<p>ಬೆಂಗಳೂರು: ನಗು ಬರೀ ಮನರಂಜನೆಯಲ್ಲ, ಅದು ಉತ್ತಮ ಆರೋಗ್ಯ ಮತ್ತು ಸಂತೋಷದ ಬದುಕಿನ ಮೂಲಮಂತ್ರ ಎಂಬ ಸಂದೇಶವನ್ನು ನಗರದ ಚೌಡಯ್ಯ ಮೆಮೋರಿಯಲ್ ಹಾಲ್ನಲ್ಲಿ ಭಾನುವಾರ ನಡೆದ ಜಾಣಜಾಣೆಯರ ನಗೆ ಉತ್ಸವ ಸಾರಿತು.</p>.<p>ಜಾಣಜಾಣೆಯರ ಸಾಹಿತಿ ಕಲಾವಿದರ ಟ್ರಸ್ಟ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಾವಿರಕ್ಕೂ ಹೆಚ್ಚು ಮಂದಿ ಭಾಗವಹಿಸಿ ನಗೆರಸದ ಸವಿಯನ್ನು ಆಸ್ವಾದಿಸಿದರು.</p>.<p>ಸಂಗೀತ ನಿರ್ದೇಶಕ ಗುರುಕಿರಣ್, ಗಾಂಧಿ ಸ್ಮಾರಕ ನಿಧಿಯ ಅಧ್ಯಕ್ಷ ವೂಡೇ ಪಿ. ಕೃಷ್ಣ, ವಕೀಲ ಚಂದ್ರಮೌಳಿ, ಹಾಸ್ಯ ಕಲಾವಿದರಾದ ಮಿಮಿಕ್ರಿ ದಯಾನಂದ್, ಎಂ.ಕೃಷ್ಣೇಗೌಡ, ಗೋಪಿ, ವೈ.ವಿ. ಗುಂಡೂರಾವ್, ಎಂ.ಎಸ್. ನರಸಿಂಹ ಮೂರ್ತಿ, ಟ್ರಸ್ಟಿ ಉದಯ್ ಎಂ., ವಿದುಷಿ ಸುಮಾ ಸುಧೀಂದ್ರ ಪಾಲ್ಗೊಂಡಿದ್ದರು.</p>.<p>‘ಇಂದಿನ ಡಿಜಿಟಲ್ ಯುಗದಲ್ಲಿ ಜನರು ಮೊಬೈಲ್ ಫೋನ್ಗಳ ಪರದೆಗಳಲ್ಲೇ ಹೆಚ್ಚು ಸಮಯ ಕಳೆಯುತ್ತಿದ್ದು, ಮುಖಾಮುಖಿಯಾಗಿ ಮಾತನಾಡುವ, ಬೆರೆಯುವ ಮತ್ತು ಒಟ್ಟಾಗಿ ನಗುವ ಸಂಸ್ಕೃತಿ ನಿಧಾನವಾಗಿ ಮರೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ನಗೆ ಉತ್ಸವವು ಜನರನ್ನು ಒಂದೇ ವೇದಿಕೆಯಲ್ಲಿ ಸೇರಿಸಿ, ಮಾನವೀಯ ಸಂಬಂಧಗಳ ಮಹತ್ವ ಮತ್ತು ನಗುವಿನ ಆರೋಗ್ಯಕರ ಪರಿಣಾಮ ನೆನಪಿಸಿದೆ’ ಎಂದು ಅತಿಥಿಗಳು ಹೇಳಿದರು.</p>.<p>ಸಂಗೀತ ನಿರ್ದೇಶಕ ಗುರುಕಿರಣ್ ಕಲಾವಿದರ ಸೇವೆಯನ್ನು ಶ್ಲಾಘಿಸಿದರು. ಐಪಿಎಲ್ ಮೂಲಕ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿರುವ ಡ್ರಮ್ಸ್ ದೇವ್ ಅವರ ಪ್ರದರ್ಶನ ಚಪ್ಪಾಳೆ ಗಳಿಸಿತು.</p>.<p>ಸಮಾಜದಲ್ಲಿ ಸಾಹಿತ್ಯ, ಕಲೆ, ಕಲಾವಿದರ ಕಲ್ಯಾಣಕ್ಕಾಗಿ ಜಾಣ ಜಾಣೆಯರ ಸಾಹಿತಿ ಕಲಾವಿದರ ಟ್ರಸ್ಟ್ ಸ್ಥಾಪನೆಯಾಗಿದ್ದು, ಕಾರ್ಯಕ್ರಮದ ಅಂಗವಾಗಿ 60 ಕಲಾವಿದರಿಗೆ ತಲಾ ₹10 ಲಕ್ಷ ಆರೋಗ್ಯ ವಿಮೆಯ ಪಾಲಿಸಿ ವಿತರಿಸಲಾಯಿತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260601-4-1929174656</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ನಗು ಬರೀ ಮನರಂಜನೆಯಲ್ಲ, ಅದು ಉತ್ತಮ ಆರೋಗ್ಯ ಮತ್ತು ಸಂತೋಷದ ಬದುಕಿನ ಮೂಲಮಂತ್ರ ಎಂಬ ಸಂದೇಶವನ್ನು ನಗರದ ಚೌಡಯ್ಯ ಮೆಮೋರಿಯಲ್ ಹಾಲ್ನಲ್ಲಿ ಭಾನುವಾರ ನಡೆದ ಜಾಣಜಾಣೆಯರ ನಗೆ ಉತ್ಸವ ಸಾರಿತು.</p>.<p>ಜಾಣಜಾಣೆಯರ ಸಾಹಿತಿ ಕಲಾವಿದರ ಟ್ರಸ್ಟ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಾವಿರಕ್ಕೂ ಹೆಚ್ಚು ಮಂದಿ ಭಾಗವಹಿಸಿ ನಗೆರಸದ ಸವಿಯನ್ನು ಆಸ್ವಾದಿಸಿದರು.</p>.<p>ಸಂಗೀತ ನಿರ್ದೇಶಕ ಗುರುಕಿರಣ್, ಗಾಂಧಿ ಸ್ಮಾರಕ ನಿಧಿಯ ಅಧ್ಯಕ್ಷ ವೂಡೇ ಪಿ. ಕೃಷ್ಣ, ವಕೀಲ ಚಂದ್ರಮೌಳಿ, ಹಾಸ್ಯ ಕಲಾವಿದರಾದ ಮಿಮಿಕ್ರಿ ದಯಾನಂದ್, ಎಂ.ಕೃಷ್ಣೇಗೌಡ, ಗೋಪಿ, ವೈ.ವಿ. ಗುಂಡೂರಾವ್, ಎಂ.ಎಸ್. ನರಸಿಂಹ ಮೂರ್ತಿ, ಟ್ರಸ್ಟಿ ಉದಯ್ ಎಂ., ವಿದುಷಿ ಸುಮಾ ಸುಧೀಂದ್ರ ಪಾಲ್ಗೊಂಡಿದ್ದರು.</p>.<p>‘ಇಂದಿನ ಡಿಜಿಟಲ್ ಯುಗದಲ್ಲಿ ಜನರು ಮೊಬೈಲ್ ಫೋನ್ಗಳ ಪರದೆಗಳಲ್ಲೇ ಹೆಚ್ಚು ಸಮಯ ಕಳೆಯುತ್ತಿದ್ದು, ಮುಖಾಮುಖಿಯಾಗಿ ಮಾತನಾಡುವ, ಬೆರೆಯುವ ಮತ್ತು ಒಟ್ಟಾಗಿ ನಗುವ ಸಂಸ್ಕೃತಿ ನಿಧಾನವಾಗಿ ಮರೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ನಗೆ ಉತ್ಸವವು ಜನರನ್ನು ಒಂದೇ ವೇದಿಕೆಯಲ್ಲಿ ಸೇರಿಸಿ, ಮಾನವೀಯ ಸಂಬಂಧಗಳ ಮಹತ್ವ ಮತ್ತು ನಗುವಿನ ಆರೋಗ್ಯಕರ ಪರಿಣಾಮ ನೆನಪಿಸಿದೆ’ ಎಂದು ಅತಿಥಿಗಳು ಹೇಳಿದರು.</p>.<p>ಸಂಗೀತ ನಿರ್ದೇಶಕ ಗುರುಕಿರಣ್ ಕಲಾವಿದರ ಸೇವೆಯನ್ನು ಶ್ಲಾಘಿಸಿದರು. ಐಪಿಎಲ್ ಮೂಲಕ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿರುವ ಡ್ರಮ್ಸ್ ದೇವ್ ಅವರ ಪ್ರದರ್ಶನ ಚಪ್ಪಾಳೆ ಗಳಿಸಿತು.</p>.<p>ಸಮಾಜದಲ್ಲಿ ಸಾಹಿತ್ಯ, ಕಲೆ, ಕಲಾವಿದರ ಕಲ್ಯಾಣಕ್ಕಾಗಿ ಜಾಣ ಜಾಣೆಯರ ಸಾಹಿತಿ ಕಲಾವಿದರ ಟ್ರಸ್ಟ್ ಸ್ಥಾಪನೆಯಾಗಿದ್ದು, ಕಾರ್ಯಕ್ರಮದ ಅಂಗವಾಗಿ 60 ಕಲಾವಿದರಿಗೆ ತಲಾ ₹10 ಲಕ್ಷ ಆರೋಗ್ಯ ವಿಮೆಯ ಪಾಲಿಸಿ ವಿತರಿಸಲಾಯಿತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260601-4-1929174656</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>