ಸಭೆಯ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ‘ಕೋಮುವಾದದ ವಿರುದ್ಧ, ಸಮಾನತೆ, ಲಿಂಗ ಸಮಾನತೆ, ಸೌಹಾರ್ದತೆ, ಮಾನವೀಯತೆಯ ಸಂದೇಶಗಳು ಸಮಾಜಕ್ಕೆ ತಲುಪಬೇಕು. ಬಹುತ್ವಕ್ಕೆ ಹೆಚ್ಚು ಒತ್ತು ಕೊಡುವ ರೀತಿಯಲ್ಲಿ ಚಲನಚಿತ್ರೋತ್ಸವ ನಡೆಯಲಿದೆ. ಅಂತಹ ಚಿತ್ರಗಳನ್ನು ಹೆಚ್ಚು ಜನಪ್ರಿಯಗೊಳಿಸುವ ನಿಟ್ಟಿನಲ್ಲಿ ಅಗತ್ಯವಿರುವ ಆರ್ಥಿಕ ನೆರವನ್ನು ಸರ್ಕಾರ ಒದಗಿಸಲಿದೆ’ ಎಂದರು.