<p><strong>ಬೆಂಗಳೂರು:</strong> ಹೆಬ್ಬಾಳ ವಿಧಾನ ಸಭಾ ಕ್ಷೇತ್ರದಲ್ಲಿ ನವೀಕರಣಗೊಳಿಸಿರುವ ಭೂಪಸಂದ್ರದ ಗೆದ್ದಲಹಳ್ಳಿ, ಕೆಇಬಿ, ಎಸಿಎಸ್ ಬಡಾವಣೆ, ಪೋಸ್ಟಲ್ ಕಾಲೊನಿ ಹಾಗೂ ನಾಗಶೆಟ್ಟಿಹಳ್ಳಿಯ ಎನ್ಜಿಇಎಫ್ ಬಡಾವಣೆಯ ಉದ್ಯಾನಗಳನ್ನು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಮಂಗಳವಾರ ಉದ್ಘಾಟಿಸಿದರು.</p>.<p>ನಂತರ ಮಾತನಾಡಿದ ಅವರು, ‘ರಾಜ್ಯ ಸರ್ಕಾರದ ₹30 ಕೋಟಿ ವಿಶೇಷಅನುದಾನದ ಅಡಿಯಲ್ಲಿ ಈ ಉದ್ಯಾನಗಳನ್ನು ನವೀಕರಣ ಮಾಡಲಾಗುತ್ತಿದೆ. ಇದೀಗ ಐದು ಉದ್ಯಾನಗಳನ್ನು ಅಭಿವೃದ್ಧಿಪಡಿಸಿ, ಉದ್ಘಾಟಿಸಲಾಗಿದೆ. ಇನ್ನುಳಿದಉದ್ಯಾನಗಳ ನವೀಕರಣ ಕಾಮಗಾರಿಗಳು ಪ್ರಗತಿಯಲ್ಲಿದ್ದು, ಹಂತಹಂತವಾಗಿ ಪೂರ್ಣಗೊಳಿಸಿ ಸಾರ್ವಜನಿಕರ ಬಳಕೆಗೆ ನೀಡಲಾಗುವುದು’ ಎಂದು ಭರವಸೆ ನೀಡಿದರು.</p>.<p>‘ಉದ್ಯಾನಗಳಲ್ಲಿ ವಾಯು ವಿಹಾರಿಗಳಿಗೆ ಅನುಕೂಲವಾಗುವಂತೆ ಪಾದಚಾರಿ ಮಾರ್ಗ, ವಿದ್ಯುತ್ ದೀಪಗಳ ಸೌಲಭ್ಯ, ಕುಡಿಯುವ ನೀರಿನ ವ್ಯವಸ್ಥೆ, ವ್ಯಾಯಾಮ ಮಾಡುವ ಸಲಕರಣೆಗಳನ್ನು ಅಳವಡಿಸಲಾಗಿದೆ. ಇದಲ್ಲದೇ, ಸದಾ ಹಸಿರಿನಿಂದ ಕಂಗೊಳಿಸುವಂತೆ ಮಾಡಲು ನಿರಂತರವಾಗಿ ಗಿಡ-ಮರಗಳಿಗೆ ನೀರು ಪೂರೈಕೆ ವ್ಯವಸ್ಥೆ ಇದ್ದು, ನೀರಿನ ಕೊರತೆ ಎದುರಾದರೆ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ’ ಎಂದರು.</p>.<p>‘ಮೊದಲ ಹಂತದಲ್ಲಿ 50 ಉದ್ಯಾನಗಳ ನವೀಕರಣ ಕಾಮಗಾರಿ ಕೈಗೊಂಡಿದ್ದು, ಇನ್ನೊಂದು ತಿಂಗಳಲ್ಲಿ ಪೂರ್ಣವಾಗಲಿದೆ. ಎರಡನೇ ಹಂತದಲ್ಲಿ ಉಳಿದ ಉದ್ಯಾನಗಳ ಅಭಿವೃದ್ಧಿ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗುವುದು’ ಎಂದು ತಿಳಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260513-4-2097068258</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಹೆಬ್ಬಾಳ ವಿಧಾನ ಸಭಾ ಕ್ಷೇತ್ರದಲ್ಲಿ ನವೀಕರಣಗೊಳಿಸಿರುವ ಭೂಪಸಂದ್ರದ ಗೆದ್ದಲಹಳ್ಳಿ, ಕೆಇಬಿ, ಎಸಿಎಸ್ ಬಡಾವಣೆ, ಪೋಸ್ಟಲ್ ಕಾಲೊನಿ ಹಾಗೂ ನಾಗಶೆಟ್ಟಿಹಳ್ಳಿಯ ಎನ್ಜಿಇಎಫ್ ಬಡಾವಣೆಯ ಉದ್ಯಾನಗಳನ್ನು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಮಂಗಳವಾರ ಉದ್ಘಾಟಿಸಿದರು.</p>.<p>ನಂತರ ಮಾತನಾಡಿದ ಅವರು, ‘ರಾಜ್ಯ ಸರ್ಕಾರದ ₹30 ಕೋಟಿ ವಿಶೇಷಅನುದಾನದ ಅಡಿಯಲ್ಲಿ ಈ ಉದ್ಯಾನಗಳನ್ನು ನವೀಕರಣ ಮಾಡಲಾಗುತ್ತಿದೆ. ಇದೀಗ ಐದು ಉದ್ಯಾನಗಳನ್ನು ಅಭಿವೃದ್ಧಿಪಡಿಸಿ, ಉದ್ಘಾಟಿಸಲಾಗಿದೆ. ಇನ್ನುಳಿದಉದ್ಯಾನಗಳ ನವೀಕರಣ ಕಾಮಗಾರಿಗಳು ಪ್ರಗತಿಯಲ್ಲಿದ್ದು, ಹಂತಹಂತವಾಗಿ ಪೂರ್ಣಗೊಳಿಸಿ ಸಾರ್ವಜನಿಕರ ಬಳಕೆಗೆ ನೀಡಲಾಗುವುದು’ ಎಂದು ಭರವಸೆ ನೀಡಿದರು.</p>.<p>‘ಉದ್ಯಾನಗಳಲ್ಲಿ ವಾಯು ವಿಹಾರಿಗಳಿಗೆ ಅನುಕೂಲವಾಗುವಂತೆ ಪಾದಚಾರಿ ಮಾರ್ಗ, ವಿದ್ಯುತ್ ದೀಪಗಳ ಸೌಲಭ್ಯ, ಕುಡಿಯುವ ನೀರಿನ ವ್ಯವಸ್ಥೆ, ವ್ಯಾಯಾಮ ಮಾಡುವ ಸಲಕರಣೆಗಳನ್ನು ಅಳವಡಿಸಲಾಗಿದೆ. ಇದಲ್ಲದೇ, ಸದಾ ಹಸಿರಿನಿಂದ ಕಂಗೊಳಿಸುವಂತೆ ಮಾಡಲು ನಿರಂತರವಾಗಿ ಗಿಡ-ಮರಗಳಿಗೆ ನೀರು ಪೂರೈಕೆ ವ್ಯವಸ್ಥೆ ಇದ್ದು, ನೀರಿನ ಕೊರತೆ ಎದುರಾದರೆ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ’ ಎಂದರು.</p>.<p>‘ಮೊದಲ ಹಂತದಲ್ಲಿ 50 ಉದ್ಯಾನಗಳ ನವೀಕರಣ ಕಾಮಗಾರಿ ಕೈಗೊಂಡಿದ್ದು, ಇನ್ನೊಂದು ತಿಂಗಳಲ್ಲಿ ಪೂರ್ಣವಾಗಲಿದೆ. ಎರಡನೇ ಹಂತದಲ್ಲಿ ಉಳಿದ ಉದ್ಯಾನಗಳ ಅಭಿವೃದ್ಧಿ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗುವುದು’ ಎಂದು ತಿಳಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260513-4-2097068258</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>