<p><strong>ಬೆಂಗಳೂರು:</strong> ನ್ಯಾಯಾಲಯಗಳಲ್ಲಿ ನೌಕರಿ ಕೊಡಿಸುವುದಾಗಿ ನಂಬಿಸಿ ಹಲವರಿಂದ ಹಣ ಪಡೆದು ವಂಚಿಸಿದ್ದ ದಂಪತಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.</p>.<p>ಚಿಕ್ಕಮಗಳೂರಿನ ಜೈಸನ್ ಡಿಸೋಜಾ ಮತ್ತು ಲವೀನಾ ಬಂಧಿತರು. ಕಳೆದ 10 ವರ್ಷಗಳಿಂದ ಬಸವೇಶ್ವರ ನಗರದಲ್ಲಿ ನೆಲಸಿದ್ದರು ಎಂದು ಪೊಲೀಸರು ಹೇಳಿದರು. </p>.<p>ಬಸವೇಶ್ವರ ನಗರ, ವಿಧಾನಸೌಧ ಸೇರಿದಂತೆ ನಗರದ ವಿವಿಧ ಠಾಣೆಗಳಲ್ಲಿ ಆರೋಪಿಗಳ ವಿರುದ್ಧ ಈ ಹಿಂದೆ ಪ್ರಕರಣಗಳು ದಾಖಲಾಗಿದ್ದವು. ಪ್ರಕರಣವನ್ನು ಸಿಸಿಬಿಗೆ ವರ್ಗಾವಣೆ ಮಾಡಲಾಗಿತ್ತು. ಆರೋಪಿಗಳನ್ನು ಬಂಧಿಸುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿ ಆಗಿದ್ದಾರೆ.</p>.<p>‘ಇದುವರೆಗೂ ನಡೆದಿರುವ ತನಿಖೆಯಿಂದ 500ಕ್ಕೂ ಹೆಚ್ಚು ಅಭ್ಯರ್ಥಿಗಳಿಂದ ₹25 ಕೋಟಿ ಹಣ ಪಡೆದು ವಂಚನೆ ನಡೆಸಿರುವುದು ಪತ್ತೆ ಆಗಿದೆ’ ಎಂದು ಪೊಲೀಸರು ಹೇಳಿದರು.</p>.<p>‘ನಿರುದ್ಯೋಗಿಗಳು, ಖಾಸಗಿ ಕಂಪನಿಗಳಲ್ಲಿ ಕಡಿಮೆ ಸಂಬಳಕ್ಕೆ ಕೆಲಸ ಮಾಡುತ್ತಿದ್ದವರನ್ನು ಗುರಿಯಾಗಿಸಿಕೊಂಡು ಆರೋಪಿಗಳು ವಂಚಿಸುತ್ತಿದ್ದರು. ಕೋರ್ಟ್ನಲ್ಲಿ ಡಿ–ಗ್ರೂಪ್ ಹುದ್ದೆ ಕೊಡಿಸುತ್ತೇವೆ ಎಂದು ದಂಪತಿ ನಂಬಿಸುತ್ತಿದ್ದರು. ಅಭ್ಯರ್ಥಿಗಳಿಂದ ₹10 ಲಕ್ಷದಿಂದ ₹25 ಲಕ್ಷದ ವರೆಗೆ ವಸೂಲಿ ಮಾಡುತ್ತಿದ್ದರು’ ಎಂದು ಸಿಸಿಬಿ ಮೂಲಗಳು ಹೇಳಿವೆ.</p>.<p class="Subhead">ಮಧ್ಯವರ್ತಿಗಳನ್ನು ನೇಮಿಸಿಕೊಂಡಿದ್ದ ದಂಪತಿ: ‘ಅಭ್ಯರ್ಥಿಗಳ ಹುಡುಕಾಟ, ಹಣ ಸಂಗ್ರಹಕ್ಕೆ ಮಧ್ಯವರ್ತಿಗಳನ್ನು ಆರೋಪಿಗಳು ನೇಮಿಸಿಕೊಂಡಿದ್ದರು. ಏಜೆಂಟ್ಗಳಿಗೆ ಕಮಿಷನ್ ನೀಡುತ್ತಿದ್ದರು. ಖಾಸಗಿ ಹೋಟೆಲ್ಗಳಲ್ಲಿ ದಾಖಲೆ ಪರಿಶೀಲನೆಯ ನಾಟಕವಾಡಿ, ನಕಲಿ ನೇಮಕಾತಿ ಪತ್ರಗಳನ್ನು ತೋರಿಸಿ ಉದ್ಯೋಗ ಆಕಾಂಕ್ಷಿಗಳನ್ನು ನಂಬಿಸುತ್ತಿದ್ದರು’ ಎಂದು ಪೊಲೀಸರು ಹೇಳಿದರು.</p>.<p>‘ಹಣ ನೀಡಿದವರು ಆಗಾಗ್ಗೆ ಬಂದು ಉದ್ಯೋಗದ ಬಗ್ಗೆ ವಿಚಾರಿಸುತ್ತಿದ್ದರು. ಆದರೆ, ಆರೋಪಿ ದಂಪತಿ ‘ನಾಳೆ ಬನ್ನಿ, ನಾಡಿದ್ದು ಬನ್ನಿ’ ಎಂದು ಸಬೂಬು ಹೇಳುತ್ತಿದ್ದರು’ ಎಂದು ಪೊಲೀಸರು ಹೇಳಿದರು.</p>.<p>‘ಸರ್ಕಾರಿ ಕೆಲಸ ಕೊಡಿಸುವುದಾಗಿ ವಂಚಿಸಿ 2024ರಲ್ಲೂ ದಂಪತಿ ಜೈಲು ಸೇರಿದ್ದರು. ಜಾಮೀನಿನ ಮೇಲೆ ಬಿಡುಗಡೆಯಾದ ಮೇಲೂ ಅದೇ ಕೃತ್ಯ ಎಸಗುತ್ತಿದ್ದರು’ ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ನ್ಯಾಯಾಲಯಗಳಲ್ಲಿ ನೌಕರಿ ಕೊಡಿಸುವುದಾಗಿ ನಂಬಿಸಿ ಹಲವರಿಂದ ಹಣ ಪಡೆದು ವಂಚಿಸಿದ್ದ ದಂಪತಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.</p>.<p>ಚಿಕ್ಕಮಗಳೂರಿನ ಜೈಸನ್ ಡಿಸೋಜಾ ಮತ್ತು ಲವೀನಾ ಬಂಧಿತರು. ಕಳೆದ 10 ವರ್ಷಗಳಿಂದ ಬಸವೇಶ್ವರ ನಗರದಲ್ಲಿ ನೆಲಸಿದ್ದರು ಎಂದು ಪೊಲೀಸರು ಹೇಳಿದರು. </p>.<p>ಬಸವೇಶ್ವರ ನಗರ, ವಿಧಾನಸೌಧ ಸೇರಿದಂತೆ ನಗರದ ವಿವಿಧ ಠಾಣೆಗಳಲ್ಲಿ ಆರೋಪಿಗಳ ವಿರುದ್ಧ ಈ ಹಿಂದೆ ಪ್ರಕರಣಗಳು ದಾಖಲಾಗಿದ್ದವು. ಪ್ರಕರಣವನ್ನು ಸಿಸಿಬಿಗೆ ವರ್ಗಾವಣೆ ಮಾಡಲಾಗಿತ್ತು. ಆರೋಪಿಗಳನ್ನು ಬಂಧಿಸುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿ ಆಗಿದ್ದಾರೆ.</p>.