<p>ಬೆಂಗಳೂರು: ನಗರದ ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯದ ಮಹಿಳಾ ಸಿಬ್ಬಂದಿ ಮತ್ತು ವಿದ್ಯಾರ್ಥಿನಿಯರ ಮೇಲೆ ಆಗುತ್ತಿರುವ ಮಾನಸಿಕ ಕಿರುಕುಳವನ್ನು ಖಂಡಿಸಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯರ ಕ್ಷೇಮಾಭಿವೃದ್ಧಿ ಒಕ್ಕೂಟ ಹಾಗೂ ರಾಷ್ಟ್ರೀಯ ಅಂಬೇಡ್ಕರ್ ಸೇನೆ ವತಿಯಿಂದ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸಲಾಯಿತು.</p>.<p>ಮಾನಸಿಕ ಕಿರುಕುಳ ನೀಡುತ್ತಿರುವ ವಿಶ್ವವಿದ್ಯಾಲಯದ ಹಣಕಾಸು ಅಧಿಕಾರಿ ಎಂ.ಎಸ್. ಚೇತನ್ ಕುಮಾರ್ ಅವರನ್ನು ಅಮಾನತುಗೊಳಿಸುವಂತೆ ವಿದ್ಯಾರ್ಥಿನಿಯರು ಹಾಗೂ ಅತಿಥಿ ಉಪನ್ಯಾಸಕರು ಆಗ್ರಹಿಸಿದರು.</p>.<p>‘ಅತಿಥಿ ಉಪನ್ಯಾಸಕಿಯರ ವೈಯಕ್ತಿಕ ವಿಚಾರಗಳ ಬಗ್ಗೆ ಮಾತನಾಡಿ ಮಾನಸಿಕವಾಗಿ ಹಿಂಸಿಸುವುದು, ಮೂರು ತಿಂಗಳಿಂದಲೂ ಸಂಬಳ ನೀಡದೆ ಸತಾಯಿಸುವುದು, ಸಮಸ್ಯೆ ಕೇಳಲು ಹೋದ ಉಪನ್ಯಾಸಕಿ ಹಾಗೂ ವಿದ್ಯಾರ್ಥಿನಿಯರಿಗೆ ದೂರು ನೀಡಿ ಬಂಧಿಸುವಂತೆ ಮಾಡುತ್ತೇನೆ ಎಂದು ಅಧಿಕಾರಿ ಹೆದರಿಸುತ್ತಿದ್ದಾರೆ’ ಎಂದು ಪ್ರತಿಭಟನಕಾರರು ಆರೋಪಿಸಿದರು.</p>.<p>‘ಮಹಿಳಾ ಆಯೋಗ ಮತ್ತು ಕುಲಪತಿಗೆ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಈಗಲಾದರೂ ಸರ್ಕಾರ ಹಾಗೂ ರಾಜ್ಯಪಾಲರು ಮಧ್ಯ ಪ್ರವೇಶಿಸಿ ಸಮಸ್ಯೆ ಇತ್ಯರ್ಥಪಡಿಸಬೇಕು’ ಎಂದು ರಾಷ್ಟ್ರೀಯ ಅಂಬೇಡ್ಕರ್ ಸೇನೆ ಅಧ್ಯಕ್ಷ ಅರ್ಜುನ್ ಗೋಪಾಲಯ್ಯ ಆಗ್ರಹಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260527-4-2067966441</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ನಗರದ ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯದ ಮಹಿಳಾ ಸಿಬ್ಬಂದಿ ಮತ್ತು ವಿದ್ಯಾರ್ಥಿನಿಯರ ಮೇಲೆ ಆಗುತ್ತಿರುವ ಮಾನಸಿಕ ಕಿರುಕುಳವನ್ನು ಖಂಡಿಸಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯರ ಕ್ಷೇಮಾಭಿವೃದ್ಧಿ ಒಕ್ಕೂಟ ಹಾಗೂ ರಾಷ್ಟ್ರೀಯ ಅಂಬೇಡ್ಕರ್ ಸೇನೆ ವತಿಯಿಂದ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸಲಾಯಿತು.</p>.<p>ಮಾನಸಿಕ ಕಿರುಕುಳ ನೀಡುತ್ತಿರುವ ವಿಶ್ವವಿದ್ಯಾಲಯದ ಹಣಕಾಸು ಅಧಿಕಾರಿ ಎಂ.ಎಸ್. ಚೇತನ್ ಕುಮಾರ್ ಅವರನ್ನು ಅಮಾನತುಗೊಳಿಸುವಂತೆ ವಿದ್ಯಾರ್ಥಿನಿಯರು ಹಾಗೂ ಅತಿಥಿ ಉಪನ್ಯಾಸಕರು ಆಗ್ರಹಿಸಿದರು.</p>.<p>‘ಅತಿಥಿ ಉಪನ್ಯಾಸಕಿಯರ ವೈಯಕ್ತಿಕ ವಿಚಾರಗಳ ಬಗ್ಗೆ ಮಾತನಾಡಿ ಮಾನಸಿಕವಾಗಿ ಹಿಂಸಿಸುವುದು, ಮೂರು ತಿಂಗಳಿಂದಲೂ ಸಂಬಳ ನೀಡದೆ ಸತಾಯಿಸುವುದು, ಸಮಸ್ಯೆ ಕೇಳಲು ಹೋದ ಉಪನ್ಯಾಸಕಿ ಹಾಗೂ ವಿದ್ಯಾರ್ಥಿನಿಯರಿಗೆ ದೂರು ನೀಡಿ ಬಂಧಿಸುವಂತೆ ಮಾಡುತ್ತೇನೆ ಎಂದು ಅಧಿಕಾರಿ ಹೆದರಿಸುತ್ತಿದ್ದಾರೆ’ ಎಂದು ಪ್ರತಿಭಟನಕಾರರು ಆರೋಪಿಸಿದರು.</p>.<p>‘ಮಹಿಳಾ ಆಯೋಗ ಮತ್ತು ಕುಲಪತಿಗೆ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಈಗಲಾದರೂ ಸರ್ಕಾರ ಹಾಗೂ ರಾಜ್ಯಪಾಲರು ಮಧ್ಯ ಪ್ರವೇಶಿಸಿ ಸಮಸ್ಯೆ ಇತ್ಯರ್ಥಪಡಿಸಬೇಕು’ ಎಂದು ರಾಷ್ಟ್ರೀಯ ಅಂಬೇಡ್ಕರ್ ಸೇನೆ ಅಧ್ಯಕ್ಷ ಅರ್ಜುನ್ ಗೋಪಾಲಯ್ಯ ಆಗ್ರಹಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260527-4-2067966441</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>