<p><strong>ಬೆಂಗಳೂರು:</strong> ಚುನಾವಣೆ ನೀತಿ ಸಂಹಿತೆ ಹಾಗೂ ಕೋವಿಡ್ ಸಂಬಂಧ ಸರ್ಕಾರದ ಮಾರ್ಗಸೂಚಿಯಂತೆ ಬೆಂಗಳೂರು ಕರಗ ಉತ್ಸವ ಏ.6ರಂದು ನಡೆಯಲಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದರು.</p>.<p>ದ್ರೌಪದಿದೇವಿ ಕರಗ ಶಕ್ತ್ಯುತ್ಸವ ಮತ್ತು ಧರ್ಮರಾಯ ಸ್ವಾಮಿ ರಥೋತ್ಸವದ ಆಹ್ವಾನ ಪತ್ರಿಕೆಯನ್ನು ಮಂಗಳವಾರ ಬಿಡುಗಡೆ ಮಾಡಿ, ಅವರು ಮಾತನಾಡಿದರು.</p>.<p>ಕರಗ ಹೊರಡುವ ಮಾರ್ಗದ ರಸ್ತೆಗಳು ಹಾಗೂ ಪಾದಚಾರಿ ಮಾರ್ಗಗಳ ದುರಸ್ತಿ ಕಾರ್ಯವನ್ನು ಕೈಗೊಳ್ಳಬೇಕು. ಬೀದಿಗಳಲ್ಲಿ ದೀಪಗಳನ್ನು ಅಳವಡಿಸಬೇಕು. ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ನಿಯೋಜಿಸಬೇಕು. ಇ-ಶೌಚಾಲಯಗಳನ್ನು ಅಳವಡಿಸಬೇಕು. ಬಿಬಿಎಂಪಿ ವತಿಯಿಂದ ಸಂಪಂಗಿರಾಮನಗರ ಕಲ್ಯಾಣಿಯನ್ನು ಸ್ವಚ್ಛ ಮಾಡಬೇಕು. ಜಲಮಂಡಳಿ ವತಿಯಿಂದ ಕಲ್ಯಾಣಿಗೆ ನೀರು ತುಂಬಿಸಬೇಕು ಎಂದು ಅಧಿಕಾರಿಗಳಿಗೆ ಮುಖ್ಯ ಆಯುಕ್ತರು ಸೂಚಿಸಿದರು.</p>.<p>ಜಲಮಂಡಳಿ ವತಿಯಿಂದ ಒಳಚರಂಡಿಗಳನ್ನು ಸ್ವಚ್ಛಗೊಳಿಸಿ, ಎಲ್ಲೂ ಕೊಳಚೆ ನೀರು ಹೊರಬಾರದಂತೆ ಕ್ರಮ ವಹಿಸಬೇಕು. ಸಂಚಾರ ದಟ್ಟಣೆಯಾಗದಂತೆ ಮಾರ್ಗ ಬದಲಾವಣೆ ಹಾಗೂ ವಾಹನಗಳ ನಿಲುಗಡೆಗೆ ಸ್ಥಳ ನಿಗದಿ ಮಾಡಬೇಕು. ಮುನ್ನೆಚ್ಚರಿಕಾ ಕ್ರಮವಾಗಿ ಸಿ.ಸಿ.ಟಿ.ವಿ ಕ್ಯಾಮೆರಾಗಳನ್ನು ಅಳವಡಿಸಬೇಕು ಎಂದು ಹೇಳಿದರು.</p>.<p>‘ಕರಗ ಉತ್ಸವಕ್ಕೆ ವ್ಯಾಪಾರಿಗಳು ಹಣವನ್ನು ಮುಂಗಡವಾಗಿ ಕೇಳುತ್ತಿದ್ದಾರೆ. ಹೀಗಾಗಿ ₹70 ಲಕ್ಷ ಬಿಡುಗಡೆ ಮಾಡಬೇಕು’ ಎಂದು ಧರ್ಮರಾಯಸ್ವಾಮಿ ದೇವಾಲಯ ವ್ಯವಸ್ಥಾಪನಾ ಸಮಿತಿಯವರು ಮನವಿ ಮಾಡಿದರು.</p>.<p>‘ಕರಗ ಉತ್ಸವಕ್ಕೆ ₹1 ಕೋಟಿಯವರೆಗೂ ಹಣ ಬಿಡುಗಡೆ ಮಾಡಲು ಅವಕಾಶವಿದೆ. ಈ ಆರ್ಥಿಕ ವರ್ಷವಾದ ನಂತರವಷ್ಟೇ ಹಣ ಬಿಡುಗಡೆ ಮಾಡಬಹುದು. ಎಲ್ಲದ್ದಕ್ಕೂ ಸೂಕ್ತ ಬಿಲ್ಗಳನ್ನು ನೀಡಿದರೆ ಏಪ್ರಿಲ್ನಲ್ಲಿ ಕೂಡಲೇ ಹಣ ಬಿಡುಗಡೆ ಮಾಡಲಾಗುತ್ತಿದೆ. ಕಳೆದ ಬಿಲ್ ಬಾಕಿ ಇದ್ದರೆ, ಅದಕ್ಕೆ ಬಿಲ್ಗಳನ್ನು ನೀಡಿದರೆ, ಅವು ಕ್ರಮಬದ್ಧವಾಗಿದ್ದರೆ ಹಣ ಬಿಡುಗಡೆಯಾಗುತ್ತದೆ’ ಎಂದು ತುಷಾರ್ ಗಿರಿನಾಥ್ ಸ್ಪಷ್ಟಪಡಿಸಿದರು.</p>.<p>‘ಕರಗ ನಡೆಯುವ ಸಂದರ್ಭದಲ್ಲಿ ಚುನಾವಣೆ ನೀತಿ ಸಂಹಿತೆ ಜಾರಿಯಾಗಬಹುದು. ಹೀಗಾಗಿ ಅಧಿಕಾರಿಗಳು ಹೇಳಿದಂತೆ ಕೇಳಿ. ಹೆಚ್ಚು ತೊಂದರೆ ಕೊಡಬೇಡಿ. ಎಲ್ಲ ರೀತಿಯ ನೆರವಿನೊಂದಿಗೆ ಉತ್ಸವ ನಡೆಸಿ’ ಎಂದು ಶಾಸಕ ಉದಯ್ ಗರುಡಾಚಾರ್ ಹೇಳಿದರು.</p>.<p>‘ಎಂದಿನಂತೆ ಕರಗ ಮಸ್ತಾನ್ ಸಾಬ್ ದರ್ಗಾಗೆ ಹೋಗುತ್ತದೆ. ಎಲ್ಲ ರೀತಿಯ ಸಂಪ್ರದಾಯಗಳು ಎಂದಿನಂತೆಯೇ ನಡೆಯಲಿವೆ’ ಎಂದು ಸ್ಪಷ್ಟಪಡಿಸಿದರು. </p>.<p>ವಿಶೇಷ ಆಯುಕ್ತರಾದ ಡಾ. ಹರೀಶ್ ಕುಮಾರ್, ಡಾ. ದೀಪಕ್, ರವೀಂದ್ರ, ದೇವಾಲಯ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆ. ಸತೀಶ್ ಇದ್ದರು.</p>.<p>ಕರಗ ವೇಳಾಪಟ್ಟಿ</p>.<p>ಮಾರ್ಚ್ 29ರಂದು ರಥೋತ್ಸವ ಧ್ವಜಾರೋಹಣ</p>.<p>ಮಾರ್ಚ್ 30ರಿಂದ ಏ.2ರವರೆಗೆ ಪ್ರತಿದಿನ ವಿಶೇಷ ಪೂಜೆ</p>.<p>ಏ.3ರಂದು ಆರತಿ ದೀಪಗಳು</p>.<p>ಏ.4ರಂದು ಹಸೀ ಕರಗ (ಸಂಪಂಗಿ ಕೆರೆ ಅಂಗಳದಲ್ಲಿ)</p>.<p>ಏ.5ರಂದು ಪೊಂಗಲು ಸೇವೆ</p>.<p>ಏ.6ರಂದು ಕರಗ ಶಕ್ತ್ಯುತ್ಸವ– ಧರ್ಮರಾಯಸ್ವಾಮಿ ಮಹಾರಥೋತ್ಸವ</p>.<p>ಏ.7ರಂದು ದೇವಸ್ಥಾನದಲ್ಲಿ ಗಾವು ಶಾಂತಿ</p>.<p>ಏ.8ರಂದು ವಸಂತೋತ್ಸವ, ಧ್ವಜಾರೋಹಣ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಚುನಾವಣೆ ನೀತಿ ಸಂಹಿತೆ ಹಾಗೂ ಕೋವಿಡ್ ಸಂಬಂಧ ಸರ್ಕಾರದ ಮಾರ್ಗಸೂಚಿಯಂತೆ ಬೆಂಗಳೂರು ಕರಗ ಉತ್ಸವ ಏ.6ರಂದು ನಡೆಯಲಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದರು.</p>.<p>ದ್ರೌಪದಿದೇವಿ ಕರಗ ಶಕ್ತ್ಯುತ್ಸವ ಮತ್ತು ಧರ್ಮರಾಯ ಸ್ವಾಮಿ ರಥೋತ್ಸವದ ಆಹ್ವಾನ ಪತ್ರಿಕೆಯನ್ನು ಮಂಗಳವಾರ ಬಿಡುಗಡೆ ಮಾಡಿ, ಅವರು ಮಾತನಾಡಿದರು.</p>.<p>ಕರಗ ಹೊರಡುವ ಮಾರ್ಗದ ರಸ್ತೆಗಳು ಹಾಗೂ ಪಾದಚಾರಿ ಮಾರ್ಗಗಳ ದುರಸ್ತಿ ಕಾರ್ಯವನ್ನು ಕೈಗೊಳ್ಳಬೇಕು. ಬೀದಿಗಳಲ್ಲಿ ದೀಪಗಳನ್ನು ಅಳವಡಿಸಬೇಕು. ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ನಿಯೋಜಿಸಬೇಕು. ಇ-ಶೌಚಾಲಯಗಳನ್ನು ಅಳವಡಿಸಬೇಕು. ಬಿಬಿಎಂಪಿ ವತಿಯಿಂದ ಸಂಪಂಗಿರಾಮನಗರ ಕಲ್ಯಾಣಿಯನ್ನು ಸ್ವಚ್ಛ ಮಾಡಬೇಕು. ಜಲಮಂಡಳಿ ವತಿಯಿಂದ ಕಲ್ಯಾಣಿಗೆ ನೀರು ತುಂಬಿಸಬೇಕು ಎಂದು ಅಧಿಕಾರಿಗಳಿಗೆ ಮುಖ್ಯ ಆಯುಕ್ತರು ಸೂಚಿಸಿದರು.</p>.<p>ಜಲಮಂಡಳಿ ವತಿಯಿಂದ ಒಳಚರಂಡಿಗಳನ್ನು ಸ್ವಚ್ಛಗೊಳಿಸಿ, ಎಲ್ಲೂ ಕೊಳಚೆ ನೀರು ಹೊರಬಾರದಂತೆ ಕ್ರಮ ವಹಿಸಬೇಕು. ಸಂಚಾರ ದಟ್ಟಣೆಯಾಗದಂತೆ ಮಾರ್ಗ ಬದಲಾವಣೆ ಹಾಗೂ ವಾಹನಗಳ ನಿಲುಗಡೆಗೆ ಸ್ಥಳ ನಿಗದಿ ಮಾಡಬೇಕು. ಮುನ್ನೆಚ್ಚರಿಕಾ ಕ್ರಮವಾಗಿ ಸಿ.ಸಿ.ಟಿ.ವಿ ಕ್ಯಾಮೆರಾಗಳನ್ನು ಅಳವಡಿಸಬೇಕು ಎಂದು ಹೇಳಿದರು.</p>.<p>‘ಕರಗ ಉತ್ಸವಕ್ಕೆ ವ್ಯಾಪಾರಿಗಳು ಹಣವನ್ನು ಮುಂಗಡವಾಗಿ ಕೇಳುತ್ತಿದ್ದಾರೆ. ಹೀಗಾಗಿ ₹70 ಲಕ್ಷ ಬಿಡುಗಡೆ ಮಾಡಬೇಕು’ ಎಂದು ಧರ್ಮರಾಯಸ್ವಾಮಿ ದೇವಾಲಯ ವ್ಯವಸ್ಥಾಪನಾ ಸಮಿತಿಯವರು ಮನವಿ ಮಾಡಿದರು.</p>.