<p><strong>ಬೆಂಗಳೂರು:</strong> ಆಡುಗೋಡಿ ಠಾಣೆ ವ್ಯಾಪ್ತಿಯ ಪೇಯಿಂಗ್ ಗೆಸ್ಟ್ನಲ್ಲಿ (ಪಿ.ಜಿ) ವಾಸವಾಗಿದ್ದ ಯುವತಿಗೆ ಭವಿಷ್ಯ ಹೇಳುವ ನೆಪದಲ್ಲಿ ₹2.05 ಲಕ್ಷ ವಂಚಿಸಿರುವ ಘಟನೆ ನಡೆದಿದೆ. <br><br>21 ವರ್ಷದ ಯುವತಿ ನೀಡಿದ ದೂರಿನ ಮೇರೆಗೆ ಚಂದ್ರಶೇಖರ್ ಸುಗತ್ ಗುರೂಜಿ ಎಂಬುವರ ವಿರುದ್ಧ ಎಫ್ಐಆರ್ ದಾಖಲಾಗಿದೆ.</p>.<p>ಸಾಮಾಜಿಕ ಜಾಲತಾಣದಲ್ಲಿ ‘ಕಷ್ಟಕ್ಕೆ ಪರಿಹಾರ’ ಎಂಬ ಜಾಹೀರಾತು ಗಮನಿಸಿದ ಯುವತಿ, ತನಗೆ ಮದುವೆ ಆಗುತ್ತದೆಯೇ ಎಂಬ ಬಗ್ಗೆ ವಿಚಾರಿಸಿದ್ದಾರೆ. ಅದಕ್ಕೆ ಹಣ ಖರ್ಚಾಗುತ್ತದೆ ಎಂದು ಗುರೂಜಿ ಹೇಳಿದ್ದಾರೆ. ಗುರೂಜಿ ನೀಡಿದ ನಂಬರ್ಗೆ ಆನ್ಲೈನ್ ಮೂಲಕ ಹಂತ ಹಂತವಾಗಿ ₹2.05 ಲಕ್ಷ ವರ್ಗಾವಣೆ ಮಾಡಿದ್ದಾರೆ. ನಂತರ ಮತ್ತೆ ₹4 ಲಕ್ಷ ಕೇಳಿದಾಗ ಯುವತಿಗೆ ಅನುಮಾನ ಬಂದಿದೆ.</p>.<p>‘ಮದುವೆ ಬಗ್ಗೆ ಸುಳ್ಳು ಮಾಹಿತಿ ನೀಡಿದ್ದರಿಂದ ಹಣ ವಾಪಸ್ ಕೇಳಿದೆ. ಹಣ ನೀಡುವುದಿಲ್ಲ ಎಂದು ಗುರೂಜಿ ಬೆದರಿಕೆ ಹಾಕಿದ್ದಾರೆ’ ಎಂದು ಯುವತಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.</p>.<p>ಹಣ ವರ್ಗಾವಣೆ, ಮಾತುಕತೆ ಎಲ್ಲವೂ ಆನ್ಲೈನ್ ಮೂಲಕ ನಡೆದಿದೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಆಡುಗೋಡಿ ಠಾಣೆ ವ್ಯಾಪ್ತಿಯ ಪೇಯಿಂಗ್ ಗೆಸ್ಟ್ನಲ್ಲಿ (ಪಿ.ಜಿ) ವಾಸವಾಗಿದ್ದ ಯುವತಿಗೆ ಭವಿಷ್ಯ ಹೇಳುವ ನೆಪದಲ್ಲಿ ₹2.05 ಲಕ್ಷ ವಂಚಿಸಿರುವ ಘಟನೆ ನಡೆದಿದೆ. <br><br>21 ವರ್ಷದ ಯುವತಿ ನೀಡಿದ ದೂರಿನ ಮೇರೆಗೆ ಚಂದ್ರಶೇಖರ್ ಸುಗತ್ ಗುರೂಜಿ ಎಂಬುವರ ವಿರುದ್ಧ ಎಫ್ಐಆರ್ ದಾಖಲಾಗಿದೆ.</p>.<p>ಸಾಮಾಜಿಕ ಜಾಲತಾಣದಲ್ಲಿ ‘ಕಷ್ಟಕ್ಕೆ ಪರಿಹಾರ’ ಎಂಬ ಜಾಹೀರಾತು ಗಮನಿಸಿದ ಯುವತಿ, ತನಗೆ ಮದುವೆ ಆಗುತ್ತದೆಯೇ ಎಂಬ ಬಗ್ಗೆ ವಿಚಾರಿಸಿದ್ದಾರೆ. ಅದಕ್ಕೆ ಹಣ ಖರ್ಚಾಗುತ್ತದೆ ಎಂದು ಗುರೂಜಿ ಹೇಳಿದ್ದಾರೆ. ಗುರೂಜಿ ನೀಡಿದ ನಂಬರ್ಗೆ ಆನ್ಲೈನ್ ಮೂಲಕ ಹಂತ ಹಂತವಾಗಿ ₹2.05 ಲಕ್ಷ ವರ್ಗಾವಣೆ ಮಾಡಿದ್ದಾರೆ. ನಂತರ ಮತ್ತೆ ₹4 ಲಕ್ಷ ಕೇಳಿದಾಗ ಯುವತಿಗೆ ಅನುಮಾನ ಬಂದಿದೆ.</p>.<p>‘ಮದುವೆ ಬಗ್ಗೆ ಸುಳ್ಳು ಮಾಹಿತಿ ನೀಡಿದ್ದರಿಂದ ಹಣ ವಾಪಸ್ ಕೇಳಿದೆ. ಹಣ ನೀಡುವುದಿಲ್ಲ ಎಂದು ಗುರೂಜಿ ಬೆದರಿಕೆ ಹಾಕಿದ್ದಾರೆ’ ಎಂದು ಯುವತಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.</p>.<p>ಹಣ ವರ್ಗಾವಣೆ, ಮಾತುಕತೆ ಎಲ್ಲವೂ ಆನ್ಲೈನ್ ಮೂಲಕ ನಡೆದಿದೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>