<p>‘ಇದುವರೆಗೂ ನಡೆದಿರುವ ತನಿಖೆಯಿಂದ 500ಕ್ಕೂ ಹೆಚ್ಚು ಅಭ್ಯರ್ಥಿಗಳಿಂದ ₹25 ಕೋಟಿ ಹಣ ಪಡೆದು ವಂಚನೆ ನಡೆಸಿರುವುದು ಪತ್ತೆ ಆಗಿದೆ’ ಎಂದು ಪೊಲೀಸರು ಹೇಳಿದರು.</p>.<p>‘ನಿರುದ್ಯೋಗಿಗಳು, ಖಾಸಗಿ ಕಂಪನಿಗಳಲ್ಲಿ ಕಡಿಮೆ ಸಂಬಳಕ್ಕೆ ಕೆಲಸ ಮಾಡುತ್ತಿದ್ದವರನ್ನು ಗುರಿಯಾಗಿಸಿಕೊಂಡು ಆರೋಪಿಗಳು ವಂಚಿಸುತ್ತಿದ್ದರು. ಕೋರ್ಟ್ನಲ್ಲಿ ಡಿ–ಗ್ರೂಪ್ ಹುದ್ದೆ ಕೊಡಿಸುತ್ತೇವೆ ಎಂದು ದಂಪತಿ ನಂಬಿಸುತ್ತಿದ್ದರು. ಅಭ್ಯರ್ಥಿಗಳಿಂದ ₹10 ಲಕ್ಷದಿಂದ ₹25 ಲಕ್ಷದ ವರೆಗೆ ವಸೂಲಿ ಮಾಡುತ್ತಿದ್ದರು’ ಎಂದು ಸಿಸಿಬಿ ಮೂಲಗಳು ಹೇಳಿವೆ.</p>.<p class="Subhead">ಮಧ್ಯವರ್ತಿಗಳನ್ನು ನೇಮಿಸಿಕೊಂಡಿದ್ದ ದಂಪತಿ: ‘ಅಭ್ಯರ್ಥಿಗಳ ಹುಡುಕಾಟ, ಹಣ ಸಂಗ್ರಹಕ್ಕೆ ಮಧ್ಯವರ್ತಿಗಳನ್ನು ಆರೋಪಿಗಳು ನೇಮಿಸಿಕೊಂಡಿದ್ದರು. ಏಜೆಂಟ್ಗಳಿಗೆ ಕಮಿಷನ್ ನೀಡುತ್ತಿದ್ದರು. ಖಾಸಗಿ ಹೋಟೆಲ್ಗಳಲ್ಲಿ ದಾಖಲೆ ಪರಿಶೀಲನೆಯ ನಾಟಕವಾಡಿ, ನಕಲಿ ನೇಮಕಾತಿ ಪತ್ರಗಳನ್ನು ತೋರಿಸಿ ಉದ್ಯೋಗ ಆಕಾಂಕ್ಷಿಗಳನ್ನು ನಂಬಿಸುತ್ತಿದ್ದರು’ ಎಂದು ಪೊಲೀಸರು ಹೇಳಿದರು.</p>.<p>‘ಹಣ ನೀಡಿದವರು ಆಗಾಗ್ಗೆ ಬಂದು ಉದ್ಯೋಗದ ಬಗ್ಗೆ ವಿಚಾರಿಸುತ್ತಿದ್ದರು. ಆದರೆ, ಆರೋಪಿ ದಂಪತಿ ‘ನಾಳೆ ಬನ್ನಿ, ನಾಡಿದ್ದು ಬನ್ನಿ’ ಎಂದು ಸಬೂಬು ಹೇಳುತ್ತಿದ್ದರು’ ಎಂದು ಪೊಲೀಸರು ಹೇಳಿದರು.</p>.<p>‘ಸರ್ಕಾರಿ ಕೆಲಸ ಕೊಡಿಸುವುದಾಗಿ ವಂಚಿಸಿ 2024ರಲ್ಲೂ ದಂಪತಿ ಜೈಲು ಸೇರಿದ್ದರು. ಜಾಮೀನಿನ ಮೇಲೆ ಬಿಡುಗಡೆಯಾದ ಮೇಲೂ ಅದೇ ಕೃತ್ಯ ಎಸಗುತ್ತಿದ್ದರು’ ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>