<p><strong>ಬೆಂಗಳೂರು:</strong> ಐಪಿಎಲ್ ಫೈನಲ್ ಪಂದ್ಯದಲ್ಲಿ ಆರ್ಸಿಬಿ ತಂಡ ಗೆದ್ದ ಬೆನ್ನಲ್ಲೇ ರಸ್ತೆಗಿಳಿದು ನಿಯಮ ಉಲ್ಲಂಘಿಸಿದ ವಾಹನ ಸವಾರರ ವಿರುದ್ಧ ಪ್ರಕರಣ ದಾಖಲಿಸಿ, 87 ವಾಹನಗಳನ್ನು ಜಪ್ತಿ ಮಾಡಿದ್ದಾರೆ.</p>.<p>ಪೊಲೀಸರ ಕಟ್ಟೆಚ್ಚರದ ನಡುವೆಯೂ ವ್ಹೀಲೆ, ತ್ರಿಬಲ್ ರೈಡಿಂಗ್ ಹಾಗೂ ಸಂಚಾರ ನಿಯಮ ಉಲ್ಲಂಘಿಸಿದ 83 ದ್ವಿಚಕ್ರ ವಾಹನ, ಮೂರು ಆಟೊ, ನಾಲ್ಕು ಚಕ್ರದ ಒಂದು ವಾಹನವನ್ನು ಪೊಲೀಸರು ಜಪ್ತಿ ಮಾಡಿದರು.</p>.<p>ಐಪಿಎಲ್ ಫೈನಲ್ ಪಂದ್ಯದ ಹಿನ್ನೆಲೆಯಲ್ಲಿ ಆರ್ಸಿಬಿ ಅಭಿಮಾನಿಗಳು ಎಲ್ಲೆಂದರಲ್ಲಿ ಸಂಭ್ರಮಾಚರಣೆ ಮಾಡಬಾರದು. ಪಟಾಕಿ ಸಿಡಿಸುವುದು, ಮೆರವಣಿಗೆ ಸೇರಿದಂತೆ ವಿಜಯೋತ್ಸವದ ಇತರೆ ಚಟುವಟಿಕೆಗಳನ್ನು ನಡೆಸದಂತೆ ಪೊಲೀಸರು ಮುಂಚಿತವಾಗಿ ಮಾರ್ಗಸೂಚಿ ಹೊರಡಿಸಿದ್ದರು.</p>.<p>ಆದರೂ ಯುವಕರ ಪಡೆಯು ಪೊಲೀಸರ ಮಾರ್ಗಸೂಚಿ ಲೆಕ್ಕಿಸದೆ ನಗರದ ವಿವಿಧೆಡೆ ರಸ್ತೆಗಿಳಿದು ಮನಸೋ ಇಚ್ಛೆ ವಾಹನ ಚಲಾಯಿಸುತ್ತಾ ಹುಚ್ಚಾಟ ಮೆರೆಯಿತು. ಕೆಲ ಯುವಕರು ವ್ಹೀಲೆ ಮಾಡುತ್ತಾ ಆರ್ಸಿಬಿ ತಂಡದ ಗೆಲುವನ್ನು ಸಂಭ್ರಮಿಸಿದರು.</p>.<p>ಈ ಮಧ್ಯೆ ಪೊಲೀಸರು ಮುನ್ನೆಚ್ಚರಿಕೆ ಕ್ರಮವಾಗಿ ನಗರದೆಲ್ಲೆಡೆ ಆಯಕಟ್ಟಿನ ಸ್ಥಳಗಳಲ್ಲಿ ನಾಕಾಬಂದಿ ಹಾಕಿ ಕಟ್ಟೆಚ್ಚರ ವಹಿಸಿದ್ದರು. 99 ಕಡೆ ನಾಕಾಬಂದಿ ಹಾಕಲಾಗಿತ್ತು. 2,502 ದ್ವಿಚಕ್ರ ವಾಹನಗಳು, 556 ಆಟೊ, 458 ನಾಲ್ಕು ಚಿಕ್ರದ ವಾಹನಗಳನ್ನು ತಪಾಸಣೆ ಮಾಡಲಾಗಿದೆ.</p>.<p>ಉತ್ತರ ವಿಭಾಗದ 13 ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದರು.</p>.<p>ರಸ್ತೆಗಳಲ್ಲಿ ತಡರಾತ್ರಿ ವ್ಹೀಲೆ ಮಾಡುತ್ತಿದ್ದ 83 ಸವಾರರ ವಿರುದ್ಧ ಪ್ರಕರಣ ದಾಖಲಿಸಿ ಬೈಕ್ಗಳನ್ನು ಜಪ್ತಿ ಮಾಡಿದರು. ಅಲ್ಲದೆ, ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ವಾಹನಗಳನ್ನು ತಡೆದು ತಪಾಸಣೆ ಮಾಡಿ 3 ಆಟೊ ಹಾಗೂ ಕಾರನ್ನು ವಶಕ್ಕೆ ಪಡೆದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260602-4-2126473669</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಐಪಿಎಲ್ ಫೈನಲ್ ಪಂದ್ಯದಲ್ಲಿ ಆರ್ಸಿಬಿ ತಂಡ ಗೆದ್ದ ಬೆನ್ನಲ್ಲೇ ರಸ್ತೆಗಿಳಿದು ನಿಯಮ ಉಲ್ಲಂಘಿಸಿದ ವಾಹನ ಸವಾರರ ವಿರುದ್ಧ ಪ್ರಕರಣ ದಾಖಲಿಸಿ, 87 ವಾಹನಗಳನ್ನು ಜಪ್ತಿ ಮಾಡಿದ್ದಾರೆ.