<p><strong>ಬೆಂಗಳೂರು:</strong> ಒಳಮೀಸಲಾತಿಗೆ ಸಂಬಂಧಿಸಿ ನ್ಯಾಯಮೂರ್ತಿ ನಾಗಮೋಹನದಾಸ್ ಅವರ ಸಮಿತಿ ನೀಡಿರುವ ವರದಿ ಅಂಗೀಕರಿಸಿದರೆ, ಪರಿಶಿಷ್ಟ ಜಾತಿ ಬಲಗೈ ಸಮುದಾಯದ ಸಚಿವರು, ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡುವವರೆಗೆ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಒಕ್ಕೂಟ ಎಚ್ಚರಿಸಿದೆ.</p>.<p>ಪರಿಶಿಷ್ಟ ಜಾತಿಗಳಲ್ಲಿ ಸಮಾನ ಜಾತಿಯ ಉಪಜಾತಿಗಳ ಗುಂಪುಗಳನ್ನು ಒಟ್ಟುಗೂಡಿಸಲು ಸರ್ಕಾರವು ಆಯೋಗಕ್ಕೆ ನೀಡಿರುವ ನಿಬಂಧನೆಗಳಲ್ಲಿ ತಿಳಿಸಿದೆ. ಆದರೂ ಆಯೋಗವು ‘ಪ್ರವರ್ಗ ಎ ಗುಂಪನ್ನು ಸೃಜಿಸಿ ಬಲಗೈ, ಹೊಲಯ, ಛಲವಾದಿ ಸಂಬಂಧಿತ ಜಾತಿಗಳನ್ನು ಸೇರ್ಪಡೆಗೊಳಿಸುವ ಮೂಲಕ ಹೊಲಯ ಸಮುದಾಯದ ಜನಸಂಖ್ಯೆಯನ್ನು ವಿಭಜಿಸಿ ಕಡಿಮೆ ಮಾಡಿ ತೋರಿಸಲಾಗಿದೆ ಎಂದು ಆರೋಪಿಸಿದೆ.</p>.<p>ಆದಿ ದ್ರಾವಿಡ, ಆದಿ ಕರ್ನಾಟಕ, ಆದಿ ಆಂಧ್ರ ಎಂಬುದು ಜಾತಿಗಳಲ್ಲದೇ ಇದ್ದರೂ ಜಾತಿಗಳಿಗೆ ನಿಗದಿಪಡಿಸುವ ಮೀಸಲಾತಿಯಲ್ಲಿ ಶೇ 1ರಷ್ಟನ್ನು ನೀಡಿದೆ. ಹಾಗಾಗಿ ಈ ವರದಿಯನ್ನು ಸರ್ಕಾರ ತಿರಸ್ಕರಿಸಬೇಕು. ವರದಿ ಅಂಗೀಕರಿಸಿದರೆ ಪರಿಶಿಷ್ಟ ಜಾತಿಯ ಸಚಿವರು, ಶಾಸಕರು ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದೆ.</p>.<p>ವರದಿ ತಿರಸ್ಕರಿಸಿ, ಹೊಸದಾಗಿ ಜಾತಿ ಸಮೀಕ್ಷೆ ನಡೆಸಬೇಕು ಎಂದು ಒತ್ತಾಯಿಸಿ ಆ.18ರಂದು ಬೆಳಿಗ್ಗೆ 11ರಿಂದ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಒಕ್ಕೂಟದ ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಒಳಮೀಸಲಾತಿಗೆ ಸಂಬಂಧಿಸಿ ನ್ಯಾಯಮೂರ್ತಿ ನಾಗಮೋಹನದಾಸ್ ಅವರ ಸಮಿತಿ ನೀಡಿರುವ ವರದಿ ಅಂಗೀಕರಿಸಿದರೆ, ಪರಿಶಿಷ್ಟ ಜಾತಿ ಬಲಗೈ ಸಮುದಾಯದ ಸಚಿವರು, ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡುವವರೆಗೆ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಒಕ್ಕೂಟ ಎಚ್ಚರಿಸಿದೆ.</p>.<p>ಪರಿಶಿಷ್ಟ ಜಾತಿಗಳಲ್ಲಿ ಸಮಾನ ಜಾತಿಯ ಉಪಜಾತಿಗಳ ಗುಂಪುಗಳನ್ನು ಒಟ್ಟುಗೂಡಿಸಲು ಸರ್ಕಾರವು ಆಯೋಗಕ್ಕೆ ನೀಡಿರುವ ನಿಬಂಧನೆಗಳಲ್ಲಿ ತಿಳಿಸಿದೆ. ಆದರೂ ಆಯೋಗವು ‘ಪ್ರವರ್ಗ ಎ ಗುಂಪನ್ನು ಸೃಜಿಸಿ ಬಲಗೈ, ಹೊಲಯ, ಛಲವಾದಿ ಸಂಬಂಧಿತ ಜಾತಿಗಳನ್ನು ಸೇರ್ಪಡೆಗೊಳಿಸುವ ಮೂಲಕ ಹೊಲಯ ಸಮುದಾಯದ ಜನಸಂಖ್ಯೆಯನ್ನು ವಿಭಜಿಸಿ ಕಡಿಮೆ ಮಾಡಿ ತೋರಿಸಲಾಗಿದೆ ಎಂದು ಆರೋಪಿಸಿದೆ.</p>.<p>ಆದಿ ದ್ರಾವಿಡ, ಆದಿ ಕರ್ನಾಟಕ, ಆದಿ ಆಂಧ್ರ ಎಂಬುದು ಜಾತಿಗಳಲ್ಲದೇ ಇದ್ದರೂ ಜಾತಿಗಳಿಗೆ ನಿಗದಿಪಡಿಸುವ ಮೀಸಲಾತಿಯಲ್ಲಿ ಶೇ 1ರಷ್ಟನ್ನು ನೀಡಿದೆ. ಹಾಗಾಗಿ ಈ ವರದಿಯನ್ನು ಸರ್ಕಾರ ತಿರಸ್ಕರಿಸಬೇಕು. ವರದಿ ಅಂಗೀಕರಿಸಿದರೆ ಪರಿಶಿಷ್ಟ ಜಾತಿಯ ಸಚಿವರು, ಶಾಸಕರು ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದೆ.</p>.<p>ವರದಿ ತಿರಸ್ಕರಿಸಿ, ಹೊಸದಾಗಿ ಜಾತಿ ಸಮೀಕ್ಷೆ ನಡೆಸಬೇಕು ಎಂದು ಒತ್ತಾಯಿಸಿ ಆ.18ರಂದು ಬೆಳಿಗ್ಗೆ 11ರಿಂದ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಒಕ್ಕೂಟದ ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>