ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆ.ಜಿ.ಹಳ್ಳಿ ಗಲಭೆ: ಪ್ರಮುಖ ಆರೋಪಿ ಸೈಯದ್‌ ಅಬ್ಬಾಸ್ ಬಂಧನ

Last Updated 30 ಜೂನ್ 2021, 16:52 IST
ಅಕ್ಷರ ಗಾತ್ರ

ಬೆಂಗಳೂರು: ಕೆ.ಜಿ.ಹಳ್ಳಿ ಗಲಭೆ ಪ್ರಕರಣದ ಪ್ರಮುಖ ಆರೋಪಿ ಸೈಯದ್‌ ಅಬ್ಬಾಸ್‌ನನ್ನು (38) ರಾಷ್ಟ್ರೀಯ ತನಿಖಾ ದಳದ (ಎನ್‌ಐಎ) ಅಧಿಕಾರಿಗಳು ಬುಧವಾರ ಬಂಧಿಸಿದ್ದಾರೆ.

ಗೋವಿಂದಪುರ ನಿವಾಸಿಯಾಗಿರುವ ಅಬ್ಬಾಸ್‌, ಆಗಸ್ಟ್‌ 11ರಂದು ಕೆ.ಜಿ.ಹಳ್ಳಿಯಲ್ಲಿ ನಡೆದಿದ್ದ ಗಲಭೆಯಲ್ಲಿ ಭಾಗಿಯಾಗಿದ್ದ. ಈ ಸಂಬಂಧ ಅಬ್ಬಾಸ್‌ ವಿರುದ್ಧ ಕೆ.ಜಿ.ಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಬಳಿಕ ತನಿಖೆ ಕೈಗೆತ್ತಿಕೊಂಡಿದ್ದ ಎನ್‌ಐಎ, ಅಬ್ಬಾಸ್‌ನ ಬಗ್ಗೆ ಮಾಹಿತಿ ಕಲೆ ಹಾಕಿತ್ತು. ‘ಅಬ್ಬಾಸ್‌ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ (ಎಸ್‌ಡಿಪಿಐ) ನಾಗವಾರ ವಿಭಾಗದ ಅಧ್ಯಕ್ಷ. ಈಗಾಗಲೇ ಪ್ರಕರಣದಲ್ಲಿ ಚಾರ್ಚ್‌ಶೀಟ್‌ನಲ್ಲಿರುವ ಆರೋಪಿಗಳೂ ಎಸ್‌ಡಿಪಿಐ ಘಟಕದ ಪದಾಧಿಕಾರಿಗಳು’ ಎಂದು ತನಿಖೆ ವೇಳೆ ತಿಳಿದುಬಂದಿದೆ.

ಇವರೆಲ್ಲರೂ ಗಲಭೆ ವೇಳೆ ಕೆ.ಜಿ.ಹಳ್ಳಿ ಠಾಣೆಯ ಬಳಿ ಇದ್ದ ವಾಹನಗಳಿಗೆ ಬೆಂಕಿ ಇಟ್ಟಿದ್ದು, ಪೊಲೀಸರ ಮೇಲೆ ದಾಳಿಯೂ ನಡೆಸಿದ್ದರು.

ಆರೋಪಿ ಅಬ್ಬಾಸ್‌ನನ್ನು ಬೆಂಗಳೂರಿನಲ್ಲಿರುವ ಎನ್‌ಐಎ ವಿಶೇಷ ನ್ಯಾಯಾಲಯದ ಎದುರು ಹಾಜರುಪಡಿಸಲಾಗಿದ್ದು, ಆರು ದಿನಗಳ ಕಾಲ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ ಎಂದು ಎನ್‌ಐಎ ಪ್ರಕಟಣೆಯಲ್ಲಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT