<p><strong>ಬೆಂಗಳೂರು:</strong> ನಗರದ ಮಲ್ಟಿನ್ಯಾಷನಲ್ ಕಂಪನಿಯೊಂದರಲ್ಲಿ(ಎಂಎನ್ಸಿ) ಕೆಲಸ ಮಾಡುತ್ತಿರುವ 58 ವರ್ಷದ ವ್ಯಕ್ತಿಯಿಂದ ಸೈಬರ್ ವಂಚಕರು ಹೂಡಿಕೆಯ ಹೆಸರಿನಲ್ಲಿ ₹5.14 ಕೋಟಿ ದೋಚಿದ್ದಾರೆ. </p>.<p>ಹಣ ಕಳೆದುಕೊಂಡವರು ಆರ್.ಟಿ. ನಗರದಲ್ಲಿ ನೆಲಸಿದ್ದಾರೆ. ಅವರು ನೀಡಿದ ದೂರಿನ ಮೇರೆಗೆ ಮಾಹಿತಿ ತಂತ್ರಜ್ಞಾನ ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಂಡಿರುವ ಉತ್ತರ ವಿಭಾಗದ ಸೈಬರ್ ಠಾಣೆಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.</p>.<p>ವಂಚಕರು ಕಳುಹಿಸಿದ್ದ ಲಿಂಕ್ ಮೂಲಕ ವಿವಿಧ ವಾಟ್ಸ್ಆ್ಯಪ್ ಗ್ರೂಪ್ಗಳಿಗೆ ದೂರುದಾರರು ಸೇರ್ಪಡೆ ಆಗಿದ್ದರು. ಆ ಗ್ರೂಪ್ನಲ್ಲಿ ಹೂಡಿಕೆ ಮಾಡುವಂತೆ ದೀಪಾ ಹಾಗೂ ದಿನೇಶ್ ಕೆ. ವಘೇವಾ ಅವರು ದೂರುದಾರರ ಮನವೊಲಿಸಿದ್ದರು.</p>.<p>ವಂಚಕರು ನೀಡಿದ ಸೂಚನೆಯಂತೆ ನಕಲಿ ಆ್ಯಪ್ ‘ಎಲ್ಕೆಪಿಎನ್ಡ್ಲ್ಯುಎಲ್’ ಡೌನ್ಲೋಡ್ ಮಾಡಿಕೊಂಡು ಹೂಡಿಕೆ ಮಾಡಲು ಆರಂಭಿಸಿದ್ದರು. 2025ರ ನವೆಂಬರ್ 12ರಿಂದ 2026ರ ಜನವರಿ 7ರ ವರೆಗೆ ಹಂತ ಹಂತವಾಗಿ ದೂರುದಾರರು, ₹5.14 ಕೋಟಿ ಹೂಡಿಕೆ ಮಾಡಿದ್ದರು. ಕೆಲವು ದಿನಗಳು ಕಳೆದ ಮೇಲೆ ನಕಲಿ ಆ್ಯಪ್ನಲ್ಲಿ ₹19 ಕೋಟಿ ಲಾಭಾಂಶ ಬಂದಿರುವಂತೆ ತೋರಿಸಲಾಗುತ್ತಿತ್ತು. ಅದನ್ನು ನಂಬಿದ್ದ ದೂರುದಾರರು, ಆ ಹಣವನ್ನು ವಾಪಸ್ ಪಡೆಯಲು ಮುಂದಾಗಿದ್ದರು. ಆಗ ವಂಚಕರು ಕರೆ ಮಾಡಿ, ₹19 ಕೋಟಿ ಹಣವನ್ನು ಡ್ರಾ ಮಾಡಿಕೊಳ್ಳಬೇಕಾದರೆ, ಹೆಚ್ಚುವರಿಯಾಗಿ ₹2 ಕೋಟಿ ಪಾವತಿಸುವಂತೆ ಸೂಚಿಸಿದ್ದರು. ಆಗ ವಂಚನೆ ನಡೆದಿರುವುದು ಅರಿವಿಗೆ ಬಂದು ದೂರು ನೀಡಿದ್ದಾರೆ ಎಂದು ಪೊಲೀಸ್ ಮೂಲಗಳು ಹೇಳಿವೆ.</p>.<p>‘₹3 ಕೋಟಿ ಮೇಲ್ಪಟ್ಟ ವಂಚನೆ ಪ್ರಕರಣಗಳ ತನಿಖೆಯನ್ನು ಸಿಐಡಿ ನಡೆಸಲಿದೆ. ಸಿಐಡಿ ಪೊಲೀಸರು ಈ ಪ್ರಕರಣದ ತನಿಖೆ ಕೈಗೆತ್ತಿಕೊಳ್ಳುವವರೆಗೆ ಉತ್ತರ ವಿಭಾಗದ ಸೈಬರ್ ಅಪರಾಧ ಠಾಣೆಯ ಪೊಲೀಸರೇ ತನಿಖೆ ನಡೆಸಲಿದ್ದಾರೆ’ ಎಂದು ಮೂಲಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ನಗರದ ಮಲ್ಟಿನ್ಯಾಷನಲ್ ಕಂಪನಿಯೊಂದರಲ್ಲಿ(ಎಂಎನ್ಸಿ) ಕೆಲಸ ಮಾಡುತ್ತಿರುವ 58 ವರ್ಷದ ವ್ಯಕ್ತಿಯಿಂದ ಸೈಬರ್ ವಂಚಕರು ಹೂಡಿಕೆಯ ಹೆಸರಿನಲ್ಲಿ ₹5.14 ಕೋಟಿ ದೋಚಿದ್ದಾರೆ. </p>.