<p>ಬೆಂಗಳೂರು: ‘ವಿದೇಶಿ ಶೈಲಿ’ಯಲ್ಲಿ ಪ್ರೇಮ ನಿವೇದನೆ ಮಾಡುವುದಾಗಿ ನಂಬಿಸಿ, ಪ್ರಿಯಕರನನ್ನು ಮನೆಗೆ ಕರೆಸಿಕೊಂಡು ಸೀಮೆಎಣ್ಣೆ ಹಾಗೂ ಪೆಟ್ರೋಲ್ ಸುರಿದು ಸುಟ್ಟುಹಾಕಿದ್ದ ಪ್ರಕರಣದ ಆರೋಪಿ, ಅಂಜನಾನಗರದ ನಿವಾಸಿ ಪ್ರೇಮಾ (27) ಅವರನ್ನು ಬ್ಯಾಡರಹಳ್ಳಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಹೆಚ್ಚಿನ ವಿಚಾರಣೆಗಾಗಿ ಮೂರು ದಿನ ತಮ್ಮ ಕಸ್ಟಡಿಗೆ ಪಡೆದುಕೊಂಡಿದ್ದಾರೆ.</p>.<p>ತುಮಕೂರು ಜಿಲ್ಲೆ ಲಿಂಗನಹಳ್ಳಿಯ ನಿವಾಸಿ ಕಿರಣ್ (27) ಅವರನ್ನು ಅಂಜನಾನಗರದ ಮನೆಗೆ ಮಂಗಳವಾರ ಮಧ್ಯಾಹ್ನ ಕರೆಸಿಕೊಂಡು ಕೈ–ಕಾಲು ಕಟ್ಟಿ ಸುಟ್ಟು ಹಾಕಲಾಗಿತ್ತು.</p>.<p>ವಿಕ್ಟೋರಿಯಾ ಆಸ್ಪತ್ರೆಯ ಶವಾಗಾರದಲ್ಲಿ ಬುಧವಾರ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಯಿತು.</p>.<p>ಪ್ರಕರಣದ ತನಿಖೆಗೆ ವಿಶೇಷ ತಂಡ ರಚಿಸಲಾಗಿದ್ದು, ಆ ತಂಡವು ಆರೋಪಿಯ ವಿಚಾರಣೆ ನಡೆಸುತ್ತಿದೆ ಎಂದು ಪೊಲೀಸರು ಹೇಳಿದರು.</p>.<p><strong>ತಪ್ಪೊಪ್ಪಿಗೆ</strong>: ‘ಕಿರಣ್ ಹಾಗೂನಾನು ರಾಜಾಜಿನಗರದ ವಿ.ಐ ಸ್ಟೋರ್ನಲ್ಲಿ (ಟೆಲಿಕಾಂ ಸೇವಾ ಪೂರೈಕೆ ಸಂಸ್ಥೆ) ಕೆಲಸ ಮಾಡುತ್ತಿದ್ದೆವು. ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದೆವು. ಒಟ್ಟಿಗೆ ಸುತ್ತಾಟ ನಡೆಸುತ್ತಿದ್ದೆವು. ಕಿರಣ್ ಇತ್ತೀಚೆಗೆ ನನ್ನನ್ನು ನಿರ್ಲಕ್ಷ್ಯ ಮಾಡುತ್ತಿದ್ದರು. ನನ್ನನ್ನು ದೂರ ಮಾಡುತ್ತಾರೆ ಎಂಬ ಆತಂಕದಿಂದಲೇ ಕೊಲೆಮಾಡಿ, ನಾನೂ ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧರಿಸಿದ್ದೆ ಎಂಬುದಾಗಿ ವಿಚಾರಣೆ ವೇಳೆ ಪ್ರೇಮಾ ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದಾರೆ’ ಎಂದು ತನಿಖಾ ತಂಡದ ಮೂಲಗಳು ತಿಳಿಸಿವೆ.</p>.<p>‘ಫೆಬ್ರುವರಿ 14ರಂದು ಪ್ರೇಮಾ ಅವರು ತನ್ನ ಪ್ರೀತಿಯನ್ನು ಕಿರಣ್ಗೆ ತಿಳಿಸಿದ್ದರು. ಕಿರಣ್ ಸಹ ಒಪ್ಪಿಕೊಂಡಿದ್ದರು. ಪ್ರಿಯಕರನಿಗಾಗಿ ಪ್ರೇಮಾ ₹4.50 ಲಕ್ಷ ಮೌಲ್ಯದ ಬೈಕ್ ಹಾಗೂ ಮೊಬೈಲ್ ಫೋನ್ ಕೊಡಿಸಲು ಮುಂದಾಗಿದ್ದರು. ಇಬ್ಬರೂ ಸೇರಿ ಬೈಕ್ ಶೋರೂಂವೊಂದಕ್ಕೆ ಹೋಗಿ ಬಂದಿದ್ದರು’ ಎಂದು ಮೂಲಗಳು ಹೇಳಿವೆ.