ಕೆ.ಆರ್.ಪುರ ಬಿಬಿಎಂಪಿ ಬಳಿಯ ರಾಷ್ಟ್ರೀಯ ಹೆದ್ದಾರಿಯಿಂದ ಭಟ್ಟರಹಳ್ಳಿ ತನಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಂಡಿಗಳು ಬಿದ್ದು ಸಂಪೂರ್ಣ ಹದಗೆಟ್ಟಿದೆ. ರಾಷ್ಟ್ರೀಯ ಹೆದ್ದಾರಿಯು ನಗರದಿಂದ ತಮಿಳುನಾಡು, ಆಂಧ್ರಪ್ರದೇಶ, ರಾಜ್ಯದ ಕೋಲಾರ, ಚಿಕ್ಕಬಳ್ಳಾಪುರ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿಯಾಗಿದೆ. ದಿನಕ್ಕೆ ಎರಡು ಲಕ್ಷಕ್ಕೂ ಅಧಿಕ ವಾಹನಗಳು ಈ ರಸ್ತೆಯ ಮೂಲಕ ಸಂಚಾರ ನಡೆಸುತ್ತವೆ. ಇಂತಹ ಗುಂಡಿಗಳು ಬಿದ್ದಿದ್ದು, ಗುಂಡಿಗಳು ತಪ್ಪಿಸಲು ಹೋಗಿ ಅಪಘಾತಗಳು ಸಂಭವಿಸಿ, ಕೆಲವರು ಪ್ರಾಣ ಕಳೆದುಕೊಂಡಿದ್ದಾರೆ.
ಇಷ್ಟಾದರೂ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸದೇ ನಿರ್ಲಕ್ಷ್ಯ ತೋರಿದ್ದಾರೆ ಎಂದು ಅವರು ಆರೋಪಿಸಿದರು.