<p><strong>ಬೆಂಗಳೂರು:</strong> ‘ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಮಂಗಳವಾರ ರಾತ್ರಿಯೇ ಲಾಕ್ಡೌನ್ ಅಂತ್ಯಗೊಳ್ಳಲಿದೆ. ಅದನ್ನು ಮುಂದುವರಿಸುವ ಪ್ರಶ್ನೆಯೇ ಇಲ್ಲ’ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.</p>.<p>ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನ ಎಂಟು ವಲಯಗಳ ಕೋವಿಡ್ ಉಸ್ತುವಾರಿ ಸಚಿವರ ಸಭೆ ಸೋಮವಾರ ನಡೆಯಿತು.</p>.<p>ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಬುಧವಾರದಿಂದ ಜನ ಜೀವನ ಮತ್ತು ಚಟುವಟಿಕೆಗಳು ಸಾಮಾನ್ಯವಾಗಿರಲಿವೆ. ಆದರೆ, ರಾತ್ರಿ 8ರಿಂದ ಬೆಳಗ್ಗೆ 5 ಗಂಟೆವರೆಗೆ ಕರ್ಫ್ಯೂ ಮುಂದುವರಿಯಲಿದೆ’ ಎಂದರು.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/karnataka-news/coronavirus-testing-and-total-cases-in-karnataka-746715.html" target="_blank">ಕೊರೊನಾ: ಹೆಚ್ಚಾದ ಪರೀಕ್ಷೆ, ಪ್ರಕರಣ ಕಡಿಮೆ</a></p>.<p>‘ಉಳಿದ ಜಿಲ್ಲೆಗಳಲ್ಲೂ ಲಾಕ್ಡೌನ್ ಮುಂದುವರಿಸುವ ಸಾಧ್ಯತೆ ಇಲ್ಲ. ಕೆಲವೆಡೆ ಪರಿಸ್ಥಿತಿ ಆಧರಿಸಿ ಜಿಲ್ಲಾಡಳಿತ ತೀರ್ಮಾನ ತೆಗೆದುಕೊಳ್ಳಲಿದೆ. ಈ ಹಿಂದಿನ ಆದೇಶದಂತೆ ಭಾನುವಾರಗಳಂದು ಲಾಕ್ಡೌನ್ ಇರುತ್ತದೆ. ಇದಕ್ಕೆ ಸಂಬಂಧಿಸಿದಂತೆ ಪ್ರತ್ಯೇಕ ಮಾರ್ಗಸೂಚಿ ಹೊರಡಿಸಲಾಗುವುದು’ಎಂದು ಅವರು ಹೇಳಿದರು.</p>.<p>‘ರಾಷ್ಟ್ರೀಯ ಆರೋಗ್ಯ ಮಿಷನ್ (ಎನ್ಎಂಎಚ್) ಅಡಿ ನೇಮಕಗೊಂಡಿರುವ ವೈದ್ಯರ ವೇತನವನ್ನು ₹25 ಸಾವಿರದಿಂದ ₹45 ಸಾವಿರಕ್ಕೆ ಏರಿಕೆ ಮಾಡಲು ತೀರ್ಮಾನಿಸಲಾಗಿದೆ. ಆರು ತಿಂಗಳವರೆಗೆ ರಾಜ್ಯ ಸರ್ಕಾರವೇ ಪೂರ್ಣ ವೇತನ ಭರಿಸಲಿದೆ. ಮುಂದೆ ಕೇಂದ್ರದ ಜತೆ ಹೊಸ ಒಪ್ಪಂದ ಮಾಡಿಕೊಳ್ಳಲಾಗುವುದು. ಈ ವೈದ್ಯರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು 60:40ರ ಅನುಪಾತದಲ್ಲಿ ವೇತನ ಭರಿಸುತ್ತಿವೆ’ ಎಂದು ಹೇಳಿದರು.