</p>.<p>‘ಕಿರಣ್ ಇತ್ತೀಚೆಗೆ ಪ್ರೇಮಾ ಅವರಿಂದ ಅಂತರ ಕಾಯ್ದುಕೊಳ್ಳಲು ಶುರುಮಾಡಿದ್ದರು. ಈ ವಿಚಾರವು ಪ್ರೇಮಾಗೆ ಬೇಸರ ತರಿಸಿತ್ತು. ಮದುವೆ ಮಾಡಿಕೊಳ್ಳುವಂತೆ ಪ್ರೇಮಾ ಮನೆಯಲ್ಲಿ ಒತ್ತಡ ಹಾಕುತ್ತಿದ್ದರು. ಈ ವಿಚಾರವನ್ನು ಪ್ರೇಮಾ, ಕಿರಣ್ಗೆ ತಿಳಿಸಿದ್ದರು. ಕಿರಣ್ ಮದುವೆ ಪ್ರಸ್ತಾಪವನ್ನು ಮುಂದೂಡುತ್ತಿದ್ದರು. ಇಬ್ಬರ ಮಧ್ಯೆ ಆಗಾಗ್ಗೆ ಗಲಾಟೆ ನಡೆಯುತ್ತಿತ್ತು. ಆಗ ಪ್ರಿಯಕರನನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧರಿಸಿದ್ದರು. ಅದಕ್ಕಾಗಿಯೇ ಪೆಟ್ರೋಲ್ ಮತ್ತು ಸೀಮೆಎಣ್ಣೆಯನ್ನು ಮೊದಲೇ ಖರೀದಿಸಿ ಮನೆಗೆ ತಂದಿಟ್ಟಿದ್ದರು’ ಎಂದು ಮೂಲಗಳು ಹೇಳಿವೆ.</p>.<p>‘ವಿದೇಶಿ ಶೈಲಿ’ಯಲ್ಲಿ ಪ್ರೇಮ ನಿವೇದನೆ ಮಾಡುವುದಾಗಿ ನಂಬಿಸಿ ಮಂಗಳವಾರ ಪ್ರಿಯಕರನನ್ನು ಮನೆಗೆ ಕರೆಸಿಕೊಂಡಿದ್ದರು. ಪ್ರಿಯಕರನ ಮೈಮೇಲೆ ಪೆಟ್ರೋಲ್ ಹಾಗೂ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ ಬಳಿಕ ಪ್ರೇಮಾ ಸಹ ಅದೇ ಬೆಂಕಿಯಲ್ಲಿ ಆಹುತಿಯಾಗಲು ನಿರ್ಧರಿಸಿದ್ದರು. ಬೆಂಕಿಯಿಂದ ಬದುಕುಳಿದರೆ ಆತ್ಮಹತ್ಯೆ ಮಾಡಿಕೊಳ್ಳಲು ವಿಷದ ಬಾಟಲಿ ಹಾಗೂ ಮಾತ್ರೆಗಳನ್ನು ಸಿದ್ಧಪಡಿಸಿಕೊಂಡಿದ್ದರು. ಆದರೆ, ಕಿರಣ್ ಬೆಂಕಿಯಲ್ಲಿ ನರಳುತ್ತಾ ಕಿರುಚಾಡುತ್ತಿದ್ದಾಗ ಪ್ರೇಮಾ ಭಯ ಬಿದ್ದು ಹೊರಕ್ಕೆ ಓಡಿಬಂದಿದ್ದರು. ಅರೆಬರೆ ಬಟ್ಟೆಯಲ್ಲಿದ್ದ ಆಕೆಯನ್ನು ಕಂಡು ಪಕ್ಕದ ಮನೆಯವರು ಬಟ್ಟೆ ನೀಡಿ ರಕ್ಷಿಸಿ, ಪೊಲೀಸರಿಗೆ ಮಾಹಿತಿ ನೀಡಿದ್ದರು’ ಎಂದು ಮೂಲಗಳು ಹೇಳಿವೆ.</p>.ವಿದೇಶಿ ಶೈಲಿಯಲ್ಲಿ ಪ್ರೇಮ ನಿವೇದನೆ: ಕೈ-ಕಾಲು ಕಟ್ಟಿ ಪ್ರಿಯಕರನ ಸುಟ್ಟಳು....<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260423-51-1573664807</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ‘ವಿದೇಶಿ ಶೈಲಿ’ಯಲ್ಲಿ ಪ್ರೇಮ ನಿವೇದನೆ ಮಾಡುವುದಾಗಿ ನಂಬಿಸಿ, ಪ್ರಿಯಕರನನ್ನು ಮನೆಗೆ ಕರೆಸಿಕೊಂಡು ಸೀಮೆಎಣ್ಣೆ ಹಾಗೂ ಪೆಟ್ರೋಲ್ ಸುರಿದು ಸುಟ್ಟುಹಾಕಿದ್ದ ಪ್ರಕರಣದ ಆರೋಪಿ, ಅಂಜನಾನಗರದ ನಿವಾಸಿ ಪ್ರೇಮಾ (27) ಅವರನ್ನು ಬ್ಯಾಡರಹಳ್ಳಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಹೆಚ್ಚಿನ ವಿಚಾರಣೆಗಾಗಿ ಮೂರು ದಿನ ತಮ್ಮ ಕಸ್ಟಡಿಗೆ ಪಡೆದುಕೊಂಡಿದ್ದಾರೆ.</p>.<p>ತುಮಕೂರು ಜಿಲ್ಲೆ ಲಿಂಗನಹಳ್ಳಿಯ ನಿವಾಸಿ ಕಿರಣ್ (27) ಅವರನ್ನು ಅಂಜನಾನಗರದ ಮನೆಗೆ ಮಂಗಳವಾರ ಮಧ್ಯಾಹ್ನ ಕರೆಸಿಕೊಂಡು ಕೈ–ಕಾಲು ಕಟ್ಟಿ ಸುಟ್ಟು ಹಾಕಲಾಗಿತ್ತು.</p>.<p>ವಿಕ್ಟೋರಿಯಾ ಆಸ್ಪತ್ರೆಯ ಶವಾಗಾರದಲ್ಲಿ ಬುಧವಾರ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಯಿತು.</p>.<p>ಪ್ರಕರಣದ ತನಿಖೆಗೆ ವಿಶೇಷ ತಂಡ ರಚಿಸಲಾಗಿದ್ದು, ಆ ತಂಡವು ಆರೋಪಿಯ ವಿಚಾರಣೆ ನಡೆಸುತ್ತಿದೆ ಎಂದು ಪೊಲೀಸರು ಹೇಳಿದರು.</p>.<p><strong>ತಪ್ಪೊಪ್ಪಿಗೆ</strong>: ‘ಕಿರಣ್ ಹಾಗೂನಾನು ರಾಜಾಜಿನಗರದ ವಿ.ಐ ಸ್ಟೋರ್ನಲ್ಲಿ (ಟೆಲಿಕಾಂ ಸೇವಾ ಪೂರೈಕೆ ಸಂಸ್ಥೆ) ಕೆಲಸ ಮಾಡುತ್ತಿದ್ದೆವು. ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದೆವು. ಒಟ್ಟಿಗೆ ಸುತ್ತಾಟ ನಡೆಸುತ್ತಿದ್ದೆವು. ಕಿರಣ್ ಇತ್ತೀಚೆಗೆ ನನ್ನನ್ನು ನಿರ್ಲಕ್ಷ್ಯ ಮಾಡುತ್ತಿದ್ದರು. ನನ್ನನ್ನು ದೂರ ಮಾಡುತ್ತಾರೆ ಎಂಬ ಆತಂಕದಿಂದಲೇ ಕೊಲೆಮಾಡಿ, ನಾನೂ ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧರಿಸಿದ್ದೆ ಎಂಬುದಾಗಿ ವಿಚಾರಣೆ ವೇಳೆ ಪ್ರೇಮಾ ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದಾರೆ’ ಎಂದು ತನಿಖಾ ತಂಡದ ಮೂಲಗಳು ತಿಳಿಸಿವೆ.</p>.<p>‘ಫೆಬ್ರುವರಿ 14ರಂದು ಪ್ರೇಮಾ ಅವರು ತನ್ನ ಪ್ರೀತಿಯನ್ನು ಕಿರಣ್ಗೆ ತಿಳಿಸಿದ್ದರು. ಕಿರಣ್ ಸಹ ಒಪ್ಪಿಕೊಂಡಿದ್ದರು. ಪ್ರಿಯಕರನಿಗಾಗಿ ಪ್ರೇಮಾ ₹4.50 ಲಕ್ಷ ಮೌಲ್ಯದ ಬೈಕ್ ಹಾಗೂ ಮೊಬೈಲ್ ಫೋನ್ ಕೊಡಿಸಲು ಮುಂದಾಗಿದ್ದರು. ಇಬ್ಬರೂ ಸೇರಿ ಬೈಕ್ ಶೋರೂಂವೊಂದಕ್ಕೆ ಹೋಗಿ ಬಂದಿದ್ದರು’ ಎಂದು ಮೂಲಗಳು ಹೇಳಿವೆ.