<p>‘ಕರಗ ಉತ್ಸವಕ್ಕೆ ₹1 ಕೋಟಿಯವರೆಗೂ ಹಣ ಬಿಡುಗಡೆ ಮಾಡಲು ಅವಕಾಶವಿದೆ. ಈ ಆರ್ಥಿಕ ವರ್ಷವಾದ ನಂತರವಷ್ಟೇ ಹಣ ಬಿಡುಗಡೆ ಮಾಡಬಹುದು. ಎಲ್ಲದ್ದಕ್ಕೂ ಸೂಕ್ತ ಬಿಲ್ಗಳನ್ನು ನೀಡಿದರೆ ಏಪ್ರಿಲ್ನಲ್ಲಿ ಕೂಡಲೇ ಹಣ ಬಿಡುಗಡೆ ಮಾಡಲಾಗುತ್ತಿದೆ. ಕಳೆದ ಬಿಲ್ ಬಾಕಿ ಇದ್ದರೆ, ಅದಕ್ಕೆ ಬಿಲ್ಗಳನ್ನು ನೀಡಿದರೆ, ಅವು ಕ್ರಮಬದ್ಧವಾಗಿದ್ದರೆ ಹಣ ಬಿಡುಗಡೆಯಾಗುತ್ತದೆ’ ಎಂದು ತುಷಾರ್ ಗಿರಿನಾಥ್ ಸ್ಪಷ್ಟಪಡಿಸಿದರು.</p>.<p>‘ಕರಗ ನಡೆಯುವ ಸಂದರ್ಭದಲ್ಲಿ ಚುನಾವಣೆ ನೀತಿ ಸಂಹಿತೆ ಜಾರಿಯಾಗಬಹುದು. ಹೀಗಾಗಿ ಅಧಿಕಾರಿಗಳು ಹೇಳಿದಂತೆ ಕೇಳಿ. ಹೆಚ್ಚು ತೊಂದರೆ ಕೊಡಬೇಡಿ. ಎಲ್ಲ ರೀತಿಯ ನೆರವಿನೊಂದಿಗೆ ಉತ್ಸವ ನಡೆಸಿ’ ಎಂದು ಶಾಸಕ ಉದಯ್ ಗರುಡಾಚಾರ್ ಹೇಳಿದರು.</p>.<p>‘ಎಂದಿನಂತೆ ಕರಗ ಮಸ್ತಾನ್ ಸಾಬ್ ದರ್ಗಾಗೆ ಹೋಗುತ್ತದೆ. ಎಲ್ಲ ರೀತಿಯ ಸಂಪ್ರದಾಯಗಳು ಎಂದಿನಂತೆಯೇ ನಡೆಯಲಿವೆ’ ಎಂದು ಸ್ಪಷ್ಟಪಡಿಸಿದರು. </p>.<p>ವಿಶೇಷ ಆಯುಕ್ತರಾದ ಡಾ. ಹರೀಶ್ ಕುಮಾರ್, ಡಾ. ದೀಪಕ್, ರವೀಂದ್ರ, ದೇವಾಲಯ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆ. ಸತೀಶ್ ಇದ್ದರು.</p>.<p>ಕರಗ ವೇಳಾಪಟ್ಟಿ</p>.<p>ಮಾರ್ಚ್ 29ರಂದು ರಥೋತ್ಸವ ಧ್ವಜಾರೋಹಣ</p>.<p>ಮಾರ್ಚ್ 30ರಿಂದ ಏ.2ರವರೆಗೆ ಪ್ರತಿದಿನ ವಿಶೇಷ ಪೂಜೆ</p>.<p>ಏ.3ರಂದು ಆರತಿ ದೀಪಗಳು</p>.<p>ಏ.4ರಂದು ಹಸೀ ಕರಗ (ಸಂಪಂಗಿ ಕೆರೆ ಅಂಗಳದಲ್ಲಿ)</p>.<p>ಏ.5ರಂದು ಪೊಂಗಲು ಸೇವೆ</p>.<p>ಏ.6ರಂದು ಕರಗ ಶಕ್ತ್ಯುತ್ಸವ– ಧರ್ಮರಾಯಸ್ವಾಮಿ ಮಹಾರಥೋತ್ಸವ</p>.<p>ಏ.7ರಂದು ದೇವಸ್ಥಾನದಲ್ಲಿ ಗಾವು ಶಾಂತಿ</p>.<p>ಏ.8ರಂದು ವಸಂತೋತ್ಸವ, ಧ್ವಜಾರೋಹಣ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>