ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಕೀಲರು ಮುಂಚೂಣಿ ಯೋಧರೆಂದು ಪರಿಗಣಿಸಲು ಮನವಿ

Last Updated 15 ಮೇ 2021, 18:37 IST
ಅಕ್ಷರ ಗಾತ್ರ

ಬೆಂಗಳೂರು: ವಕೀಲರನ್ನು ಕೋವಿಡ್ ಮುಂಚೂಣಿ ಯೋಧರೆಂದು ಪರಿಗಣಿಸುವಂತೆ ಕೋರಿ ರಾಜ್ಯ ಸರ್ಕಾರಕ್ಕೆ ಬೆಂಗಳೂರು ವಕೀಲರ ಸಂಘ ಮನವಿ ಸಲ್ಲಿಸಿದೆ. ಕೋವಿಡ್‌ನಿಂದ ಮೃತಪಟ್ಟ ವಕೀಲರಿಗೆ ₹30 ಲಕ್ಷ ಪರಿಹಾರ ನೀಡಬೇಕು ಎಂದು ಆಗ್ರಹಿಸಿದೆ.

‘ನ್ಯಾಯಾಂಗದ ಕಾರ್ಯ ಕಾಲಪಗಳು ಸ್ಥಗಿತಗೊಳ್ಳದಂತೆ ನೋಡಿಕೊಳ್ಳಲು ವಕೀಲರು ಸಾಕಷ್ಟು ಶ್ರಮಿಸಿದ್ದಾರೆ. ನಿಸ್ವಾರ್ಥ ಸೇವೆ ನೀಡುತ್ತಿದ್ದ ಅನೇಕ ವಕೀಲರು ಕೋವಿಡ್‌ಗೆ ತಮ್ಮ ಪ್ರಾಣ ತ್ಯಾಗ ಮಾಡಿದ್ದಾರೆ’ ಎಂದು ಹೇಳಿದೆ.

‘ಅನೇಕ ವಕೀಲರು ಈಗ ಆರ್ಥಿಕ ಬಿಕ್ಕಟ್ಟಿನಲ್ಲಿದ್ದಾರೆ. ಜೀವನ ನಡೆಸಲೂ ಸಾಧ್ಯವಾಗದ ಸ್ಥಿತಿಯಲ್ಲಿದ್ದಾರೆ. ಎಲ್ಲ ಆಸ್ಪತ್ರೆಗಳಲ್ಲಿ ವಕೀಲರಿಗೆ ಉಚಿತವಾಗಿ ಚಿಕಿತ್ಸೆ ದೊರೆಕಿಸಬೇಕು’ ಎಂದು ಸಂಘದ ಅಧ್ಯಕ್ಷ ಎ.ಪಿ. ರಂಗನಾಥ್ ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT