<p><strong>ಬೆಂಗಳೂರು: </strong>ತಿಗಳರಪೇಟೆಯ ಧರ್ಮರಾಯ ಸ್ವಾಮಿ ದೇವಾಲಯದ ಆವರಣದಲ್ಲಿ ಹಚ್ಚಲಾಗಿದ್ದ ದೊಡ್ಡ ಗಾತ್ರದ ಕರ್ಪೂರದ ಶಾಖದಿಂದಾಗಿ 10 ವಾಹನಗಳಿಗೆ ಹಾನಿಯಾದೆ.</p>.<p>ದೇವಸ್ಥಾನದ ಆವರಣದಲ್ಲಿ ಪ್ರತಿ ವರ್ಷವೂ ಭಕ್ತರು ದೊಡ್ಡ ಗಾತ್ರದ ಕರ್ಪೂರಗಳನ್ನಿಟ್ಟು ಬೆಂಕಿ ಹಚ್ಚುತ್ತಾರೆ. ಈ ಸಂದರ್ಭದಲ್ಲಿ ಅಕ್ಕ–ಪಕ್ಕದಲ್ಲಿ ಯಾವುದೇ ವಾಹನ ನಿಲ್ಲಿಸದಂತೆ ದೇವಸ್ಥಾನದವರು ಎಚ್ಚರಿಕೆ ನೀಡುತ್ತಾರೆ. ಅಷ್ಟಾದರೂ ಗುರುವಾರ ಹಲವರು ತಮ್ಮ ವಾಹನಗಳನ್ನು ದೇವಸ್ಥಾನ ಬಳಿಯ ರಸ್ತೆ ಪಕ್ಕದಲ್ಲಿ ನಿಲ್ಲಿಸಿದ್ದರು.</p>.<p>ಆವರಣದಲ್ಲಿ ಸೇರಿದ್ದ ಭಕ್ತರು, ಕರ್ಪೂರ ಹಚ್ಚಿದ್ದರು. ಕರ್ಪೂರದಿಂದ ಬೆಂಕಿ ಹೊತ್ತಿಕೊಂಡು ಧಗ ಧಗ ಉರಿಯಲಾರಂಭಿಸಿತ್ತು. ಇದರ ಶಾಖ ರಸ್ತೆಯ ಪಕ್ಕದಲ್ಲಿದ್ದ ವಾಹನಗಳಿಗೆ ತಾಗಿತ್ತು. ಇದರಿಂದಾಗಿ, ಬೈಕ್ಗಳಿಗೆ ಹಾನಿಯಾಗಿದೆ.</p>.<p>‘ಬೆಂಕಿಯ ಶಾಖದಿಂದ ಬೈಕ್ಗಳಿಗೆ ಹಾನಿಯಾಗಿದೆ. ಯಾವ ಬೈಕ್ಗೂ ಬೆಂಕಿ ಹೊತ್ತಿಕೊಂಡಿಲ್ಲ. ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ತಿಗಳರಪೇಟೆಯ ಧರ್ಮರಾಯ ಸ್ವಾಮಿ ದೇವಾಲಯದ ಆವರಣದಲ್ಲಿ ಹಚ್ಚಲಾಗಿದ್ದ ದೊಡ್ಡ ಗಾತ್ರದ ಕರ್ಪೂರದ ಶಾಖದಿಂದಾಗಿ 10 ವಾಹನಗಳಿಗೆ ಹಾನಿಯಾದೆ.</p>.<p>ದೇವಸ್ಥಾನದ ಆವರಣದಲ್ಲಿ ಪ್ರತಿ ವರ್ಷವೂ ಭಕ್ತರು ದೊಡ್ಡ ಗಾತ್ರದ ಕರ್ಪೂರಗಳನ್ನಿಟ್ಟು ಬೆಂಕಿ ಹಚ್ಚುತ್ತಾರೆ. ಈ ಸಂದರ್ಭದಲ್ಲಿ ಅಕ್ಕ–ಪಕ್ಕದಲ್ಲಿ ಯಾವುದೇ ವಾಹನ ನಿಲ್ಲಿಸದಂತೆ ದೇವಸ್ಥಾನದವರು ಎಚ್ಚರಿಕೆ ನೀಡುತ್ತಾರೆ. ಅಷ್ಟಾದರೂ ಗುರುವಾರ ಹಲವರು ತಮ್ಮ ವಾಹನಗಳನ್ನು ದೇವಸ್ಥಾನ ಬಳಿಯ ರಸ್ತೆ ಪಕ್ಕದಲ್ಲಿ ನಿಲ್ಲಿಸಿದ್ದರು.</p>.<p>ಆವರಣದಲ್ಲಿ ಸೇರಿದ್ದ ಭಕ್ತರು, ಕರ್ಪೂರ ಹಚ್ಚಿದ್ದರು. ಕರ್ಪೂರದಿಂದ ಬೆಂಕಿ ಹೊತ್ತಿಕೊಂಡು ಧಗ ಧಗ ಉರಿಯಲಾರಂಭಿಸಿತ್ತು. ಇದರ ಶಾಖ ರಸ್ತೆಯ ಪಕ್ಕದಲ್ಲಿದ್ದ ವಾಹನಗಳಿಗೆ ತಾಗಿತ್ತು. ಇದರಿಂದಾಗಿ, ಬೈಕ್ಗಳಿಗೆ ಹಾನಿಯಾಗಿದೆ.</p>.<p>‘ಬೆಂಕಿಯ ಶಾಖದಿಂದ ಬೈಕ್ಗಳಿಗೆ ಹಾನಿಯಾಗಿದೆ. ಯಾವ ಬೈಕ್ಗೂ ಬೆಂಕಿ ಹೊತ್ತಿಕೊಂಡಿಲ್ಲ. ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>