<p>ಬೆಂಗಳೂರು: ಸಾರಕ್ಕಿ ಸಮೀಪದ ಸಂಗಮ್ ವೃತ್ತದ ಬಳಿ ರಸ್ತೆಬದಿಯ ಮರಕ್ಕೆ ನೇಣುಹಾಕಿಕೊಂಡು ರಂಗಭೂಮಿ ಕಲಾವಿದ, ಕೋಲಾರದ ಮುರುಳಿ (32) ಅವರು ಬುಧವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ಬೆಳಿಗ್ಗೆ 7ರ ಸುಮಾರಿಗೆ ಸಾರ್ವಜನಿಕರು ನೀಡಿದ ಮಾಹಿತಿ ಮೇರೆಗೆ ಸ್ಥಳಕ್ಕೆ ತೆರಳಿ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಯಿತು. ಮುರುಳಿ ಪೋಷಕರು ನೀಡಿದ ದೂರಿನ ಮೇಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದರು.</p>.<p>ರಂಗಭೂಮಿಯ ತಾಂತ್ರಿಕ ವಿಭಾಗದಲ್ಲಿ ಮುರುಳಿ ಕೆಲಸ ಮಾಡುತ್ತಿದ್ದರು. ಜತೆಗೆ ಕಿರುಚಿತ್ರಗಳಲ್ಲೂ ನಟಿಸಿದ್ದರು. ಗಿರಿನಗರದಲ್ಲಿ ವಾಸವಾಗಿದ್ದರು ಎಂದು ಮೂಲಗಳು ಹೇಳಿವೆ.</p>.<p>ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ವೈಯಕ್ತಿಕ ಕಾರಣ ಇರಬಹುದು ಎಂಬುದಾಗಿ ಶಂಕಿಸಲಾಗಿದೆ ಎಂದು ಪೊಲೀಸರು ಹೇಳಿದರು.</p>.<p>‘ಆತ್ಮಹತ್ಯೆಗೂ ಕೆಲವು ತಾಸು ಮೊದಲು ಮುರುಳಿ ಅವರು, ‘ನಾನು ಸರಿಯಾಗಿ ಏನನ್ನೂ ಮಾಡಲು ಸಾಧ್ಯವಾಗಲಿಲ್ಲ. ಮುಂದಿನ ಜನ್ಮದಲ್ಲಿ ಮತ್ತೆ ನಿಮ್ಮ ಹೊಟ್ಟೆಯಲ್ಲಿ ಹುಟ್ಟುತ್ತೇನೆ’ ಎಂಬುದಾಗಿ ಪೋಷಕರಿಗೆ ವಾಟ್ಸ್ಆ್ಯಪ್ ಸಂದೇಶ ಕಳುಹಿಸಿದ್ದರು’ ಎಂದು ಪೊಲೀಸರು ಹೇಳಿದರು.</p>.<p>ಜೆ.ಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260409-18-1483960768</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಸಾರಕ್ಕಿ ಸಮೀಪದ ಸಂಗಮ್ ವೃತ್ತದ ಬಳಿ ರಸ್ತೆಬದಿಯ ಮರಕ್ಕೆ ನೇಣುಹಾಕಿಕೊಂಡು ರಂಗಭೂಮಿ ಕಲಾವಿದ, ಕೋಲಾರದ ಮುರುಳಿ (32) ಅವರು ಬುಧವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ಬೆಳಿಗ್ಗೆ 7ರ ಸುಮಾರಿಗೆ ಸಾರ್ವಜನಿಕರು ನೀಡಿದ ಮಾಹಿತಿ ಮೇರೆಗೆ ಸ್ಥಳಕ್ಕೆ ತೆರಳಿ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಯಿತು. ಮುರುಳಿ ಪೋಷಕರು ನೀಡಿದ ದೂರಿನ ಮೇಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದರು.</p>.<p>ರಂಗಭೂಮಿಯ ತಾಂತ್ರಿಕ ವಿಭಾಗದಲ್ಲಿ ಮುರುಳಿ ಕೆಲಸ ಮಾಡುತ್ತಿದ್ದರು. ಜತೆಗೆ ಕಿರುಚಿತ್ರಗಳಲ್ಲೂ ನಟಿಸಿದ್ದರು. ಗಿರಿನಗರದಲ್ಲಿ ವಾಸವಾಗಿದ್ದರು ಎಂದು ಮೂಲಗಳು ಹೇಳಿವೆ.</p>.<p>ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ವೈಯಕ್ತಿಕ ಕಾರಣ ಇರಬಹುದು ಎಂಬುದಾಗಿ ಶಂಕಿಸಲಾಗಿದೆ ಎಂದು ಪೊಲೀಸರು ಹೇಳಿದರು.</p>.<p>‘ಆತ್ಮಹತ್ಯೆಗೂ ಕೆಲವು ತಾಸು ಮೊದಲು ಮುರುಳಿ ಅವರು, ‘ನಾನು ಸರಿಯಾಗಿ ಏನನ್ನೂ ಮಾಡಲು ಸಾಧ್ಯವಾಗಲಿಲ್ಲ. ಮುಂದಿನ ಜನ್ಮದಲ್ಲಿ ಮತ್ತೆ ನಿಮ್ಮ ಹೊಟ್ಟೆಯಲ್ಲಿ ಹುಟ್ಟುತ್ತೇನೆ’ ಎಂಬುದಾಗಿ ಪೋಷಕರಿಗೆ ವಾಟ್ಸ್ಆ್ಯಪ್ ಸಂದೇಶ ಕಳುಹಿಸಿದ್ದರು’ ಎಂದು ಪೊಲೀಸರು ಹೇಳಿದರು.</p>.<p>ಜೆ.ಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260409-18-1483960768</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>