<p><strong>ಬೆಂಗಳೂರು:</strong> ನಗರದಲ್ಲಿ ಬುಧವಾರ ಸಂಜೆಯಿಂದ ತದರಾತ್ರಿವರೆಗೂ ಹಲವು ಪ್ರದೇಶಗಳಲ್ಲಿ ಭಾರಿ ಮಳೆ ಸುರಿಯಿತು.</p>.<p>ನಗರದಲ್ಲಿ ಕೆಲವು ದಿನಗಳಿಂದ ಮಳೆ ಬಿಡುವು ನೀಡಿದ್ದರಿಂದ ಉಷ್ಣಾಂಶ ಹೆಚ್ಚಾಗಿತ್ತು. ಬುಧವಾರ ಬೆಳಿಗ್ಗೆಯಿಂದ ಮೋಡದ ವಾತಾವರಣವಿತ್ತು. ಸಂಜೆ ನಂತರ ಗುಡುಗು, ಬಿರುಗಾಳಿ ಸಹಿತ ಮಳೆಯಾಯಿತು.</p>.<p>ಹುಣಸಮಾರನಹಳ್ಳಿಯಲ್ಲಿ ಮಳೆ ನೀರು ನಿಂತಿದ್ದರಿಂದ ವಿಮಾನ ನಿಲ್ದಾಣ ರಸ್ತೆ ಕಡೆಗೆ ನಿಧಾನಗತಿಯ ಸಂಚಾರವಿತ್ತು. </p>.<p>ಮೈಸೂರು ರಸ್ತೆ, ಪಶ್ಚಿಮ ಕಾರ್ಡ್ ರಸ್ತೆ, ವಿಠ್ಠಲ ಮಲ್ಯ ರಸ್ತೆ, ಜೆಸಿ ರಸ್ತೆ, ಬಳ್ಳಾರಿ ರಸ್ತೆಗಳಲ್ಲಿ ನೀರು ನಿಂತು ವಾಹನ ಸವಾರರು ಪರದಾಡಿದರು. </p>.<p><strong>ಹೆಚ್ಚು ಮಳೆ:</strong> ನಾಗಪುರ, ಬಸವೇಶ್ವರ ನಗರದಲ್ಲಿ ತಲಾ 3.5 ಸೆಂ.ಮೀ, ವಿದ್ಯಾಪೀಠದಲ್ಲಿ ತಲಾ <br>3 ಸೆಂ.ಮೀ, ರಾಜಾಜಿನಗರ, ಪಟ್ಟಾಭಿರಾಮನಗರ, ಹಂಪಿನಗರ, ಜಕ್ಕೂರು, ರಾಜಮಹಲ್ ಗುಟ್ಟಹಳ್ಳಿಯಲ್ಲಿ ತಲಾ 2.5 ಸೆಂ.ಮೀ, ಕೋರಮಂಗಲ, ರಾಜರಾಜೇಶ್ವರಿ ನಗರ, ದಯಾನಂದ ನಗರ, ಪೀಣ್ಯ ಕೈಗಾರಿಕೆ ಪ್ರದೇಶ, ಚೌಡೇಶ್ವರಿ, ಯಲಹಂಕ, ನಂದಿನಿ ಲೇಔಟ್, ಹೆಮ್ಮಿಗೆಪುರದಲ್ಲಿ ತಲಾ 2 ಸೆಂ.ಮೀ. ಮಳೆಯಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ನಗರದಲ್ಲಿ ಬುಧವಾರ ಸಂಜೆಯಿಂದ ತದರಾತ್ರಿವರೆಗೂ ಹಲವು ಪ್ರದೇಶಗಳಲ್ಲಿ ಭಾರಿ ಮಳೆ ಸುರಿಯಿತು.</p>.<p>ನಗರದಲ್ಲಿ ಕೆಲವು ದಿನಗಳಿಂದ ಮಳೆ ಬಿಡುವು ನೀಡಿದ್ದರಿಂದ ಉಷ್ಣಾಂಶ ಹೆಚ್ಚಾಗಿತ್ತು. ಬುಧವಾರ ಬೆಳಿಗ್ಗೆಯಿಂದ ಮೋಡದ ವಾತಾವರಣವಿತ್ತು. ಸಂಜೆ ನಂತರ ಗುಡುಗು, ಬಿರುಗಾಳಿ ಸಹಿತ ಮಳೆಯಾಯಿತು.</p>.<p>ಹುಣಸಮಾರನಹಳ್ಳಿಯಲ್ಲಿ ಮಳೆ ನೀರು ನಿಂತಿದ್ದರಿಂದ ವಿಮಾನ ನಿಲ್ದಾಣ ರಸ್ತೆ ಕಡೆಗೆ ನಿಧಾನಗತಿಯ ಸಂಚಾರವಿತ್ತು. </p>.<p>ಮೈಸೂರು ರಸ್ತೆ, ಪಶ್ಚಿಮ ಕಾರ್ಡ್ ರಸ್ತೆ, ವಿಠ್ಠಲ ಮಲ್ಯ ರಸ್ತೆ, ಜೆಸಿ ರಸ್ತೆ, ಬಳ್ಳಾರಿ ರಸ್ತೆಗಳಲ್ಲಿ ನೀರು ನಿಂತು ವಾಹನ ಸವಾರರು ಪರದಾಡಿದರು. </p>.<p><strong>ಹೆಚ್ಚು ಮಳೆ:</strong> ನಾಗಪುರ, ಬಸವೇಶ್ವರ ನಗರದಲ್ಲಿ ತಲಾ 3.5 ಸೆಂ.ಮೀ, ವಿದ್ಯಾಪೀಠದಲ್ಲಿ ತಲಾ <br>3 ಸೆಂ.ಮೀ, ರಾಜಾಜಿನಗರ, ಪಟ್ಟಾಭಿರಾಮನಗರ, ಹಂಪಿನಗರ, ಜಕ್ಕೂರು, ರಾಜಮಹಲ್ ಗುಟ್ಟಹಳ್ಳಿಯಲ್ಲಿ ತಲಾ 2.5 ಸೆಂ.ಮೀ, ಕೋರಮಂಗಲ, ರಾಜರಾಜೇಶ್ವರಿ ನಗರ, ದಯಾನಂದ ನಗರ, ಪೀಣ್ಯ ಕೈಗಾರಿಕೆ ಪ್ರದೇಶ, ಚೌಡೇಶ್ವರಿ, ಯಲಹಂಕ, ನಂದಿನಿ ಲೇಔಟ್, ಹೆಮ್ಮಿಗೆಪುರದಲ್ಲಿ ತಲಾ 2 ಸೆಂ.ಮೀ. ಮಳೆಯಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>