<p><strong>ಬೆಂಗಳೂರು</strong>: ಮದುವೆಯಾಗುವಂತೆ ಒತ್ತಾಯಿಸಿದ ಮಹಿಳೆಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಕೆ.ಜಿ.ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.</p>.<p>ಮೃತ ಮಹಿಳೆಯನ್ನು ರೇಣುಕಾ ಎಂದು ಗುರುತಿಸಲಾಗಿದ್ದು, ಈಕೆಯ ಪ್ರಿಯಕರ ಅಂಬೇಡ್ಕರ್ ಅಲಿಯಾಸ್ ಕುಟ್ಟಿ ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ.</p>.<p>ರೇಣುಕಾ ಅವರು ವರ್ಷದ ಹಿಂದೆ ಪತಿಯನ್ನು ತೊರೆದು, ಕೆ.ಜಿ.ಹಳ್ಳಿಯ ಪಿಳ್ಳಣ್ಣ ಗಾರ್ಡನ್ನಲ್ಲಿ ಪ್ರತ್ಯೇಕವಾಗಿ ಮಗನ ಜತೆ ವಾಸವಿದ್ದರು. ಈ ವೇಳೆ ಹಣಕಾಸು ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಅಂಬೇಡ್ಕರ್ ಅವರ ಪರಿಚಯವಾಗಿ, ಅದು ಪ್ರೇಮಕ್ಕೆ ತಿರುಗಿದೆ. ಇಬ್ಬರ ನಡುವೆ ಸಲುಗೆ ಬೆಳೆದಿದ್ದು, ಬಳಿಕ ಮದುವೆಯಾಗುವಂತೆ ಒತ್ತಾಯಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಕೆಲಸ ಮುಗಿಸಿಕೊಂಡು ಮನೆಗೆ ಹೋಗುತ್ತಿದ್ದ ರೇಣುಕಾ ಅವರನ್ನು ಮಾತನಾಡುವ ಸಲುವಾಗಿ ಕರೆಯಿಸಿಕೊಂಡ ಕುಟ್ಟಿ, ಪಿಳ್ಳಣ್ಣ ಗಾರ್ಡನ್ನ ಸರ್ಕಾರಿ ಶಾಲೆ ಬಳಿ ಕರೆದುಕೊಂಡು ಹೋಗಿ ಜಗಳವಾಡಿದ್ದಾರೆ. ಈ ವೇಳೆ ಚಾಕುವಿನಿಂದ ಅವರಿಗೆ ಆರು ಬಾರಿ ಇರಿದು ಕೊಲೆ ಮಾಡಿ, ಪರಾರಿಯಾಗಿದ್ದಾರೆ. ಇದನ್ನು ಕಂಡ ಸಾರ್ವಜನಿಕರು ಆರೋಪಿ ಹಿಡಿಯಲು ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ.</p>.<p>ಕೆ.ಜಿ.ಹಳ್ಳಿ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ರೇಣುಕಾ ಅವರನ್ನು ಆಸ್ಪತ್ರೆಗೆ ದಾಖಲಿಸಿದರು. ಆದರೆ ಚಿಕಿತ್ಸೆಗೆ ಸ್ಪಂದಿಸಲಿಲ್ಲ.</p>.<p>ಮೃತಳ ಸಂಬಂಧಿಕರ ದೂರಿನ ಮೇರೆಗೆ ಆರೋಪಿಯನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಕೆ.ಜಿ.ಹಳ್ಳಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಮುಂದಿನ ತನಿಖೆ ಕೈಗೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಮದುವೆಯಾಗುವಂತೆ ಒತ್ತಾಯಿಸಿದ ಮಹಿಳೆಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಕೆ.ಜಿ.ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.</p>.<p>ಮೃತ ಮಹಿಳೆಯನ್ನು ರೇಣುಕಾ ಎಂದು ಗುರುತಿಸಲಾಗಿದ್ದು, ಈಕೆಯ ಪ್ರಿಯಕರ ಅಂಬೇಡ್ಕರ್ ಅಲಿಯಾಸ್ ಕುಟ್ಟಿ ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ.</p>.<p>ರೇಣುಕಾ ಅವರು ವರ್ಷದ ಹಿಂದೆ ಪತಿಯನ್ನು ತೊರೆದು, ಕೆ.ಜಿ.ಹಳ್ಳಿಯ ಪಿಳ್ಳಣ್ಣ ಗಾರ್ಡನ್ನಲ್ಲಿ ಪ್ರತ್ಯೇಕವಾಗಿ ಮಗನ ಜತೆ ವಾಸವಿದ್ದರು. ಈ ವೇಳೆ ಹಣಕಾಸು ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಅಂಬೇಡ್ಕರ್ ಅವರ ಪರಿಚಯವಾಗಿ, ಅದು ಪ್ರೇಮಕ್ಕೆ ತಿರುಗಿದೆ. ಇಬ್ಬರ ನಡುವೆ ಸಲುಗೆ ಬೆಳೆದಿದ್ದು, ಬಳಿಕ ಮದುವೆಯಾಗುವಂತೆ ಒತ್ತಾಯಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಕೆಲಸ ಮುಗಿಸಿಕೊಂಡು ಮನೆಗೆ ಹೋಗುತ್ತಿದ್ದ ರೇಣುಕಾ ಅವರನ್ನು ಮಾತನಾಡುವ ಸಲುವಾಗಿ ಕರೆಯಿಸಿಕೊಂಡ ಕುಟ್ಟಿ, ಪಿಳ್ಳಣ್ಣ ಗಾರ್ಡನ್ನ ಸರ್ಕಾರಿ ಶಾಲೆ ಬಳಿ ಕರೆದುಕೊಂಡು ಹೋಗಿ ಜಗಳವಾಡಿದ್ದಾರೆ. ಈ ವೇಳೆ ಚಾಕುವಿನಿಂದ ಅವರಿಗೆ ಆರು ಬಾರಿ ಇರಿದು ಕೊಲೆ ಮಾಡಿ, ಪರಾರಿಯಾಗಿದ್ದಾರೆ. ಇದನ್ನು ಕಂಡ ಸಾರ್ವಜನಿಕರು ಆರೋಪಿ ಹಿಡಿಯಲು ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ.</p>.<p>ಕೆ.ಜಿ.ಹಳ್ಳಿ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ರೇಣುಕಾ ಅವರನ್ನು ಆಸ್ಪತ್ರೆಗೆ ದಾಖಲಿಸಿದರು. ಆದರೆ ಚಿಕಿತ್ಸೆಗೆ ಸ್ಪಂದಿಸಲಿಲ್ಲ.</p>.<p>ಮೃತಳ ಸಂಬಂಧಿಕರ ದೂರಿನ ಮೇರೆಗೆ ಆರೋಪಿಯನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಕೆ.ಜಿ.ಹಳ್ಳಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಮುಂದಿನ ತನಿಖೆ ಕೈಗೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>