<p>ಕೆ.ಆರ್.ಪುರ: ಕ್ಷೇತ್ರ ವ್ಯಾಪ್ತಿಯಲ್ಲಿರುವ ರಸ್ತೆ ಗುಂಡಿಗಳನ್ನು ಮುಚ್ಚುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಕುಮಾರ್ ಶೆಟ್ಟಿ ಬಣದ ಕಾರ್ಯಕರ್ತರು ಕೆ.ಆರ್ ಪುರದ ಬಿಬಿಎಂಪಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.</p>.<p>ಬಸವನಪುರ, ದೇವಸಂದ್ರ, ರಾಮಮೂರ್ತಿನಗರ, ಭಟ್ಟರಹಳ್ಳಿ ಸೇರಿದಂತೆ ಪ್ರಮುಖ ಮುಖ್ಯರಸ್ತೆಯಲ್ಲಿ ಗುಂಡಿಗಳು ಬಿದ್ದು ರಸ್ತೆಗಳು ಸಂಪೂರ್ಣವಾಗಿ ಹದಗೆಟ್ಟಿದೆ. ಸಾವಿರಾರು ವಾಹನ ಸಂಚರಿಸುವ ಮುಖ್ಯರಸ್ತೆಗಳಲ್ಲಿ ನೂರಾರು ಗುಂಡಿಗಳಾಗಿವೆ. ವಾಹನ ಸವಾರರು ಗುಂಡಿ ತಪ್ಪಿಸುವ ಭರದಲ್ಲಿ ಅಪಘಾತಗಳು ಸಂಭವಿಸುತ್ತಿವೆ ಪ್ರತಿಭಟನಾಕಾರರು ದೂರಿದರು.</p>.<p>ರಸ್ತೆ ಗುಂಡಿಗಳಿಂದಾಗಿ ಅನೇಕರು ಆಸ್ಪತ್ರೆ ಸೇರುತ್ತಿದ್ದಾರೆ. ಅಲ್ಲದೆ ವಿಪರೀತ ಸಂಚಾರ ದಟ್ಟಣೆ ಉಂಟಾಗುತ್ತಿದೆ. ನಗರದಲ್ಲಿ ಗುಂಡಿ ಮುಚ್ಚಲು ಸರ್ಕಾರ ಅನುದಾನ ಒದಗಿಸಿದೆ. ಆದರೆ ಬಿಬಿಎಂಪಿ ಅಧಿಕಾರಿಗಳು ಗುಂಡಿ ಮುಚ್ಚುವ ಕೆಲಸ ಮಾಡದೇ ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ದೂರಿದರು.</p>.<p>‘ಪ್ರಮುಖ ರಸ್ತೆಗಳಲ್ಲಾಗಿರುವ ಗುಂಡಿಗಳಿಂದ ಜನಸಾಮಾನ್ಯರಿಗೆ ತುಂಬಾ ತೊಂದರೆ ಆಗುತ್ತಿದೆ. ಕೂಡಲೇ ಬಿಬಿಎಂಪಿ ಅಧಿಕಾರಿಗಳು ಹದಗೆಟ್ಟಿರುವ ರಸ್ತೆಗಳನ್ನು ದುರಸ್ತಿಗೊಳಿಸಬೇಕು‘ ಎಂದು ಕೆ.ಆರ್.ಪುರ ಕ್ಷೇತ್ರ ಕರವೇ ಅಧ್ಯಕ್ಷ ಕೃಷ್ಣಮೂರ್ತಿ ಆಗ್ರಹಿಸಿದರು.</p>.<p>ಪ್ರತಿಭಟನೆಯಲ್ಲಿ ಚಂದ್ರು, ಪುಷ್ಪ, ವಿನಯ್, ಗುರುವ್ ರೆಡ್ಡಿ, ಅಶೋಕ್,ಇರ್ಫಾನ್, ಮಲ್ಲಪ್ಪ, ಲಕ್ಷ್ಮೀನಾರಾಯಣ, ಪುರುಷೋತ್ತಮ, ರವಿಚಂದ್ರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೆ.ಆರ್.ಪುರ: ಕ್ಷೇತ್ರ ವ್ಯಾಪ್ತಿಯಲ್ಲಿರುವ ರಸ್ತೆ ಗುಂಡಿಗಳನ್ನು ಮುಚ್ಚುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಕುಮಾರ್ ಶೆಟ್ಟಿ ಬಣದ ಕಾರ್ಯಕರ್ತರು ಕೆ.ಆರ್ ಪುರದ ಬಿಬಿಎಂಪಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.</p>.<p>ಬಸವನಪುರ, ದೇವಸಂದ್ರ, ರಾಮಮೂರ್ತಿನಗರ, ಭಟ್ಟರಹಳ್ಳಿ ಸೇರಿದಂತೆ ಪ್ರಮುಖ ಮುಖ್ಯರಸ್ತೆಯಲ್ಲಿ ಗುಂಡಿಗಳು ಬಿದ್ದು ರಸ್ತೆಗಳು ಸಂಪೂರ್ಣವಾಗಿ ಹದಗೆಟ್ಟಿದೆ. ಸಾವಿರಾರು ವಾಹನ ಸಂಚರಿಸುವ ಮುಖ್ಯರಸ್ತೆಗಳಲ್ಲಿ ನೂರಾರು ಗುಂಡಿಗಳಾಗಿವೆ. ವಾಹನ ಸವಾರರು ಗುಂಡಿ ತಪ್ಪಿಸುವ ಭರದಲ್ಲಿ ಅಪಘಾತಗಳು ಸಂಭವಿಸುತ್ತಿವೆ ಪ್ರತಿಭಟನಾಕಾರರು ದೂರಿದರು.</p>.<p>ರಸ್ತೆ ಗುಂಡಿಗಳಿಂದಾಗಿ ಅನೇಕರು ಆಸ್ಪತ್ರೆ ಸೇರುತ್ತಿದ್ದಾರೆ. ಅಲ್ಲದೆ ವಿಪರೀತ ಸಂಚಾರ ದಟ್ಟಣೆ ಉಂಟಾಗುತ್ತಿದೆ. ನಗರದಲ್ಲಿ ಗುಂಡಿ ಮುಚ್ಚಲು ಸರ್ಕಾರ ಅನುದಾನ ಒದಗಿಸಿದೆ. ಆದರೆ ಬಿಬಿಎಂಪಿ ಅಧಿಕಾರಿಗಳು ಗುಂಡಿ ಮುಚ್ಚುವ ಕೆಲಸ ಮಾಡದೇ ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ದೂರಿದರು.</p>.<p>‘ಪ್ರಮುಖ ರಸ್ತೆಗಳಲ್ಲಾಗಿರುವ ಗುಂಡಿಗಳಿಂದ ಜನಸಾಮಾನ್ಯರಿಗೆ ತುಂಬಾ ತೊಂದರೆ ಆಗುತ್ತಿದೆ. ಕೂಡಲೇ ಬಿಬಿಎಂಪಿ ಅಧಿಕಾರಿಗಳು ಹದಗೆಟ್ಟಿರುವ ರಸ್ತೆಗಳನ್ನು ದುರಸ್ತಿಗೊಳಿಸಬೇಕು‘ ಎಂದು ಕೆ.ಆರ್.ಪುರ ಕ್ಷೇತ್ರ ಕರವೇ ಅಧ್ಯಕ್ಷ ಕೃಷ್ಣಮೂರ್ತಿ ಆಗ್ರಹಿಸಿದರು.</p>.<p>ಪ್ರತಿಭಟನೆಯಲ್ಲಿ ಚಂದ್ರು, ಪುಷ್ಪ, ವಿನಯ್, ಗುರುವ್ ರೆಡ್ಡಿ, ಅಶೋಕ್,ಇರ್ಫಾನ್, ಮಲ್ಲಪ್ಪ, ಲಕ್ಷ್ಮೀನಾರಾಯಣ, ಪುರುಷೋತ್ತಮ, ರವಿಚಂದ್ರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>