<p>ಹಣ ಕಳೆದುಕೊಂಡವರು ಆರ್.ಟಿ. ನಗರದಲ್ಲಿ ನೆಲಸಿದ್ದಾರೆ. ಅವರು ನೀಡಿದ ದೂರಿನ ಮೇರೆಗೆ ಮಾಹಿತಿ ತಂತ್ರಜ್ಞಾನ ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಂಡಿರುವ ಉತ್ತರ ವಿಭಾಗದ ಸೈಬರ್ ಠಾಣೆಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.</p>.<p>ವಂಚಕರು ಕಳುಹಿಸಿದ್ದ ಲಿಂಕ್ ಮೂಲಕ ವಿವಿಧ ವಾಟ್ಸ್ಆ್ಯಪ್ ಗ್ರೂಪ್ಗಳಿಗೆ ದೂರುದಾರರು ಸೇರ್ಪಡೆ ಆಗಿದ್ದರು. ಆ ಗ್ರೂಪ್ನಲ್ಲಿ ಹೂಡಿಕೆ ಮಾಡುವಂತೆ ದೀಪಾ ಹಾಗೂ ದಿನೇಶ್ ಕೆ. ವಘೇವಾ ಅವರು ದೂರುದಾರರ ಮನವೊಲಿಸಿದ್ದರು.</p>.<p>ವಂಚಕರು ನೀಡಿದ ಸೂಚನೆಯಂತೆ ನಕಲಿ ಆ್ಯಪ್ ‘ಎಲ್ಕೆಪಿಎನ್ಡ್ಲ್ಯುಎಲ್’ ಡೌನ್ಲೋಡ್ ಮಾಡಿಕೊಂಡು ಹೂಡಿಕೆ ಮಾಡಲು ಆರಂಭಿಸಿದ್ದರು. 2025ರ ನವೆಂಬರ್ 12ರಿಂದ 2026ರ ಜನವರಿ 7ರ ವರೆಗೆ ಹಂತ ಹಂತವಾಗಿ ದೂರುದಾರರು, ₹5.14 ಕೋಟಿ ಹೂಡಿಕೆ ಮಾಡಿದ್ದರು. ಕೆಲವು ದಿನಗಳು ಕಳೆದ ಮೇಲೆ ನಕಲಿ ಆ್ಯಪ್ನಲ್ಲಿ ₹19 ಕೋಟಿ ಲಾಭಾಂಶ ಬಂದಿರುವಂತೆ ತೋರಿಸಲಾಗುತ್ತಿತ್ತು. ಅದನ್ನು ನಂಬಿದ್ದ ದೂರುದಾರರು, ಆ ಹಣವನ್ನು ವಾಪಸ್ ಪಡೆಯಲು ಮುಂದಾಗಿದ್ದರು. ಆಗ ವಂಚಕರು ಕರೆ ಮಾಡಿ, ₹19 ಕೋಟಿ ಹಣವನ್ನು ಡ್ರಾ ಮಾಡಿಕೊಳ್ಳಬೇಕಾದರೆ, ಹೆಚ್ಚುವರಿಯಾಗಿ ₹2 ಕೋಟಿ ಪಾವತಿಸುವಂತೆ ಸೂಚಿಸಿದ್ದರು. ಆಗ ವಂಚನೆ ನಡೆದಿರುವುದು ಅರಿವಿಗೆ ಬಂದು ದೂರು ನೀಡಿದ್ದಾರೆ ಎಂದು ಪೊಲೀಸ್ ಮೂಲಗಳು ಹೇಳಿವೆ.</p>.<p>‘₹3 ಕೋಟಿ ಮೇಲ್ಪಟ್ಟ ವಂಚನೆ ಪ್ರಕರಣಗಳ ತನಿಖೆಯನ್ನು ಸಿಐಡಿ ನಡೆಸಲಿದೆ. ಸಿಐಡಿ ಪೊಲೀಸರು ಈ ಪ್ರಕರಣದ ತನಿಖೆ ಕೈಗೆತ್ತಿಕೊಳ್ಳುವವರೆಗೆ ಉತ್ತರ ವಿಭಾಗದ ಸೈಬರ್ ಅಪರಾಧ ಠಾಣೆಯ ಪೊಲೀಸರೇ ತನಿಖೆ ನಡೆಸಲಿದ್ದಾರೆ’ ಎಂದು ಮೂಲಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>