</p>.<p>‘ಬೆಂಗಳೂರಿನ ಎಂಟು ವಲಯಗಳಿಗೆ ಸಚಿವರನ್ನು ಉಸ್ತುವಾರಿಗಳನ್ನಾಗಿ ನೇಮಿಸಿದ ಬಳಿಕ ಬೂತ್ ಮಟ್ಟದಲ್ಲಿ ಕಾರ್ಯಪಡೆಗಳು ಹೆಚ್ಚು ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸುತ್ತಿವೆ. ಪ್ರತಿ ಬೂತ್ನಲ್ಲಿ 150 ರಿಂದ 400 ಮನೆಗಳ ಸರ್ವೆ ಕಾರ್ಯ ನಡೆಯುತ್ತಿದೆ’ ಎಂದು ಸುಧಾಕರ್ ತಿಳಿಸಿದರು.</p>.<p><strong>8 ವಲಯಗಳ ಸಭೆ: </strong>ಮುಖ್ಯಮಂತ್ರಿ ಯಡಿಯೂರಪ್ಪ ಅವರು ಬುಧವಾರ ಮತ್ತು ಗುರುವಾರ ತಲಾ ನಾಲ್ಕು ವಲಯಗಳಂತೆ ಎಂಟು ವಲಯಗಳ ಸಭೆಗಳನ್ನು ನಡೆಸಲಿದ್ದಾರೆ ಎಂದು ಹೇಳಿದರು.</p>.<p>ವೈದ್ಯಕೀಯ ಉಪಕರಣಗಳ ಖರೀದಿ ಮತ್ತು ವೆಚ್ಚಗಳ ಬಗ್ಗೆ ಮುಖ್ಯಮಂತ್ರಿ ಅವರೇ ಇನ್ನೆರಡು ದಿನಗಳಲ್ಲಿ ಸುದ್ದಿಗೋಷ್ಠಿನಡೆಸಿ ದಾಖಲೆಗಳ ಸಮೇತ ಕಾಂಗ್ರೆಸ್ ಅಪಪ್ರಚಾರಕ್ಕೆ ಉತ್ತರ ನೀಡಲಿದ್ದಾರೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಮಂಗಳವಾರ ರಾತ್ರಿಯೇ ಲಾಕ್ಡೌನ್ ಅಂತ್ಯಗೊಳ್ಳಲಿದೆ. ಅದನ್ನು ಮುಂದುವರಿಸುವ ಪ್ರಶ್ನೆಯೇ ಇಲ್ಲ’ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.</p>.<p>ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನ ಎಂಟು ವಲಯಗಳ ಕೋವಿಡ್ ಉಸ್ತುವಾರಿ ಸಚಿವರ ಸಭೆ ಸೋಮವಾರ ನಡೆಯಿತು.</p>.<p>ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಬುಧವಾರದಿಂದ ಜನ ಜೀವನ ಮತ್ತು ಚಟುವಟಿಕೆಗಳು ಸಾಮಾನ್ಯವಾಗಿರಲಿವೆ. ಆದರೆ, ರಾತ್ರಿ 8ರಿಂದ ಬೆಳಗ್ಗೆ 5 ಗಂಟೆವರೆಗೆ ಕರ್ಫ್ಯೂ ಮುಂದುವರಿಯಲಿದೆ’ ಎಂದರು.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/karnataka-news/coronavirus-testing-and-total-cases-in-karnataka-746715.html" target="_blank">ಕೊರೊನಾ: ಹೆಚ್ಚಾದ ಪರೀಕ್ಷೆ, ಪ್ರಕರಣ ಕಡಿಮೆ</a></p>.<p>‘ಉಳಿದ ಜಿಲ್ಲೆಗಳಲ್ಲೂ ಲಾಕ್ಡೌನ್ ಮುಂದುವರಿಸುವ ಸಾಧ್ಯತೆ ಇಲ್ಲ. ಕೆಲವೆಡೆ ಪರಿಸ್ಥಿತಿ ಆಧರಿಸಿ ಜಿಲ್ಲಾಡಳಿತ ತೀರ್ಮಾನ ತೆಗೆದುಕೊಳ್ಳಲಿದೆ. ಈ ಹಿಂದಿನ ಆದೇಶದಂತೆ ಭಾನುವಾರಗಳಂದು ಲಾಕ್ಡೌನ್ ಇರುತ್ತದೆ. ಇದಕ್ಕೆ ಸಂಬಂಧಿಸಿದಂತೆ ಪ್ರತ್ಯೇಕ ಮಾರ್ಗಸೂಚಿ ಹೊರಡಿಸಲಾಗುವುದು’ಎಂದು ಅವರು ಹೇಳಿದರು.</p>.<p>‘ರಾಷ್ಟ್ರೀಯ ಆರೋಗ್ಯ ಮಿಷನ್ (ಎನ್ಎಂಎಚ್) ಅಡಿ ನೇಮಕಗೊಂಡಿರುವ ವೈದ್ಯರ ವೇತನವನ್ನು ₹25 ಸಾವಿರದಿಂದ ₹45 ಸಾವಿರಕ್ಕೆ ಏರಿಕೆ ಮಾಡಲು ತೀರ್ಮಾನಿಸಲಾಗಿದೆ. ಆರು ತಿಂಗಳವರೆಗೆ ರಾಜ್ಯ ಸರ್ಕಾರವೇ ಪೂರ್ಣ ವೇತನ ಭರಿಸಲಿದೆ. ಮುಂದೆ ಕೇಂದ್ರದ ಜತೆ ಹೊಸ ಒಪ್ಪಂದ ಮಾಡಿಕೊಳ್ಳಲಾಗುವುದು. ಈ ವೈದ್ಯರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು 60:40ರ ಅನುಪಾತದಲ್ಲಿ ವೇತನ ಭರಿಸುತ್ತಿವೆ’ ಎಂದು ಹೇಳಿದರು.</p>.<p>‘ಬೆಂಗಳೂರಿನ ಎಂಟು ವಲಯಗಳಿಗೆ ಸಚಿವರನ್ನು ಉಸ್ತುವಾರಿಗಳನ್ನಾಗಿ ನೇಮಿಸಿದ ಬಳಿಕ ಬೂತ್ ಮಟ್ಟದಲ್ಲಿ ಕಾರ್ಯಪಡೆಗಳು ಹೆಚ್ಚು ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸುತ್ತಿವೆ. ಪ್ರತಿ ಬೂತ್ನಲ್ಲಿ 150 ರಿಂದ 400 ಮನೆಗಳ ಸರ್ವೆ ಕಾರ್ಯ ನಡೆಯುತ್ತಿದೆ’ ಎಂದು ಸುಧಾಕರ್ ತಿಳಿಸಿದರು.</p>.<p><strong>8 ವಲಯಗಳ ಸಭೆ: </strong>ಮುಖ್ಯಮಂತ್ರಿ ಯಡಿಯೂರಪ್ಪ ಅವರು ಬುಧವಾರ ಮತ್ತು ಗುರುವಾರ ತಲಾ ನಾಲ್ಕು ವಲಯಗಳಂತೆ ಎಂಟು ವಲಯಗಳ ಸಭೆಗಳನ್ನು ನಡೆಸಲಿದ್ದಾರೆ ಎಂದು ಹೇಳಿದರು.</p>.<p>ವೈದ್ಯಕೀಯ ಉಪಕರಣಗಳ ಖರೀದಿ ಮತ್ತು ವೆಚ್ಚಗಳ ಬಗ್ಗೆ ಮುಖ್ಯಮಂತ್ರಿ ಅವರೇ ಇನ್ನೆರಡು ದಿನಗಳಲ್ಲಿ ಸುದ್ದಿಗೋಷ್ಠಿನಡೆಸಿ ದಾಖಲೆಗಳ ಸಮೇತ ಕಾಂಗ್ರೆಸ್ ಅಪಪ್ರಚಾರಕ್ಕೆ ಉತ್ತರ ನೀಡಲಿದ್ದಾರೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>