ತುಳುನಾಡಿನ ಸಾಂಪ್ರದಾಯಿಕ ಕ್ರೀಡೆ ಕಂಬಳ, ಇದೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ನಡೆದಿದ್ದು ಹಲವು ವೈಶಿಷ್ಟ್ಯಗಳಿಗೆ ಸಾಕ್ಷಿಯಾಯಿತು. ಸಾವಿರಾರು ಜನ ಕಾರ್ಯಕ್ರಮಕ್ಕೆ ಸಾಕ್ಷಿಯಾದರು. ಕೋಣಗಳ ಓಟ ನೆರೆದವರನ್ನು ಆಕರ್ಷಿಸಿತು. ಸಾಂಸ್ಕೃತಿಕ ಕಾರ್ಯಕ್ರಮಗಳೂ ಗಮನ ಸೆಳೆದವು. ಮತ್ತೊಂದೆಡೆ, ಊಟದ ವ್ಯವಸ್ಥೆ, ವಾಹನ ನಿಲುಗಡೆ ವ್ಯವಸ್ಥೆ ಸಮರ್ಪಕವಾಗಿ ಇರದ ಕಾರಣ ಸಾರ್ವಜನಿಕರ ಅಸಮಾಧಾನಕ್ಕೂ ‘ಬೆಂಗಳೂರು ಕಂಬಳ’ ಸಾಕ್ಷಿಯಾಗಬೇಕಾಯಿತು.