔಟ್, ಮಾಗಡಿ ರಸ್ತೆ, ದೀಪಾಂಜಲಿ ನಗರ, ಮೈಸೂರು ರೋಡ್, ನಾಗರಭಾವಿ, ಮೂಡಲಪಾಳ್ಯ, ಗೋವಿಂದರಾಜನಗರ, ರಾಜರಾಜೇಶ್ವರಿ ನಗರ ಸೇರಿ ಹಲವೆಡೆ ಉತ್ತಮ ಮಳೆಯಾಗಿದೆ. </p>.<p>ಮಧ್ಯಾಹ್ನದಿಂದಲೇ ಮೋಡ ಕವಿದ ವಾತಾವರಣ ಇತ್ತು, ಸಂಜೆ ಗುಡುಗು ಸಹಿತ ಹಲವೆಡೆ ಮಳೆ ಸುರಿಯಿತು. ಕೆಲವರು ಕೊಡೆ ಹಿಡಿದು ರಸ್ತೆಯಲ್ಲಿ ಸಾಗಿದರೆ, ಮತ್ತೆ ಕೆಲವರು ತೊಯ್ದುಕೊಂಡು ಹೋದರು.</p>.<p>ಮಳೆಯೊಂದಿಗೆ ಗಾಳಿ ವೇಗವೂ ಹೆಚ್ಚಾಗಿದ್ದು, ಕೆಲವು ಪ್ರದೇಶಗಳಲ್ಲಿ ಮರದ ಕೊಂಬೆಗಳು ಬಿದ್ದಿವೆ. ಕೆಲವು ರಸ್ತೆಗಳಲ್ಲಿ ಮಳೆ ನೀರು ತುಂಬಿಕೊಂಡಿದ್ದು, ಟ್ರಾಫಿಕ್ ಹೆಚ್ಚಾಗಿದೆ. ಇದರಿಂದ ವಾಹನ ಸವಾರರು ಪರದಾಡುವಂತಾಗಿದೆ. ರಾತ್ರಿ ಹಲವೆಡೆ ಮಳೆ ಬಿರುಸು ಪಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ನಗರದ ಹಲವು ಪ್ರದೇಶಗಳಲ್ಲಿ ಶನಿವಾರ ಗಾಳಿ, ಮಳೆ ಸುರಿದು ವಾತಾವರಣ ತಂಪಾಗಿದೆ.</p>.<p>ಬೆಂಗಳೂರು ಉತ್ತರ ತಾಲ್ಲೂಕಿನ ಚೊಕ್ಕಸಂದ್ರ, ಬಾಗಲಕುಂಟೆ ಭಾಗದಲ್ಲಿ 4 ಸೆಂ.ಮೀಗೂ ಅಧಿಕ ಮಳೆಯಾಗಿದೆ. ತಗ್ಗು ಪ್ರದೇಶಗಳಲ್ಲಿ ನೀರು ನಿಂತಿದೆ. ಚಿಕ್ಕಬಾಣಾವರ ಭಾಗದಲ್ಲಿ (ರೈಲ್ವೆ ಕೆಳಸೇತುವೆ) ಪ್ರದೇಶದಲ್ಲಿ ನೀರು ನಿಂತು, ದ್ವಿಚಕ್ರ ವಾಹನ ಸವಾರರು ಪರದಾಡುವಂತಾಯಿತು.</p>.<p>ದೊಡ್ಡಬಿದರಕಲ್ಲು, ವಿದ್ಯಾರಣ್ಯಪುರಂ, ಪೀಣ್ಯ ಕೈಗಾರಿಕಾ ಪ್ರದೇಶ, ನಾಗಪುರ, ಮಾದಾವರ, ಸೋಲದೇವನಹಳ್ಳಿ, ಎಂಟನೇ ಮೈಲಿ, ದಾಸರಹಳ್ಳಿ, ಹೆಸರಘಟ್ಟ ರಸ್ತೆ, ಸುಂಕದಕಟ್ಟೆ ಭಾಗದಲ್ಲಿ ಹೆಚ್ಚು ಮಳೆಯಾಗಿದೆ. ಕೆಲವೆಡೆ ತುಂತುರು ಮಳೆ ಸುರಿಯತೊಡಗಿತು.</p>.<p>ವಿಜಯನಗರ, ರಾಜಾಜಿನಗರ, ಎಂ.ಜಿ.ರಸ್ತೆ, ಮಲ್ಲೇಶ್ವರಂ, ಚಂದ್ರಾಲೇಔಟ್, ಮಾಗಡಿ ರಸ್ತೆ, ದೀಪಾಂಜಲಿ ನಗರ, ಮೈಸೂರು ರೋಡ್, ನಾಗರಭಾವಿ, ಮೂಡಲಪಾಳ್ಯ, ಗೋವಿಂದರಾಜನಗರ, ರಾಜರಾಜೇಶ್ವರಿ ನಗರ ಸೇರಿ ಹಲವೆಡೆ ಉತ್ತಮ ಮಳೆಯಾಗಿದೆ. </p>.<p>ಮಧ್ಯಾಹ್ನದಿಂದಲೇ ಮೋಡ ಕವಿದ ವಾತಾವರಣ ಇತ್ತು, ಸಂಜೆ ಗುಡುಗು ಸಹಿತ ಹಲವೆಡೆ ಮಳೆ ಸುರಿಯಿತು. ಕೆಲವರು ಕೊಡೆ ಹಿಡಿದು ರಸ್ತೆಯಲ್ಲಿ ಸಾಗಿದರೆ, ಮತ್ತೆ ಕೆಲವರು ತೊಯ್ದುಕೊಂಡು ಹೋದರು.</p>.<p>ಮಳೆಯೊಂದಿಗೆ ಗಾಳಿ ವೇಗವೂ ಹೆಚ್ಚಾಗಿದ್ದು, ಕೆಲವು ಪ್ರದೇಶಗಳಲ್ಲಿ ಮರದ ಕೊಂಬೆಗಳು ಬಿದ್ದಿವೆ. ಕೆಲವು ರಸ್ತೆಗಳಲ್ಲಿ ಮಳೆ ನೀರು ತುಂಬಿಕೊಂಡಿದ್ದು, ಟ್ರಾಫಿಕ್ ಹೆಚ್ಚಾಗಿದೆ. ಇದರಿಂದ ವಾಹನ ಸವಾರರು ಪರದಾಡುವಂತಾಗಿದೆ. ರಾತ್ರಿ ಹಲವೆಡೆ ಮಳೆ ಬಿರುಸು ಪಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>