ಶನಿವಾರ ಬೆಳಿಗ್ಗೆ 8 ಗಂಟೆಗೆ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಧ್ವಜಾರೋಹಣ ನೆರವೇರಲಿದೆ. 8.30ಕ್ಕೆ ವಿಧಾನಸೌಧದ ಮುಂಭಾಗದಲ್ಲಿರುವ ಶಾಂತವೇರಿ ಗೋಪಾಲಗೌಡ ವೃತ್ತದಿಂದ ಕಾರ್ಯಕ್ರಮ ನಡೆಯುವ ಸ್ಥಳದವರೆಗೆ ಕನ್ನಡ ಜಾಗೃತಿ ಮೆರವಣಿಗೆ ನಡೆಯಲಿದೆ. ಕನ್ನಡ ಜಾಗೃತಿ ಜ್ಯೋತಿಯನ್ನು ಸಾಹಿತಿ ದೊಡ್ಡರಂಗೇಗೌಡ ಬೆಳಗಿಸಲಿದ್ದಾರೆ. ಮೆರವಣಿಗೆಗೆ ಸಂಸದ ಪಿ.ಸಿ. ಮೋಹನ್ ಚಾಲನೆ ನೀಡಲಿದ್ದಾರೆ. ವಿವಿಧ ಜಾನಪದ ಕಲಾತಂಡಗಳು, ಶಾಲಾ-ಕಾಲೇಜು ವಿದ್ಯಾರ್ಥಿಗಳು, ಸಾಹಿತಿಗಳು, ಕನ್ನಡ ಪ್ರೇಮಿಗಳು, ಮಹಿಳಾ ಸಂಘಟನೆಗಳು, ಕಾರ್ಮಿಕ ಸಂಘಟನೆಗಳು ಪಾಲ್ಗೊಳ್ಳಲಿವೆ ಎಂದು ಬೆಂಗಳೂರು ನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ. ಪ್ರಕಾಶಮೂರ್ತಿ ತಿಳಿಸಿದ್ದಾರೆ.