<p><strong>ಬೆಂಗಳೂರು</strong>: ಕಲಾಸಿಪಾಳ್ಯ ಹಾಗೂ ಕುಂಬಳಗೂಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ದಾಳಿ ನಡೆಸಿ, ಪರವಾನಗಿ ಇಲ್ಲದೆ ದಾಸ್ತಾನು ಮಾಡಿದ್ದ ₹15.3 ಲಕ್ಷ ಮೌಲ್ಯದ ಪಟಾಕಿಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ. <br><br>ಕುಂಬಳಗೂಡು ಪೊಲೀಸ್ ಠಾಣೆ ವ್ಯಾಪ್ತಿಯ ಧನನಾಯಕನಹಳ್ಳಿಯ ಮನೆಯಲ್ಲಿ ಪರವಾನಗಿ ಇಲ್ಲದ ₹10.13 ಲಕ್ಷ ಮೌಲ್ಯದ 317 ಪಟಾಕಿ ಬಾಕ್ಸ್ಗಳನ್ನು ವಶಪಡಿಸಿಕೊಂಡು, ಸಮೃದ್ಧಿ ಲೇಔಟ್ ನಿವಾಸಿ ಶ್ರೀನಿವಾಸ್ ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ.</p>.<p>ಸುರಕ್ಷಿತ ಹಾಗೂ ಮುಂಜಾಗ್ರತಾ ಕ್ರಮ ಅನುಸರಿಸದೆ ಪಟಾಕಿ ಸಂಗ್ರಹಿಸಿಟ್ಟಿದ್ದರು. ಪಟಾಕಿ ಬಾಕ್ಸ್ಗಳನ್ನು ವಶಕ್ಕೆ ಪಡೆದು ಸ್ಫೋಟಕ ವಸ್ತು ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.</p>.<p>ಮತ್ತೊಂದು ಪ್ರಕರಣದಲ್ಲಿ ಕಲಾಸಿಪಾಳ್ಯ ಠಾಣೆ ಪೊಲೀಸರು ₹5 ಲಕ್ಷ ಮೌಲ್ಯದ 36 ಪಟಾಕಿ ಬಾಕ್ಸ್ಗಳನ್ನು ಜಪ್ತಿ ಮಾಡಿದ್ದಾರೆ. ಕಲಾಸಿಪಾಳ್ಯ ಮುಖ್ಯರಸ್ತೆಯ ಅಯ್ಯಪ್ಪಸ್ವಾಮಿ ದೇವಸ್ಥಾನ ಪಕ್ಕದಲ್ಲಿರುವ ಟ್ರಸ್ಟ್ನ ನೆಲಮಹಡಿಯಲ್ಲಿ ಪರವಾನಗಿ ಇಲ್ಲದೆ ಸಂಗ್ರಹಿಸಿದ ಕಾರಣ ಅಥಿ ಸುಬ್ರಹ್ಮಣ್ಯ ಎಂಬುವರನ್ನು ಬಂಧಿಸಿದ್ದಾರೆ.</p>.<p>‘ದಾಸ್ತಾನು ಮಾಡಿರುವ ಸ್ಥಳ ಜನನಿಬಿಡ ಪ್ರದೇಶವಾಗಿತ್ತು. ಆಕಸ್ಮಿಕವಾಗಿ ಸ್ಫೋಟ ಸಂಭವಿಸಿದರೆ ಜೀವಹಾನಿ ಮತ್ತು ಸಾರ್ವಜನಿಕ ಆಸ್ತಿ-ಪಾಸ್ತಿಗೆ ಹಾನಿಯಾಗುವ ಸಂಭವ ಇರುವುದರಿಂದ ದಾಳಿ ನಡೆಸಿ ಲಕ್ಷಾಂತರ ರೂಪಾಯಿ ಮೌಲ್ಯದ ಪಟಾಕಿಗಳನ್ನು ವಶಕ್ಕೆ ಪಡೆಯಲಾಗಿದೆ’ ಎಂದು ಪಶ್ಚಿಮ ವಿಭಾಗದ ಡಿಸಿಪಿ ಎಸ್.