</p>.<p>‘ಕಿರಣ್ ಇತ್ತೀಚೆಗೆ ಪ್ರೇಮಾ ಅವರಿಂದ ಅಂತರ ಕಾಯ್ದುಕೊಳ್ಳಲು ಶುರುಮಾಡಿದ್ದರು. ಈ ವಿಚಾರವು ಪ್ರೇಮಾಗೆ ಬೇಸರ ತರಿಸಿತ್ತು. ಮದುವೆ ಮಾಡಿಕೊಳ್ಳುವಂತೆ ಪ್ರೇಮಾ ಮನೆಯಲ್ಲಿ ಒತ್ತಡ ಹಾಕುತ್ತಿದ್ದರು. ಈ ವಿಚಾರವನ್ನು ಪ್ರೇಮಾ, ಕಿರಣ್ಗೆ ತಿಳಿಸಿದ್ದರು. ಕಿರಣ್ ಮದುವೆ ಪ್ರಸ್ತಾಪವನ್ನು ಮುಂದೂಡುತ್ತಿದ್ದರು. ಇಬ್ಬರ ಮಧ್ಯೆ ಆಗಾಗ್ಗೆ ಗಲಾಟೆ ನಡೆಯುತ್ತಿತ್ತು. ಆಗ ಪ್ರಿಯಕರನನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧರಿಸಿದ್ದರು. ಅದಕ್ಕಾಗಿಯೇ ಪೆಟ್ರೋಲ್ ಮತ್ತು ಸೀಮೆಎಣ್ಣೆಯನ್ನು ಮೊದಲೇ ಖರೀದಿಸಿ ಮನೆಗೆ ತಂದಿಟ್ಟಿದ್ದರು’ ಎಂದು ಮೂಲಗಳು ಹೇಳಿವೆ.</p>.<p>‘ವಿದೇಶಿ ಶೈಲಿ’ಯಲ್ಲಿ ಪ್ರೇಮ ನಿವೇದನೆ ಮಾಡುವುದಾಗಿ ನಂಬಿಸಿ ಮಂಗಳವಾರ ಪ್ರಿಯಕರನನ್ನು ಮನೆಗೆ ಕರೆಸಿಕೊಂಡಿದ್ದರು. ಪ್ರಿಯಕರನ ಮೈಮೇಲೆ ಪೆಟ್ರೋಲ್ ಹಾಗೂ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ ಬಳಿಕ ಪ್ರೇಮಾ ಸಹ ಅದೇ ಬೆಂಕಿಯಲ್ಲಿ ಆಹುತಿಯಾಗಲು ನಿರ್ಧರಿಸಿದ್ದರು. ಬೆಂಕಿಯಿಂದ ಬದುಕುಳಿದರೆ ಆತ್ಮಹತ್ಯೆ ಮಾಡಿಕೊಳ್ಳಲು ವಿಷದ ಬಾಟಲಿ ಹಾಗೂ ಮಾತ್ರೆಗಳನ್ನು ಸಿದ್ಧಪಡಿಸಿಕೊಂಡಿದ್ದರು. ಆದರೆ, ಕಿರಣ್ ಬೆಂಕಿಯಲ್ಲಿ ನರಳುತ್ತಾ ಕಿರುಚಾಡುತ್ತಿದ್ದಾಗ ಪ್ರೇಮಾ ಭಯ ಬಿದ್ದು ಹೊರಕ್ಕೆ ಓಡಿಬಂದಿದ್ದರು. ಅರೆಬರೆ ಬಟ್ಟೆಯಲ್ಲಿದ್ದ ಆಕೆಯನ್ನು ಕಂಡು ಪಕ್ಕದ ಮನೆಯವರು ಬಟ್ಟೆ ನೀಡಿ ರಕ್ಷಿಸಿ, ಪೊಲೀಸರಿಗೆ ಮಾಹಿತಿ ನೀಡಿದ್ದರು’ ಎಂದು ಮೂಲಗಳು ಹೇಳಿವೆ.</p>.ವಿದೇಶಿ ಶೈಲಿಯಲ್ಲಿ ಪ್ರೇಮ ನಿವೇದನೆ: ಕೈ-ಕಾಲು ಕಟ್ಟಿ ಪ್ರಿಯಕರನ ಸುಟ್ಟಳು....<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260423-51-1573664807</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>