</p>.<p>ಪೊಲೀಸರ ಕಟ್ಟೆಚ್ಚರದ ನಡುವೆಯೂ ವ್ಹೀಲೆ, ತ್ರಿಬಲ್ ರೈಡಿಂಗ್ ಹಾಗೂ ಸಂಚಾರ ನಿಯಮ ಉಲ್ಲಂಘಿಸಿದ 83 ದ್ವಿಚಕ್ರ ವಾಹನ, ಮೂರು ಆಟೊ, ನಾಲ್ಕು ಚಕ್ರದ ಒಂದು ವಾಹನವನ್ನು ಪೊಲೀಸರು ಜಪ್ತಿ ಮಾಡಿದರು.</p>.<p>ಐಪಿಎಲ್ ಫೈನಲ್ ಪಂದ್ಯದ ಹಿನ್ನೆಲೆಯಲ್ಲಿ ಆರ್ಸಿಬಿ ಅಭಿಮಾನಿಗಳು ಎಲ್ಲೆಂದರಲ್ಲಿ ಸಂಭ್ರಮಾಚರಣೆ ಮಾಡಬಾರದು. ಪಟಾಕಿ ಸಿಡಿಸುವುದು, ಮೆರವಣಿಗೆ ಸೇರಿದಂತೆ ವಿಜಯೋತ್ಸವದ ಇತರೆ ಚಟುವಟಿಕೆಗಳನ್ನು ನಡೆಸದಂತೆ ಪೊಲೀಸರು ಮುಂಚಿತವಾಗಿ ಮಾರ್ಗಸೂಚಿ ಹೊರಡಿಸಿದ್ದರು.</p>.<p>ಆದರೂ ಯುವಕರ ಪಡೆಯು ಪೊಲೀಸರ ಮಾರ್ಗಸೂಚಿ ಲೆಕ್ಕಿಸದೆ ನಗರದ ವಿವಿಧೆಡೆ ರಸ್ತೆಗಿಳಿದು ಮನಸೋ ಇಚ್ಛೆ ವಾಹನ ಚಲಾಯಿಸುತ್ತಾ ಹುಚ್ಚಾಟ ಮೆರೆಯಿತು. ಕೆಲ ಯುವಕರು ವ್ಹೀಲೆ ಮಾಡುತ್ತಾ ಆರ್ಸಿಬಿ ತಂಡದ ಗೆಲುವನ್ನು ಸಂಭ್ರಮಿಸಿದರು.</p>.<p>ಈ ಮಧ್ಯೆ ಪೊಲೀಸರು ಮುನ್ನೆಚ್ಚರಿಕೆ ಕ್ರಮವಾಗಿ ನಗರದೆಲ್ಲೆಡೆ ಆಯಕಟ್ಟಿನ ಸ್ಥಳಗಳಲ್ಲಿ ನಾಕಾಬಂದಿ ಹಾಕಿ ಕಟ್ಟೆಚ್ಚರ ವಹಿಸಿದ್ದರು. 99 ಕಡೆ ನಾಕಾಬಂದಿ ಹಾಕಲಾಗಿತ್ತು. 2,502 ದ್ವಿಚಕ್ರ ವಾಹನಗಳು, 556 ಆಟೊ, 458 ನಾಲ್ಕು ಚಿಕ್ರದ ವಾಹನಗಳನ್ನು ತಪಾಸಣೆ ಮಾಡಲಾಗಿದೆ.</p>.<p>ಉತ್ತರ ವಿಭಾಗದ 13 ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದರು.</p>.<p>ರಸ್ತೆಗಳಲ್ಲಿ ತಡರಾತ್ರಿ ವ್ಹೀಲೆ ಮಾಡುತ್ತಿದ್ದ 83 ಸವಾರರ ವಿರುದ್ಧ ಪ್ರಕರಣ ದಾಖಲಿಸಿ ಬೈಕ್ಗಳನ್ನು ಜಪ್ತಿ ಮಾಡಿದರು. ಅಲ್ಲದೆ, ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ವಾಹನಗಳನ್ನು ತಡೆದು ತಪಾಸಣೆ ಮಾಡಿ 3 ಆಟೊ ಹಾಗೂ ಕಾರನ್ನು ವಶಕ್ಕೆ ಪಡೆದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260602-4-2126473669</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>