ಗಿರೀಶ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕಲಾಸಿಪಾಳ್ಯ ಹಾಗೂ ಕುಂಬಳಗೂಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ದಾಳಿ ನಡೆಸಿ, ಪರವಾನಗಿ ಇಲ್ಲದೆ ದಾಸ್ತಾನು ಮಾಡಿದ್ದ ₹15.3 ಲಕ್ಷ ಮೌಲ್ಯದ ಪಟಾಕಿಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ. <br><br>ಕುಂಬಳಗೂಡು ಪೊಲೀಸ್ ಠಾಣೆ ವ್ಯಾಪ್ತಿಯ ಧನನಾಯಕನಹಳ್ಳಿಯ ಮನೆಯಲ್ಲಿ ಪರವಾನಗಿ ಇಲ್ಲದ ₹10.13 ಲಕ್ಷ ಮೌಲ್ಯದ 317 ಪಟಾಕಿ ಬಾಕ್ಸ್ಗಳನ್ನು ವಶಪಡಿಸಿಕೊಂಡು, ಸಮೃದ್ಧಿ ಲೇಔಟ್ ನಿವಾಸಿ ಶ್ರೀನಿವಾಸ್ ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ.</p>.<p>ಸುರಕ್ಷಿತ ಹಾಗೂ ಮುಂಜಾಗ್ರತಾ ಕ್ರಮ ಅನುಸರಿಸದೆ ಪಟಾಕಿ ಸಂಗ್ರಹಿಸಿಟ್ಟಿದ್ದರು. ಪಟಾಕಿ ಬಾಕ್ಸ್ಗಳನ್ನು ವಶಕ್ಕೆ ಪಡೆದು ಸ್ಫೋಟಕ ವಸ್ತು ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.</p>.<p>ಮತ್ತೊಂದು ಪ್ರಕರಣದಲ್ಲಿ ಕಲಾಸಿಪಾಳ್ಯ ಠಾಣೆ ಪೊಲೀಸರು ₹5 ಲಕ್ಷ ಮೌಲ್ಯದ 36 ಪಟಾಕಿ ಬಾಕ್ಸ್ಗಳನ್ನು ಜಪ್ತಿ ಮಾಡಿದ್ದಾರೆ. ಕಲಾಸಿಪಾಳ್ಯ ಮುಖ್ಯರಸ್ತೆಯ ಅಯ್ಯಪ್ಪಸ್ವಾಮಿ ದೇವಸ್ಥಾನ ಪಕ್ಕದಲ್ಲಿರುವ ಟ್ರಸ್ಟ್ನ ನೆಲಮಹಡಿಯಲ್ಲಿ ಪರವಾನಗಿ ಇಲ್ಲದೆ ಸಂಗ್ರಹಿಸಿದ ಕಾರಣ ಅಥಿ ಸುಬ್ರಹ್ಮಣ್ಯ ಎಂಬುವರನ್ನು ಬಂಧಿಸಿದ್ದಾರೆ.</p>.<p>‘ದಾಸ್ತಾನು ಮಾಡಿರುವ ಸ್ಥಳ ಜನನಿಬಿಡ ಪ್ರದೇಶವಾಗಿತ್ತು. ಆಕಸ್ಮಿಕವಾಗಿ ಸ್ಫೋಟ ಸಂಭವಿಸಿದರೆ ಜೀವಹಾನಿ ಮತ್ತು ಸಾರ್ವಜನಿಕ ಆಸ್ತಿ-ಪಾಸ್ತಿಗೆ ಹಾನಿಯಾಗುವ ಸಂಭವ ಇರುವುದರಿಂದ ದಾಳಿ ನಡೆಸಿ ಲಕ್ಷಾಂತರ ರೂಪಾಯಿ ಮೌಲ್ಯದ ಪಟಾಕಿಗಳನ್ನು ವಶಕ್ಕೆ ಪಡೆಯಲಾಗಿದೆ’ ಎಂದು ಪಶ್ಚಿಮ ವಿಭಾಗದ ಡಿಸಿಪಿ ಎಸ್.ಗಿರೀಶ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>