<p>ಬೆಂಗಳೂರು: ಬೆಂಗಳೂರು ದಕ್ಷಿಣ ನಗರಪಾಲಿಕೆ ಆಯುಕ್ತ ಕೆ.ಎನ್.ರಮೇಶ್ ಭಾನುವಾರ ಎಚ್.ಎಸ್.ಆರ್. ಲೇಔಟ್ನಲ್ಲಿನ ತ್ಯಾಜ್ಯ ನಿರ್ವಹಣಾ ವ್ಯವಸ್ಥೆಯನ್ನು ಪರಿಶೀಲಿಸಿದರು.</p>.<p>ಈ ವೇಳೆ ಸಾರ್ವಜನಿಕರು ಮತ್ತು ಎಚ್.ಎಸ್.ಆರ್ ಸಿಟಿಜನ್ ಫೋರಂನ ಸ್ವಯಂಸೇವಕರು ಸ್ವಚ್ಛತೆಗೆ ಕೈಗೊಂಡಿರುವ ಕಾರ್ಯಗಳನ್ನು ಶ್ಲಾಘಿಸಿದರು. ಎಚ್.ಎಸ್.ಆರ್. ಲೇಔಟ್ನಲ್ಲಿನ ಒಣ ತ್ಯಾಜ್ಯ ಸಂಗ್ರಹಣಾ ಕೇಂದ್ರಕ್ಕೆ ಭೇಟಿ ನೀಡಿದ ಆಯುಕ್ತರು, ಅಲ್ಲಿ ಪ್ರತಿದಿನ ಸುಮಾರು 5 ಟನ್ ಒಣ ತ್ಯಾಜ್ಯವನ್ನು ಸಂಸ್ಕರಿಸುತ್ತಿರುವುದನ್ನು ವೀಕ್ಷಿಸಿದರು.</p>.<p>ತ್ಯಾಜ್ಯ ಸಂಗ್ರಹಣಾ ವಾಹನಗಳ ಕಾರ್ಯನಿರ್ವಹಣೆಯನ್ನು ಮೇಲ್ವಿಚಾರಣೆ ಮಾಡಲು ಸ್ಥಳೀಯ ನಿವಾಸಿಗಳು ಸ್ವಯಂಸೇವಕ ರನ್ನು ನೇಮಿಸಿಕೊಂಡಿರುವುದು ಮತ್ತು ಒಣ ತ್ಯಾಜ್ಯಕ್ಕಾಗಿ ಪ್ರತ್ಯೇಕ ವಾಹನವನ್ನು ನಿರ್ವಹಿಸುತ್ತಿರುವುದು ಮಾದರಿಯಾಗಿದೆ ಎಂದು ಶ್ಲಾಘಿಸಿದರು.</p>.<p>ಎಚ್.ಎಸ್.ಆರ್. ಲೇಔಟ್ 7ನೇ ಸೆಕ್ಟರ್, 8ನೇ ಮುಖ್ಯರಸ್ತೆ ಮತ್ತು 22ನೇ ಅಡ್ಡರಸ್ತೆಯಲ್ಲಿ ಸುಮಾರು 600 ಮನೆಗಳಿಂದ ಉತ್ಪತ್ತಿ ಆಗುವ 500 ಕೆ.ಜಿ. ಹಸಿ ಕಸವನ್ನು ಗೊಬ್ಬರವಾಗಿ ಪರಿವರ್ತಿಸಲಾಗುತ್ತಿದೆ. ಇದನ್ನು ಸ್ಥಳೀಯ ನಿವಾಸಿಗಳೇ ತಮ್ಮ ಉದ್ಯಾನಗಳಿಗೆ ಬಳಸಿಕೊಳ್ಳುತ್ತಿದ್ದಾರೆ.</p>.<p>ಇದಲ್ಲದೇ ದ.ರಾ. ಬೆಂದ್ರೆ ಪಾರ್ಕ್ನಲ್ಲಿ ಎಲೆಗಳಿಂದ ಗೊಬ್ಬರ ತಯಾರಿಸುವ ಪ್ರಕ್ರಿಯೆಯನ್ನು ಆಯುಕ್ತರು ವೀಕ್ಷಿಸಿದರು. ಎನ್ಜಿಒಗಳ ಸಹಯೋಗದಲ್ಲಿ ನಡೆಯುತ್ತಿ ರುವ ಈ ಕಾರ್ಯವು ಪರಿಸರ ಸ್ನೇಹಿಯಾಗಿದೆ ಎಂದು ಹೇಳಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260427-4-607814426</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಬೆಂಗಳೂರು ದಕ್ಷಿಣ ನಗರಪಾಲಿಕೆ ಆಯುಕ್ತ ಕೆ.ಎನ್.ರಮೇಶ್ ಭಾನುವಾರ ಎಚ್.ಎಸ್.ಆರ್. ಲೇಔಟ್ನಲ್ಲಿನ ತ್ಯಾಜ್ಯ ನಿರ್ವಹಣಾ ವ್ಯವಸ್ಥೆಯನ್ನು ಪರಿಶೀಲಿಸಿದರು.</p>.<p>ಈ ವೇಳೆ ಸಾರ್ವಜನಿಕರು ಮತ್ತು ಎಚ್.ಎಸ್.ಆರ್ ಸಿಟಿಜನ್ ಫೋರಂನ ಸ್ವಯಂಸೇವಕರು ಸ್ವಚ್ಛತೆಗೆ ಕೈಗೊಂಡಿರುವ ಕಾರ್ಯಗಳನ್ನು ಶ್ಲಾಘಿಸಿದರು. ಎಚ್.ಎಸ್.ಆರ್. ಲೇಔಟ್ನಲ್ಲಿನ ಒಣ ತ್ಯಾಜ್ಯ ಸಂಗ್ರಹಣಾ ಕೇಂದ್ರಕ್ಕೆ ಭೇಟಿ ನೀಡಿದ ಆಯುಕ್ತರು, ಅಲ್ಲಿ ಪ್ರತಿದಿನ ಸುಮಾರು 5 ಟನ್ ಒಣ ತ್ಯಾಜ್ಯವನ್ನು ಸಂಸ್ಕರಿಸುತ್ತಿರುವುದನ್ನು ವೀಕ್ಷಿಸಿದರು.</p>.<p>ತ್ಯಾಜ್ಯ ಸಂಗ್ರಹಣಾ ವಾಹನಗಳ ಕಾರ್ಯನಿರ್ವಹಣೆಯನ್ನು ಮೇಲ್ವಿಚಾರಣೆ ಮಾಡಲು ಸ್ಥಳೀಯ ನಿವಾಸಿಗಳು ಸ್ವಯಂಸೇವಕ ರನ್ನು ನೇಮಿಸಿಕೊಂಡಿರುವುದು ಮತ್ತು ಒಣ ತ್ಯಾಜ್ಯಕ್ಕಾಗಿ ಪ್ರತ್ಯೇಕ ವಾಹನವನ್ನು ನಿರ್ವಹಿಸುತ್ತಿರುವುದು ಮಾದರಿಯಾಗಿದೆ ಎಂದು ಶ್ಲಾಘಿಸಿದರು.</p>.<p>ಎಚ್.ಎಸ್.ಆರ್. ಲೇಔಟ್ 7ನೇ ಸೆಕ್ಟರ್, 8ನೇ ಮುಖ್ಯರಸ್ತೆ ಮತ್ತು 22ನೇ ಅಡ್ಡರಸ್ತೆಯಲ್ಲಿ ಸುಮಾರು 600 ಮನೆಗಳಿಂದ ಉತ್ಪತ್ತಿ ಆಗುವ 500 ಕೆ.ಜಿ. ಹಸಿ ಕಸವನ್ನು ಗೊಬ್ಬರವಾಗಿ ಪರಿವರ್ತಿಸಲಾಗುತ್ತಿದೆ. ಇದನ್ನು ಸ್ಥಳೀಯ ನಿವಾಸಿಗಳೇ ತಮ್ಮ ಉದ್ಯಾನಗಳಿಗೆ ಬಳಸಿಕೊಳ್ಳುತ್ತಿದ್ದಾರೆ.</p>.<p>ಇದಲ್ಲದೇ ದ.ರಾ. ಬೆಂದ್ರೆ ಪಾರ್ಕ್ನಲ್ಲಿ ಎಲೆಗಳಿಂದ ಗೊಬ್ಬರ ತಯಾರಿಸುವ ಪ್ರಕ್ರಿಯೆಯನ್ನು ಆಯುಕ್ತರು ವೀಕ್ಷಿಸಿದರು. ಎನ್ಜಿಒಗಳ ಸಹಯೋಗದಲ್ಲಿ ನಡೆಯುತ್ತಿ ರುವ ಈ ಕಾರ್ಯವು ಪರಿಸರ ಸ್ನೇಹಿಯಾಗಿದೆ ಎಂದು ಹೇಳಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260427-4-607814426</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>